ಸಾರಾಂಶ
ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸಾವಿತ್ರಿ ಬಾಯಿಪುಲೆ ಜನ್ಮದಿನ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾವಿತ್ರಿ ಬಾಯಿಫುಲೆ ಅವರ ಜನ್ಮದಿನ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅತಿಥಿಗಳು ಸಾವಿತ್ರಿ ಬಾಯಿಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ದನ್, ಸಾಮಾಜಿಕ ಅನಿಷ್ಟ ಹಾಗೂ ಗೊಡ್ಡು ಸಂಪ್ರದಾಯಗಳ ನಡುವೆ, ಪುರುಷರಂತೆ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಸಾವಿತ್ರಿ ಬಾಯಿ ಹೋರಾಟ ಮಾಡಿದ್ದಾರೆ ಎಂದರು.
ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿ, ಸಾವಿತ್ರಿಬಾಯಿಫುಲೆ ಹೆಣ್ಣುಮಕ್ಕಳಿಗೆ ಹಾಗೂ ಮಹಿಳೆಯರಿಗೆ ಶಿಕ್ಷಣ ಸಿಗಬೇಕು, ಮುಖ್ಯವಾಹಿನಿಗೆ ಬರಬೇಕು. ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ಪ್ರಾತಿಪಾದಿಸಿದ್ದಾರೆ ಎಂದರು.ಸೋಮವಾರಪೇಟೆ ತಾಲೂಕು ಸಂಚಾಲಕ ಎಂ.ಎಸ್. ವೀರೇಂದ್ರ ಮಾತನಾಡಿ, ಸಾವಿತ್ರಿ ಬಾಯಿಫುಲೆ ಅವರ ಜೀವನ ಚರಿತ್ರೆ, ಸಾಧನೆ ಬಗ್ಗೆ ವಿವರಿಸಿದರು. ಶಾಲೆಯ ಪ್ರಾಂಶುಪಾಲ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸದಸ್ಯ ಎಂ.ಪಿ. ವಿಶ್ವ, ವೀರಭದ್ರ ದೊಡ್ಡಕೊಡ್ಲಿ, ಶಾಲಾ ಶಿಕ್ಷಕರು ಹಾಜರಿದ್ದರು. ಶಿಕ್ಷಕ ಸತೀಶ್ ನಿರೂಪಿಸಿದರು.