ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ ಮದನ್ ಎಂಬುವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಹಕಾರಿ ಸಂಘದ ವ್ಯವಹಾರದಲ್ಲಿ ಈಚೆಗೆ ಕೆಲವೊಂದು ನ್ಯೂನತೆಗಳು ಕಂಡುಬಂದಿವೆ ಎಂದು ಹೇಳಲಾಗಿದೆ.

ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ ಮದನ್ ಎಂಬುವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದಾರೆ ಎಂದು ಪಟ್ಟಣ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಹಕಾರಿ ಸಂಘದ ವ್ಯವಹಾರದಲ್ಲಿ ಈಚೆಗೆ ಕೆಲವೊಂದು ನ್ಯೂನತೆಗಳು ಕಂಡುಬಂದಿವೆ ಎಂದು ಹೇಳಲಾಗಿದೆ. ಮದನ್ ಅವರ ಕಾರು ಹೊಸನಗರ ತಾಲೂಕಿನ ಹೆದ್ದಾರಿ ಪುರದ ಬಳಿ ಬಿಟ್ಟು ಹೋಗಿದ್ದಾರೆ. ಅವರ ಕುಟುಂಬದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.