ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ

| Published : May 14 2024, 01:02 AM IST

ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಕಿಡ್ನಾಪ್ ಪ್ರಕರಣದ ಎಫ್ಐಆರ್ ದಾಖಲಾಗುವ ಮುನ್ನವೆ ಸತೀಶ್ ಬಾಬುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷರಾದ ಮಾಜಿ ಸಚಿವ ಸಾ.ರಾ. ಮಹೇಶ್ ಆರೋಪಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಐಆರ್ ಆಗುತ್ತದೆ ಎಂದು ಇವರಿಗೆ ಮೊದಲೇ ಕನಸು ಬಿದ್ದಿತ್ತಾ? ರಾತ್ರಿ 9.5 ರಲ್ಲಿ ಎಫ್ಐಆರ್ ಆಗಿದೆ. ಆದರೆ, ಅದಕ್ಕೂ ಮುನ್ನವೇ ಮಧ್ಯಾಹ್ನ 12 ಗಂಟೆಗೆ ಸತೀಶ್ ಬಾಬುರನ್ನು ಕರೆದುಕೊಂಡು ಹೋಗಿದ್ದಾರೆ ಎಂದರು.

ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.

ಇದಕ್ಕಾಗಿ ಮೈಸೂರಿನಿಂದ ಸಬ್ ಇನ್ಸ್‌ಪೆಕ್ಟರ್ ಆಲ್ಟೊ ಕಾರಿನಲ್ಲಿ ಹೋಗಿದ್ದರು. ಇದೆಲ್ಲ ದಾಖಲೆಗಳು ನಮ್ಮ ಬಳಿ ಇದೆ.

ದೂರು ಕೊಟ್ಟ ಹುಡುಗ ಅಮಾಯಕ. ಆತನ‌ ಬಳಿ ಹಣ ನೀಡಿ, ಖಾಲಿ ಪೇಪರ್ ನಲ್ಲಿ ಸಹಿ ಪಡೆದಿದ್ದಾರೆ. ದೂರು ಕೊಟ್ಟ ಯುವಕ ಎಲ್ಲಿದ್ದಾನೆ? ಈವರೆಗೂ ಆತ ಎಲ್ಲಿ ಹೋಗಿದ್ದಾನೆ ಎಂದು ಗೊತ್ತಿಲ್ಲ. ಆ ಮಹಿಳೆ ಬಳಿಯೂ ಈವರೆಗೆ 164ಎ ಹೇಳಿಕೆ ಏಕೆ ದಾಖಲಿಸಿಲ್ಲ? ತೋಟದವರು ಹೇಳಿದ್ದು ಕುರಿ ಮೇಯಿಸುತ್ತಿದ್ದರು ಎಂದು. ಆಕೆ ‌ಅಲ್ಲಿ ಹೋಗಿದ್ದು ಸತ್ಯ. ಕುರಿ ಮೇಯಿಸುತ್ತಿದ್ದ ಮೇಲೆ ಕಿಡ್ನಾಪ್ ಹೇಗೆ ಆಗುತ್ತದೆ ಎಂದು ಅವರು ಪ್ರಶ್ನಿಸಿದರು.