ಚನ್ನರಾಯಪಟ್ಟಣ: ಪಟ್ಟಣದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರವಹಿಸಿಕೊಂಡ ಎಚ್. ಎಚ್. ಸತೀಶ್ ಅವರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದಿಸಲಾಯಿತು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಚನ್ನರಾಯಪಟ್ಟಣಕ್ಕೂ ಅವಿನಾಭಾವ ಸಂಬAಧವಿದ್ದು ಈ ಹಿಂದೆ ಶಿಕ್ಷಕರಾಗಿ ತಾಲೂಕಿನಲ್ಲಿ ಕೆಲಸ ಮಾಡಿರುವ ಅನುಭವ ಅವರಿಗೆ ಇದೆ. ಈ ನಿಟ್ಟಿನಲ್ಲಿ ಅವರು ನಮ್ಮ ತಾಲೂಕಿನ ಶಿಕ್ಷಣಾಧಿಕಾರಿಯಾಗಿ ಆಗಮಿಸಿರುವುದು ಸಂತಸದ ವಿಷಯವಾಗಿದೆ, ಶಿಕ್ಷಣ ಇಲಾಖೆ ಜೊತೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮೊದಲಿನಿಂದಲೂ ಒಳ್ಳೆಯ ವಿಶ್ವಾಸವನ್ನು ಹೊಂದಿದ್ದು ಇಲಾಖೆ ಜೊತೆ ಸಾಕಷ್ಟು ಪರಿಷತ್ ಕಾರ್ಯಕ್ರಮಗಳನ್ನ ಹಮ್ಮಿಕೊಂಡು ಯಶಸ್ವಿಗೊಳಿಸಿದ್ದೇವೆ. ಈ ನಿಟ್ಟಿನಲ್ಲಿ ಶಿಕ್ಷಣಾಧಿಕಾರಿಗಳು ಉತ್ತಮ ಸೇವೆಯನ್ನ ತಾಲೂಕಿಗೆ ನೀಡಲಿ ಎಂಬುದು ನಮ್ಮ ಆಶಯವಾಗಿದೆ ಎಂದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ದಿಂಡಗೂರು ಗೋವಿಂದರಾಜು, ಜಬಿ ಉಲ್ಲಾಬೇಗ್, ಶಿವನಗೌಡ ಪಾಟೀಲ್, ಯಶೋಧ ಜೈನ್, ನಂದನ್ ಪುಟ್ಟಣ್ಣ, ಮಂಜಪ್ಪ ಮತ್ತಿತರಿದ್ದರು.