ಸಾಲಿಗ್ರಾಮ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ

| Published : Dec 17 2024, 01:01 AM IST

ಸಾರಾಂಶ

ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ೨೨ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಕಿಶೋರ ಯಕ್ಷಗಾನ ಸಂಭ್ರಮ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವ ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಕುಂದಾಪುರ ವಿಧಾನಸಭಾ ವ್ಯಾಪ್ತಿಯ ೨೨ ಪ್ರೌಢಶಾಲಾ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಕಿಶೋರ ಯಕ್ಷಗಾನ ಸಂಭ್ರಮ - ೨೦೨೦೪ ಇದರ ಉದ್ಘಾಟನೆ ಇಲ್ಲಿನ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ಭಾನುವಾರ ನಡೆಯಿತು.ಶ್ರೀ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷ ಡಾ. ಕೆ.ಎಸ್. ಕಾರಂತ ಉದ್ಘಾಟಿಸಿ, ಈ ಭಾಗದ ಪ್ರತಿಯೊಬ್ಬರ ಮಾತಿನಲ್ಲಿ, ಬರವಣಿಗೆಯಲ್ಲಿ ಯಕ್ಷಗಾನದ ದಟ್ಟ ಪ್ರಭಾವ ಗೋಚರವಾಗುತ್ತದೆ. ಇಂತಹ ನಮ್ಮ ಮಣ್ಣಿನ ಅಪೂರ್ವ ಕಲೆಯನ್ನು ಮಕ್ಕಳಿಗೆ ಪರಿಚಯಿಸುವ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗಲಿ ಎಂದರು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.

ಸ್ಥಳೀಯ ಗಣ್ಯರಾದ ಆನಂದ ಸಿ. ಕುಂದರ್, ರಾಜಶೇಖರ್ ಹೆಬ್ಬಾರ್, ವಾಸುದೇವ ಕಾರಂತ, ಜಗದೀಶ ನಾವುಡ, ಶ್ರೀನಿವಾಸ ಉಪಾಧ್ಯಾಯ ಅಭ್ಯಾಗತರಾಗಿ ಪಾಲ್ಗೊಂಡು ಶುಭ ಕೋರಿದರು.

ಯಕ್ಷಗಾನ ಕಲಾರಂಗದ ಎಸ್.ವಿ. ಭಟ್, ಎಚ್.ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ, ಗಣಪತಿ ಭಟ್, ನಾಗರಾಜ ಹೆಗಡೆ ಭಾಗವಹಿಸಿದ ಈ ಸಮಾರಂಭದಲ್ಲಿ ನಾರಾಯಣ ಎಂ. ಹೆಗಡೆ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಡಾ. ರಾಜೇಶ್ ನಾವುಡ ವಂದಿಸಿದರು.ಸಭೆಯ ಪೂರ್ವದಲ್ಲಿ ಚೇತನ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪ್ರತೀಶ್ ಕುಮಾರ್ ನಿರ್ದೇಶನದಲ್ಲಿ ವನವಿಲಾಸ, ಸಭಾ ಕಾರ್ಯಕ್ರಮದ ಬಳಿಕ ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ನರಸಿಂಹ ತುಂಗ ಅವರ ನಿರ್ದೇಶನದಲ್ಲಿ ದ್ರೌಪದಿ ಪ್ರತಾಪ ಯಕ್ಷಗಾನ ಪ್ರದರ್ಶನಗೊಂಡಿತು.