ನಗರದಲ್ಲಿ ಈಗಾಗಲೇ 30 ಘೋಷಿತ ಕೊಳಚೆ ಪ್ರದೇಶಗಳಿದ್ದು ಇದಕ್ಕೆ ಮತ್ತಷ್ಟು ಪ್ರದೇಶಗಳು ಸೇರ್ಪಡೆಯಾಗುವ ಲಕ್ಷಣಗಳನ್ನು ಹೊಂದಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸರ್ವೆ ಮೂಲಕ ಗುರುತಿಸಿ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಜೊತೆಗೆ ಸೇರಿ ಅಗತ್ಯ ಕ್ರಮ ವಹಿಸಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುನಗರದಲ್ಲಿ ಈಗಾಗಲೇ 30 ಘೋಷಿತ ಕೊಳಚೆ ಪ್ರದೇಶಗಳಿದ್ದು ಇದಕ್ಕೆ ಮತ್ತಷ್ಟು ಪ್ರದೇಶಗಳು ಸೇರ್ಪಡೆಯಾಗುವ ಲಕ್ಷಣಗಳನ್ನು ಹೊಂದಿದ್ದು ಪಾಲಿಕೆ ಅಧಿಕಾರಿಗಳು ಅದನ್ನು ಸರ್ವೆ ಮೂಲಕ ಗುರುತಿಸಿ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು ಜೊತೆಗೆ ಸೇರಿ ಅಗತ್ಯ ಕ್ರಮ ವಹಿಸಬೇಕೆಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರು ಸೂಚನೆ ನೀಡಿದರು. ಅವರು ತುಮಕೂರು ಮಹಾನಗರಪಾಲಿಕೆಯಲ್ಲಿ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆರೆಯಂಗಳದಲ್ಲಿರುವ ನಿರಾಶ್ರಿತರಿಗೆ ಬೇರೆಡೆಗೆ ವಸತಿ ಸೌಲಭ್ಯ ಕಲ್ಪಿಸಿದ ನಂತರವೇ ಸ್ವತ್ತನ್ನು ಸರ್ಕಾರದನ್ವಯ ಸ್ವಾಧೀನಪಡಿಸುವ ಪ್ರಕ್ರಿಯೆ ಮಾಡಬೇಕೆಂದರು. ಅವರು ತುಮಕೂರು ನಗರವು ಜಿಲ್ಲಾ ಕೇಂದ್ರವಾಗಿರುವುದರಿಂದ ವಸತಿ ವಂಚಿತರ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ವಸತಿ ಯೋಜನೆಗೆ ಭೂಮಿಯನ್ನು ಮೀಸಲು ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ವಿವಿಧ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಲು ಕೆಲವು ಸ್ವತ್ತುಗಳನ್ನು ಸರ್ಕಾರದಿಂದ ಮೀಸಲಿಡಲಾಗಿದ್ದು, ಇಂತಹ ಸ್ವತ್ತುಗಳನ್ನು ಸ್ಥಳ ಪರಿಶೀಲನೆ ಮಾಡಿ, ಸಾಧಕ-ಬಾಧಕಗಳ ಬಗ್ಗೆ ತಿಳಿಸುವಂತೆ ಶಾಸಕರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಆಶ್ರಯ ಸಮಿತಿ ಸಭೆಯಲ್ಲಿ ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಶುಭ, ತುಮಕೂರು ತಾಲೂಕು ತಹಶೀಲ್ದಾರರಾದ ರಾಜೇಶ್ವರಿ, ಡಿ.ಯು.ಡಿ.ಸಿ ಯೋಜನಾ ನಿರ್ದೇಶಕ ಯೋಗಾನಂದ, ಪಾಲಿಕೆ ಉಪ-ಆಯುಕ್ತ ಮನು, ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮಹಾನಗರಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.