ಅರಸೀಕೆರೆ ತಾಲೂಕಿನ ವಿವಿಧ ಪ್ರೇಕ್ಷಣೀಯ ಪ್ರವಾಸಿ ತಾಣಗಳು, ಸ್ಮಾರಕಗಳ ಸಂರಕ್ಷಣೆಗಾಗಿ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವ ‘ರಾಯಲ್ ಬೈಕ್ ರೈಡರ್ಸ್’ ತಂಡದವರು ನಗರದ ಹೊರವಲಯದಲ್ಲಿರುವ ಕಸ್ತೂರಬಾ ಗೋಶಾಲೆಯ ಗೋವುಗಳಿಗೆ ಹುಲ್ಲಿನ ಮೇವು ನೀಡಿ ತಮ್ಮ ತಂಡದ ಬ್ಯಾನರ್ ಅನ್ನು ಲೋಕಾರ್ಪಣೆ ಮಾಡಿದರು. ರಾಯಲ್ ಎನ್ಫೀಲ್ಡ್ ಬೈಕ್ ಮೂಲಕ ಅರಸೀಕೆರೆ ತಾಲೂಕು ಸೇರಿದಂತೆ ದೂರದೂರಿನ ಪ್ರೇಕ್ಷಣೀಯ ತಾಣಗಳಿಗೆ ಭೇಟಿ ನೀಡಲಾಗುತ್ತಿದೆ. ಸ್ಮಾರಕಗಳು, ಪ್ರವಾಸಿ ತಾಣಗಳು, ಅಂತರ್ಜಲ ಹಾಗೂ ಪರಿಸರ ಸಂರಕ್ಷಣೆ ನಮ್ಮ ತಂಡದ ಮೂಲ ಉದ್ದೇಶವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕಿನ ವಿವಿಧ ಪ್ರೇಕ್ಷಣೀಯ ಪ್ರವಾಸಿ ತಾಣಗಳು, ಸ್ಮಾರಕಗಳು ಹಾಗೂ ಹಳೆಯ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳ ಜೊತೆಗೆ ಪರಿಸರ ಮತ್ತು ಅಂತರ್ಜಲ ಸಂರಕ್ಷಣೆಗಾಗಿ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿರುವ ‘ರಾಯಲ್ ಬೈಕ್ ರೈಡರ್ಸ್’ ತಂಡದವರು ನಗರದ ಹೊರವಲಯದಲ್ಲಿರುವ ಕಸ್ತೂರಬಾ ಗೋಶಾಲೆಯ ಗೋವುಗಳಿಗೆ ಹುಲ್ಲಿನ ಮೇವು ನೀಡಿ ತಮ್ಮ ತಂಡದ ಬ್ಯಾನರ್ ಅನ್ನು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಎಲ್. ದರ್ಶನ್ ಮಾತನಾಡಿ, “ನಮ್ಮ ತಂಡವು ವಾರದಲ್ಲಿ ಒಮ್ಮೆ ಸೈಕ್ಲಿಂಗ್ ಮೂಲಕ ಹತ್ತಾರು ಕಿಲೋಮೀಟರ್ ದೂರದಲ್ಲಿರುವ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸೇವಾ ಕಾರ್ಯಗಳನ್ನು ಹಮ್ಮಿಕೊಂಡುಬರುತ್ತಿದೆ. ನಂತರದ ದಿನಗಳಲ್ಲಿ ರಾಯಲ್ ಎನ್ಫೀಲ್ಡ್ ಬೈಕ್ ಮೂಲಕ ಅರಸೀಕೆರೆ ತಾಲೂಕು ಸೇರಿದಂತೆ ದೂರದೂರಿನ ಪ್ರೇಕ್ಷಣೀಯ ತಾಣಗಳಿಗೆ ಭೇಟಿ ನೀಡಲಾಗುತ್ತಿದೆ. ಸ್ಮಾರಕಗಳು, ಪ್ರವಾಸಿ ತಾಣಗಳು, ಅಂತರ್ಜಲ ಹಾಗೂ ಪರಿಸರ ಸಂರಕ್ಷಣೆ ನಮ್ಮ ತಂಡದ ಮೂಲ ಉದ್ದೇಶವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಮಾನ ಮನಸ್ಕ ಸದಸ್ಯರನ್ನು ಒಳಗೊಂಡ ‘ಅರಸೀಕೆರೆ ರಾಯಲ್ ರೈಡರ್ಸ್’ ತಂಡವು ತಾಲೂಕಿನ ಪ್ರಮುಖ ಪ್ರವಾಸಿತಾಣಗಳ ಚಿತ್ರಗಳನ್ನು ಒಳಗೊಂಡ ಬ್ಯಾನರ್ ಅನ್ನು ರಚಿಸಿ ಲೋಕಾರ್ಪಣೆ ಮಾಡಲಾಗಿದೆ, ಅನಾವರಣಗೊಳಿಸಲಾಗಿದೆ.