ಕೊರಟಗೆರೆ: ತಾಲೂಕಿನ ಮಾವತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಕೀಲ ಎಂ.ಎ. ರವಿ ಉಪಾಧ್ಯಕ್ಷರಾಗಿ ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೊರಟಗೆರೆ: ತಾಲೂಕಿನ ಮಾವತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಕೀಲ ಎಂ.ಎ. ರವಿ ಉಪಾಧ್ಯಕ್ಷರಾಗಿ ರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಮಾವತ್ತೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸುಮಾರು ೩೫ಕ್ಕೂ ಹೆಚ್ಚು ರೈತರು ಹಾಲು ಹಾಕುತ್ತಿದ್ದು, ಪ್ರತಿದಿನ ಸುಮಾರು ೧೬೦೦ ಲೀ ಹಾಲು ಶೇಖರಣೆ ಮಾಡಲಾಗುತ್ತಿದ್ದು, ಇದರಿಂದ ಸಾಕಷ್ಟು ರೈತರು ಅನುಕೂಲ ಪಡೆಯುತ್ತಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರು ಹಾಗೂ ಊರಿನ ಮುಖಂಡರ ಸಹಕಾರದಿಂದ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದರು.ಇದೆ ವೇಳೆ ಉಪಾಧ್ಯಕ್ಷರಾದ ರಮೇಶ್, ನಿರ್ದೇಶಕರಾದ ವೆಂಕಟೇಶ್, ಶ್ರೀನಿವಾಸ್, ನಾಗರಾಜ್, ಕಾಳಪ್ಪ, ಸುವರ್ಣಮ್ಮ, ಮುಖಂಡರಾದ ಅರಸಪ್ಪ, ಚೇತನ್, ನಟರಾಜ್, ವೆಂಕಟೇಶ್, ಸಿದ್ದಪ್ಪ ಸೇರಿದಂತೆ ಇತರರು ಇದ್ದರು.