ಸಾರಾಂಶ
sendup for retired N.Manjunath
ಚಿತ್ರದುರ್ಗ: ಸಮರ್ಪಣಾಭಾವದಿಂದ ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್ನಲ್ಲಿ ನಿವೃತ್ತ ಉಪನ್ಯಾಸಕ ಎನ್.ಮಂಜುನಾಥ್ಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ವೃತ್ತಿಯನ್ನು ಪ್ರೀತಿಸಬೇಕು. ಶ್ರದ್ಧೆ, ಸಮರ್ಪಣಾಭಾವದಿಂದ ಕೆಲಸ ಮಾಡಿದಾಗ ಗೌರವ ಲಭಿಸುತ್ತದೆ ಎಂದರು. ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ತಿಪ್ಪೇಸ್ವಾಮಿ, ಪೂರ್ಣಿಮಾ, ಗಿರಿಜ, ಉಪನ್ಯಾಸಕರಾದ ಆರ್.ನಾಗರಾಜು, ಕೆ.ಜಿ.ಪ್ರಶಾಂತ್, ಎಸ್.ಬಸವರಾಜು, ಎನ್.ರಾಘವೇಂದ್ರ, ಯು.ಸಿದ್ದೇಶಿ, ಸಿ.ಎಸ್.ಲೀಲಾವತಿ, ನಿತ್ಯಾನಂದ, ಕನಕಮ್ಮ, ರೇವಣ್ಣ, ರಂಗಸ್ವಾಮಿ, ತಾಂತ್ರಿಕ ಸಹಾಯಕರಾದ ಲೋಕೇಶ್, ಲಿಂಗರಾಜು, ವಿಷಯ ಪರಿವೀಕ್ಷಕ ಚಂದ್ರಣ್ಣ, ಸಿ.ಆರ್.ಪಿ ವರಲಕ್ಷ್ಮಿ ಮತ್ತು ಕಚೇರಿ ಸಿಬ್ಬಂದಿ ಇದ್ದರು
------------ಫೋಟೋ- 7 ಸಿಟಿಡಿ4