ಕನ್ನಡಪ್ರಭ ವಾರ್ತೆ ಅಥಣಿ ಜನವರಿ 15ರಂದು ಸಂಕ್ರಾಂತಿ ಸಂಭ್ರಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರದಲ್ಲಿ ಹರಜಾತ್ರಾ ಮಹೋತ್ಸವ -2026 ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಅಥಣಿ ಹಾಗೂ ಸುತ್ತಮುತ್ತಲಿನ ತಾಲೂಕಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಶಾಲಿ ಪೀಠದ ವಚನಾನಂದ ಸ್ವಾಮೀಜಿ ಕೋರಿದರು.
ಕನ್ನಡಪ್ರಭ ವಾರ್ತೆ ಅಥಣಿ
ಜನವರಿ 15ರಂದು ಸಂಕ್ರಾಂತಿ ಸಂಭ್ರಮದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರದಲ್ಲಿ ಹರಜಾತ್ರಾ ಮಹೋತ್ಸವ -2026 ವಿಶಿಷ್ಟ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಅಥಣಿ ಹಾಗೂ ಸುತ್ತಮುತ್ತಲಿನ ತಾಲೂಕಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಶಾಲಿ ಪೀಠದ ವಚನಾನಂದ ಸ್ವಾಮೀಜಿ ಕೋರಿದರು.ಪಟ್ಟಣದಲ್ಲಿ ಹರಜಾತ್ರಾ ಮಹೋತ್ಸವದ ಕರಪತ್ರಗಳನ್ನು ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹರಿಹರ ಜಗದ್ಗುರು ಪೀಠದಲ್ಲಿ ಪ್ರತಿವರ್ಷ ವಿವಿಧ ಧಾರ್ಮಿಕ ಹಾಗೂ ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಹಿಂದಿನ ವರ್ಷದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಮೇಳ ನಡೆಸುವ ಮೂಲಕ ನೂರಾರು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ ಜಯಶಾಲಿಯಾದ ಕಿತ್ತೂರಿನ ವೀರರಾಣಿ ಚನ್ನಮ್ಮಳ ವಿಜಯೋತ್ಸವದ ದ್ವಿಶತಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ವೀರಶೈವ ಲಿಂಗಾಯತ ಪಂಚಮ ಶಾಲೆಯ ಅಭಿವೃದ್ಧಿ ಸೇವಾ ಸಮಿತಿ ಅಧ್ಯಕ್ಷ ಶಿವಾನಂದ ಗುಡ್ಡಾಪುರ ಮಾತನಾಡಿ, ಹರಿಹರ ಪೀಠದ ಪೀಠಾಧ್ಯಕ್ಷರಾಗಿದ್ದ ಲಿಂ.ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳ 13ನೇ ಸ್ಮರಣೋತ್ಸವ ನಡೆಯಲಿದೆ. ಇಂದಿನ ಪೀಠಾಧ್ಯಕ್ಷರಾಗಿರುವ ವಚನಾನಂದ ಮಹಾಸ್ವಾಮಿಜಿ ಪೀಠಾರೋಹಣದ ಎಂಟನೇ ವಾರ್ಷಿಕೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರಗಲಿವೆ. ಧಾರ್ಮಿಕ ಪ್ರವಚನಗಳು, ವಿಶೇಷ ಪೂಜೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ವಿವಿಧ ಭಾಗಗಳಿಂದ ಶರಣರು, ಭಕ್ತಾದಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ತನು ಮನ ಧನ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸೋಣ ಎಂದರು.ಈ ಸಂದರ್ಭದಲ್ಲಿ ವೀರಶೈವ ಪಂಚಮಸಾಲಿ ಸಮಾಜದ ಮುಖಂಡರಾದ ಶಿವು ಗುಡ್ಡಾಪೂರ, ವಿಜಯಕುಮಾರ ನೇಮಗೌಡ, ಸುರೇಶ ಚಿಕ್ಕಟ್ಟಿ, ಶಿವಾನಂದ ಮಾಲಗಾಂವಿ, ಶಿವರುದ್ರಪ್ಪ ಘುಳಪ್ಪನವರ, ರಾಮಣ್ಣ ಧರಿಗೌಡ, ಸುರೇಶ ವಾಡೇದ, ರಾಜು ಗುಡೋಡಗಿ, ಎಸ್.ಪಿ.ತಾಂವಶಿ, ಚನ್ನಪ್ಪ ಹಂಚಿನಾಳ, ಶಿವಾನಂದ ತಂಗಡಿ, ಸದಾಶಿವ ಚಿಕ್ಕಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.