ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಊರ್ಡಿಗೆರೆ ಹೋಬಳಿಯ, ಹಿರೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಶಾಸಕ ಬಿ. ಸುರೇಶ್‌ಗೌಡ ರಸ್ತೆ, ಚರಂಡಿ ಕಾಮಗಾರಿಗಳಿಗೆ ಗುರುವಾರ ಭೂವಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಊರ್ಡಿಗೆರೆ ಹೋಬಳಿಯ, ಹಿರೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಶಾಸಕ ಬಿ. ಸುರೇಶ್‌ಗೌಡ ರಸ್ತೆ, ಚರಂಡಿ ಕಾಮಗಾರಿಗಳಿಗೆ ಗುರುವಾರ ಭೂವಿಪೂಜೆ ನೆರವೇರಿಸಿದರು.ಮಂಚಕಲ್ಲುಕುಪ್ಪೆ, ಕೋಳಿಹಳ್ಳಿ, ಹಿರೇಹಳ್ಳಿ, ದೊಡ್ಡತಿಮ್ಮಯ್ಯನಪಾಳ್ಯ ಗ್ರಾಮಗಳಲ್ಲಿ ಸುಮಾರು 1.15 ಕೋಟಿರು, ಗಳ ವೆಚ್ಚದಅನುದಾನದಲ್ಲಿ ಸಿ.ಸಿ.ರಸ್ತೆ ಹಾಗೂ ಸಿ.ಸಿ.ಚರಂಡಿ ಕಾಮಗಾರಿ ಕೈಗೊಳ್ಳಲಾಗಿದ್ದು, ಕಾಮಗಾರಿಯ ಗುಣಮಟ್ಟ ಕಾಪಾಡಿಕೊಂಡು, ನಿಗಧಿತ ಅವಧಿಯಲ್ಲಿ ರಸ್ತೆ, ಚರಂಡಿ ಕಾಮಗಾರಿ ಪೂರ್ಣಗೊಳಿಸಿ ಗ್ರಾಮಸ್ಥರ ಬಳಕೆಗೆ ಬಿಟ್ಟುಕೊಡಬೇಕು ಎಂದು ಶಾಸಕ ಸುರೇಶ್‌ಗೌಡರು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹಿರೇಹಳ್ಳಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ದಯಾನಂದ್,ರಾಜೇಶ್, ಮದನ್,ಗೋಪಾಲ್, ರಂಗಸ್ವಾಮಿ,ನರಸಿಂಹರಾಜು, ಭೋಜಣ್ಣ,ಪಾಪಯ್ಯ, ಚೇತನ್, ಮಾರುತಿ, ಮಂಜುನಾಥ್, ಸಂಪತ್,ಮೂಡಲಗಿರಿಯಪ್ಪ, ಶಿಲ್ಪಾ ಮದನ್,ಸಂಗಳಾಪುರ ಸತೀಶ್, ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಲತಾ, ಕಾರ್ಯದರ್ಶಿ ಕೃಷ್ಣಪ್ಪ ಹಾಜರಿದ್ದರು.