ಟ್ರ್ಯಾಕ್ಟರ್-ಬೈಕ್ ಮಧ್ಯೆ ಭೀಕರ ಅಪಘಾತ: ಇಬ್ಬರ ದುರ್ಮರಣ

| Published : Dec 15 2023, 01:31 AM IST

ಸಾರಾಂಶ

ರಸ್ತೆ ಅಪಘಾತ: ಇಬ್ಬರ ಸಾವು

ವಿಜಯಪುರ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಎಚ್ .ಎಚ್. ಸಂಗಾಪುರ ಕ್ರಾಸ್ ಬಳಿ ಗುರುವಾರ ನಡೆದಿದೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರದ ಸಮೀರ್ ಬಿಸ್ತಿ (18) ಹಾಗೂ ರಾಹುಲ್ ಬೆಣ್ಣೂರ್ (17) ಮೃತರು. ಸ್ಥಳಕ್ಕೆ ಬಬಲೇಶ್ವರ ಪೊಲೀಸ್ ಠಾಣೆಯ ಪಿಎಸ್ಐ ಅಶೋಕ ನಾಯಕ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.