ಸಾರಾಂಶ
ದೊಡ್ಡಬಳ್ಳಾಪುರ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರೀಯ ಏಕತಾ ದಿನ-,ಸರ್ದಾರ್-150 ಏಕತಾ ಪಾದಯಾತ್ರೆ ಕಾರ್ಯಕ್ರಮವನ್ನು ನವೆಂಬರ್ 15ರಂದು ದೊಡ್ಡಬಳ್ಳಾಪುರ ನಗರದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಸರ್ದಾರ್ @150 ಪಾದಯಾತ್ರೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದೇಶದ ಒಗ್ಗೂಡುಸುವಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರು ಉಕ್ಕಿನ ಮನುಷ್ಯ ಎಂದೇ ಪ್ರಸಿದ್ಧರು. ಅವರ 150 ಜನ್ಮ ದಿನದ ಅಂಗವಾಗಿ ಸರ್ದಾರ್ @ 150 ಪಾದಯಾತ್ರೆ ಆಯೋಜಿಸಲಾಗಿದೆ. ನವೆಂಬರ್ 15 ರಂದು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರ ವೃತ್ತದಿಂದ ಕೊಂಗಾಡಿಯಪ್ಪ ಕಾಲೇಜು ವರೆಗೆ ಏಕತಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ರಾಷ್ಟ್ರೀಯ ಹೆಮ್ಮೆಯನ್ನು ಬೆಳೆಸಲು, ನಾಗರಿಕ ಸಂಬಂಧವನ್ನು ಗಾಢವಾಗಿಸಲು ಮತ್ತು ರಾಷ್ಟ್ರೀಯ ನಾಯಕರ ಸ್ಮರಣಾರ್ಥ ಕಾರ್ಯಕ್ರಮಗಳ ಮೂಲಕ ಯುವಕರಲ್ಲಿ ಏಕತೆಯ ಮನೋಭಾವವನ್ನು ಬಲಪಡಿಸಲು ಏಕತಾ ಪಾದಯಾತ್ರೆ ವಿನ್ಯಾಸಗೊಳಿಸಲಾಗಿದೆ. ಈ ಉಪಕ್ರಮವು ಯುವಕರಿಂದ ಹಿಡಿದು ಯೋಧರವರೆಗೆ ಪ್ರತಿಯೊಬ್ಬ ಪಾಲುದಾರರನ್ನು ಸ್ಮರಣಾರ್ಥ ಕ್ರಿಯೆಯಲ್ಲಿ ಒಟ್ಟುಗೂಡಿಸುತ್ತದೆ. ಇದು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ಬಲಪಡಿಸುತ್ತದೆಜೊತೆಗೆ ಭಾರತದ ರಾಷ್ಟ್ರೀಯ ನಾಯಕರ ಕೊಡುಗೆಗಳಿಗೆ ಗೌರವ ಸಲ್ಲಿಸುತ್ತದೆ ಎಂದರು.
ರಾಷ್ಟ್ರವ್ಯಾಪಿ ಉಪಕ್ರಮವು ಭಾರತದ ಯುವಜನರಲ್ಲಿ ಏಕತೆ, ದೇಶಭಕ್ತಿ ಮತ್ತು ನಾಗರಿಕ ಜವಾಬ್ದಾರಿಯ ಮನೋಭಾವವನ್ನು ಜಾಗೃತಗೊಳಿಸುವ ಗುರಿಯನ್ನು ಹೊಂದಿದೆ ಮತ್ತು ಛಿದ್ರಗೊಂಡ ಭಾರತವನ್ನು ಒಂದು ರಾಷ್ಟ್ರವಾಗಿ ಒಗ್ಗೂಡಿಸಿದ ನಾಯಕನ ಪರಂಪರೆಯನ್ನು ಗೌರವಿಸುತ್ತದೆ. ಈ ಅಭಿಯಾನದ ಮೂಲಕ, ಯುವಜನರು ತಮ್ಮ ದೈನಂದಿನ ಜೀವನದಲ್ಲಿ ಮತ್ತು ನಾಗರಿಕ ಬದುಕಿನಲ್ಲಿ ಏಕ ಭಾರತ, ಆತ್ಮ ನಿರ್ಭರ ಭಾರತದ ಆದರ್ಶಗಳನ್ನು ಅಳವಡಿಸಿಕೊಳ್ಳಲುಪ್ರೋತ್ಸಾಹಿಸಲಾಗುತ್ತದೆ ಎಂದರು.
