ಪುತ್ತೂರು: ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ್ಯಂಟಿ ಉಮನ್ ಹೆರೆಸ್‌ಮೆಂಟ್ ಸೆಲ್ ಸಹಯೋಗದೊಂದಿಗೆ ಗರ್ಭಾಶಯ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜಲಕ್ಷ್ಮೀ ಎಸ್ ರೈ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಅತ್ಯಂತ ಮುಖ್ಯ ಎಂದು ಹೇಳಿದರು.ಕೇರ್ ಆಂಡ್ ಸೇಫ್ ಆಫ್ ಇಂಡಿಯಾದ ಅಮಿತ ನಾಯಕ್ ಸ್ಯಾನಿಟರಿ ಪ್ಯಾಡ್ಗಳನ್ನು ಬಳಸುವುದರಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಆ್ಯಂಟಿ ಉಮನ್ ಹೆರೆಸ್‌ಮೆಂಟ್ ಸೆಲ್‌ನ ಸಂಯೋಜಕಿ ಪ್ರತಿಭಾ ಭಟ್ ಉಪಸ್ಥಿತರಿದ್ದರು.ವಿದ್ಯಾರ್ಥಿ ಸಂಯೋಜಕಿ ಅಂಕಿತಾ ಸ್ವಾಗತಿಸಿದರು. ಅಸ್ಮಿತಾ ವಂದಿಸಿದರು. ಕಲ್ಪನಾ ಕಾರ್ಯಕ್ರಮ ನಿರೂಪಿಸಿದರು.