ಶಾಲಾ ವಾಹನ ಡಿಕ್ಕಿ: ಬೈಕ್ ಸವಾರ ಸಾವು

| Published : Jun 19 2025, 11:49 PM IST

ಸಾರಾಂಶ

ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ.

ರಾಮನಗರ: ಶಾಲಾ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಅರ್ಚಕರಹಳ್ಳಿ ಬಳಿಯ ಬೆಂಗಳೂರು - ಮೈಸೂರು ಹಳೆ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೈಕ್ ಸವಾರ ಅಮಿತ್ ಗೌಡ (20) ಮೃತರು.

ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಅಮಿತ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.