ಕಾರ್ಯಕ್ರಮದ ದಿನದಂದು ಪಾದಯಾತ್ರೆಯಲ್ಲಿ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಭಾಗವಹಿಸವವರಿಗೆ ಟಿ-ಶರ್ಟ್, ಪ್ರಮಾಣ ಪತ್ರ ಹಾಗೂ ಲಘುಉಪಹಾರ ವ್ಯವಸ್ಥೆ ಆಯೋಜಿಸಲಾಗುತ್ತದೆ. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸ್ವಚ್ಛತಾ ಶ್ರಮದಾನ, ಹೆಲ್ತ್ ಕ್ಯಾಂಪ್, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವೇದಿಕೆ ಕಾರ್ಯಕ್ರಮ ಇರಲಿದೆ ಎಂದರು.ಜಿಲ್ಲೆಯ ಎಲ್ಲಾ ಯುವಜನರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಏಕತಾ ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಒಗ್ಗಟ್ಟಿನ ಮನೋಭಾವವನ್ನು ಆಚರಿಸಿ ಸರ್ದಾರ್ ಪಟೇಲ್ ಅವರ ಏಕತಾ ಭಾರತದ ದೃಷ್ಟಿಕೋನವನ್ನು ನಾವೆಲ್ಲರೂ ಗೌರವಿಸೋಣ ಎಂದು ಹೇಳಿದರು.
ಕಾಲೇಜು ವಿದ್ಯಾರ್ಥಿಗಳಿಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜೀವನಾಧಾರಿತ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ರೀಲ್ ಸ್ಪರ್ಧೆಗಳನ್ನು ಕಾಲೇಜುಗಳಲ್ಲಿ ಆಯೋಜಿಸಿ ಆ ದಿನ ಪ್ರಶಸ್ತಿ ನೀಡಲು ಕ್ರಮ ವಹಿಸಿ. ಪಾದಯಾತ್ರೆಗೆ 500 ವಿದ್ಯಾರ್ಥಿಗಳು ಸೇರಿಸಬೇಕು. ಭಾಗವಹಿಸುವವರಿಗೆ ಲಘು ಉಪಹಾರ, ಕುಡಿಯುವ ನೀರು ವ್ಯವಸ್ಥೆ ಮಾಡಿ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಹಿಸಿರುವ ಜವಾಬ್ದಾರಿಯನ್ನು ನಿಭಾಯಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್ಪಿ ಪಾಂಡುರಂಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿ, ಮೈ ಭಾರತ್ ನ ಜಿಲ್ಲಾ ಯುವ ಅಧಿಕಾರಿ ಕೆ ಶ್ರೀ ವಾಣಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಕ್ಸ್................ಯುವ ಜನತೆಗೆ ಸ್ಪರ್ಧೆ:
ಮೈ-ಭಾರತ್ (www.mybharat.gov.in) ಪೋರ್ಟಲ್ನಲ್ಲಿ ಡಿಜಿಟಲ್ ಅಭಿಯಾನದ ಮೂಲಕ 15-29 ವರ್ಷ ವಯೋಮಿತಿ ಹೊಂದಿರುವ ಯುವಜನರಿಗಾಗಿ ಸಾಮಾಜಿಕ ಮಾಧ್ಯಮ ರೀಲ್ ಸ್ಪರ್ಧೆ, ಪ್ರಬಂಧ ಬರೆಯುವ ಸ್ಪರ್ಧೆ ಮತ್ತು ಸರ್ದಾರ್@150 ಯುವ ನಾಯಕರ ಕಾರ್ಯಕ್ರಮವನ್ನು ಮೈ ಭಾರತ್ ಪೋರ್ಟನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಡಿಯಲ್ಲಿ, 150 ವಿಜೇತರು ರಾಷ್ಟ್ರೀಯ ಪಾದಯಾತ್ರೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿಗಾಗಿ ಮೈ ಭಾರತ್ ಪೋರ್ಟಲ್ನಲ್ಲಿ www.mybharat.gov.in ಜಾಲತಾಣಕ್ಕೆ ಭೇಟಿ ನೀಡಿ ಅಥವಾ 8328673178 ದೂರವಾಣಿ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.7ಕೆಡಿಬಿಪಿ2-
ದೊಡ್ಡಬಳ್ಳಾಪುರದಲ್ಲಿ ನಡೆಯುವ ಸರ್ದಾರ್@150 ಏಕತಾ ಪಾದಯಾತ್ರೆ ಅಂಗವಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಸವರಾಜು ಮಾತನಾಡಿದರು.)
)
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))