ಹಿರಿಯ ವಿದ್ಯಾರ್ಥಿಗಳು ಮಾರ್ಗದರ್ಶಕರಾಗಬೇಕು: ಡಾ.ಬಿ.ಶಿವಲಿಂಗಯ್ಯ

| Published : Aug 15 2024, 01:58 AM IST

ಸಾರಾಂಶ

ಹಳೆಯ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಹಿರಿಯ, ಕಿರಿಯ ವಿದ್ಯಾರ್ಥಿಗಳು ಕೂಡಿ ಕಲಿತರೆ ಉತ್ತಮ ಶಿಕ್ಷಣ ಪಡೆಯಬಹುದು, ನಿಮಗೆ ಮಾರ್ಗದರ್ಶನ ಮಾಡಲು ಉಪನ್ಯಾಸಕರೆ ತಂಡವೇ ಇದೆ. ತಮಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಕೇಳಿ ತಿಳಿದುಕೊಂಡು ವ್ಯಾಸಂಗ ಮಾಡಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಹಿರಿಯ ವಿದ್ಯಾರ್ಥಿಗಳು ಕಾಲೇಜಿಗೆ ಹೊಸದಾಗಿ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ತಾವು ಕಲಿತ ಹಲವು ವಿಚಾರಗಳನ್ನು ತಿಳಿಸಿಕೊಡುವ ಮೂಲಕ ಮಾರ್ಗದರ್ಶಕರಾಗಬೇಕು ಎಂದು ಎಸ್‌.ಬಿ.ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಸಲಹೆ ನೀಡಿದರು.

ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಮಾಂಡವ್ಯ ಪದವಿ ಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಳೆಯ ಬೇರು ಹೊಸ ಚಿಗುರು ಕೂಡಿರಲು ಮರ ಸೊಬಗು ಎಂಬಂತೆ ಹಿರಿಯ, ಕಿರಿಯ ವಿದ್ಯಾರ್ಥಿಗಳು ಕೂಡಿ ಕಲಿತರೆ ಉತ್ತಮ ಶಿಕ್ಷಣ ಪಡೆಯಬಹುದು, ನಿಮಗೆ ಮಾರ್ಗದರ್ಶನ ಮಾಡಲು ಉಪನ್ಯಾಸಕರೆ ತಂಡವೇ ಇದೆ. ತಮಗೆ ಗೊತ್ತಿಲ್ಲದ ವಿಷಯಗಳ ಬಗ್ಗೆ ಕೇಳಿ ತಿಳಿದುಕೊಂಡು ವ್ಯಾಸಂಗ ಮಾಡುವಂತೆ ತಿಳಿಸಿದರು.

ಸಂಸ್ಥೆಯ ಅಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಕೆ.ಕೆ.ಚಂದ್ರಶೇಖರ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಹದೇವಯ್ಯ, ಮಾಂಡವ್ಯ ಎಕ್ಸಲೆನ್ಸ್ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್, ಶೈಕ್ಷಣಿಕ ಪಾಲುದಾರ ರಾಘವೇಂದ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥ ಎಂ.ಎಸ್.ಅರ್ಚನಾ, ಅರ್ಪಿತಾ, ಉಮೇಶ್ ಹಾಗೂ ಪ್ರಶಾಂತ್ ಇನ್ನಿತರದಿದ್ದರು.

ಅತಿ ಹೆಚ್ಚು ಅಂಕವನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ತದನಂತರ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.