ಇಂದು ಬಿಳಿಕಿ ಗ್ರಾಪಂ ಎದರು ಧರಣಿ ಸತ್ಯಾಗ್ರಹ

| Published : Jun 10 2025, 01:29 AM IST

ಸಾರಾಂಶ

ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಸಮಸ್ಯೆಗಳನ್ನು ಖಂಡಿಸಿ ಜೂ.೯ರಂದು ಬೆಳಿಗ್ಗೆ ೧೧ ಗಂಟೆಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಭದ್ರಾವತಿ: ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ವಿವಿಧ ಸಮಸ್ಯೆಗಳನ್ನು ಖಂಡಿಸಿ ಜೂ.೯ರಂದು ಬೆಳಿಗ್ಗೆ ೧೧ ಗಂಟೆಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಬಿಳಿಕಿ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಗೊಂಡು ದುಸ್ಥಿತಿಗೆ ತಲುಪಿದ್ದು, ಅಲ್ಲದೆ ಇ-ಸ್ವತ್ತು, ಉದ್ಯೋಗ ಖಾತ್ರಿ ಸೇರಿದಂತೆ ಇನ್ನಿತರ ಯೋಜನೆಗಳು ಅವ್ಯವಸ್ಥೆಯಿಂದ ಕೂಡಿವೆ. ಇದರ ವಿರುದ್ಧ ಪ್ರತಿಭಟನಾ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.