ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಪುದುವೆಟ್ಟಿನಂತಹ ಗ್ರಾಮೀಣ ಪ್ರದೇಶದಲ್ಲಿ ಉಜಿರೆ ಎಸ್ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ಕಾರ್ಯ ಚಟುವಟಿಕೆ ಹಮ್ಮಿಕೊಂಡಿರುವುದು ಸಂತಸವಾಗಿದೆ ಎಂದು ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಪೂರ್ಣಾಕ್ಷ ಹೇಳಿದರು.ಅವರು ಪುದುವೆಟ್ಟು ಎಸ್ಡಿಎಂ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಉಜಿರೆ ಎಸ್ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕಾಲೇಜಿನ ಪ್ರಾಚಾರ್ಯ ಸಂತೋಷ್ ಅಧ್ಯಕ್ಷತೆ ವಹಿಸಿ, ಎನ್ಎಸ್ಎಸ್ ಎಂದರೆ ಕೇವಲ ಶ್ರಮದಾನ ಅಲ್ಲ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಜೀವನ ಮೌಲ್ಯ ಮತ್ತು ಅವರು ಬದುಕುವ ಕಲೆಯನ್ನು ಶಿಬಿರಗಳ ಮೂಲಕ ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುವುದು. ಶ್ರಮದಾನದಲ್ಲಿ ಕೆಲಸ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಸಹಕಾರ ಮನೋಭಾವ, ಸೇವಾ ಮನೋಭಾವವನ್ನು ಮೂಡಿಸಿ ಅವರು ಸಾಮಾಜಿಕವಾಗಿ ತೊಡಗಿಸಿಕೊಳ್ಳಬೇಕು ಎಂಬುದೇ ಈ ಶಿಬಿರದ ಉದ್ದೇಶವಾಗಿದೆ ಎಂದರು.ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಯದುಪತಿ ಗೌಡ, ಪುದುವೆಟ್ಟು ಎಸ್ಡಿಎಂ ಅನುದಾನಿತ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ, ನಿವೃತ ಮುಖ್ಯ ಶಿಕ್ಷಕ ಶ್ರೀಧರ್ ನಾಯರ್, ಪ್ರಗತಿ ಪರ ಕೃಷಿಕ ಚಿತ್ತರಂಜನ್ ಜೈನ್, ಸಹಕಾರಿ ಹಾಲು ಉತ್ಪಾದಕರ ಸಂಘದ ರಂಗನಾಥ್, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ಶಶಿಧರ್, ಎಪಿಎಂಸಿ ಮಾಜಿ ಸದಸ್ಯ ಅಬ್ದುಲ್ ಗಫೂರ್ ಮೊದಲಾದವರು ಉಪಸ್ಥಿತರಿದ್ದರು.ಎನ್ಎಸ್ಎಸ್ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಎಸ್. ಮತ್ತು ಪುಷ್ಪಲತಾ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಮಂಜೂಷ ಸ್ವಾಗತಿಸಿದರು. ಮಾನ್ಯ ವಂದಿಸಿದರು. ಭವಿತಾ ಕಾರ್ಯಕ್ರಮ ನಿರೂಪಿಸಿದರು.