ಸಾರಾಂಶ
ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಅತಿ ಸೂಕ್ಷ್ಮ ಹಾಗೂ ಅಲ್ಪಸಂಖ್ಯಾತ ಕೊಡವ ಜನಾಂಗದ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೊಡವ ಸಮಾಜ, ಸಂಘ ಸಂಸ್ಥೆಗಳು, ಅಕಾಡೆಮಿ ಪ್ರಯತ್ನದ ನಡುವೆ ಬೆಳವಣಿಗೆ ಕಾಣುತ್ತಿದೆ, ಆದರೆ ಇದರ ನಡುವೆ ಕೊಡವರು ತಮ್ಮ ಮಣ್ಣನ್ನು ಮಾರಾಟ ಮಾಡದೇ ಉಳಿಸಿಕೊಳ್ಳಬೇಕು ಹಾಗೂ ಜನಸಂಖ್ಯೆ ವೃದ್ಧಿಗೆ ಗಂಭೀರವಾದ ಚಿಂತನೆ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆದ ಒಂಬತ್ತನೇ ವರ್ಷದ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೊಡವ ಸಮಾಜಗಳು ಸಂಘ ಸಂಸ್ಥೆ ಕೊಡವರ ಹಿತಾಸಕ್ತಿ ಕಾಪಾಡಲು ಕೆಲಸ ಮಾಡುತ್ತಿವೆ ಆದರೆ ಸಣ್ಣ ಸಣ್ಣ ಭಿನ್ನಾಭಿಪ್ರಾಯ ಬಂದರೆ ಅದನ್ನು ವೇದಿಕೆಯಲ್ಲಿ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕೇ ಹೊರತು, ಯಾವುದೇ ರೀತಿಯಲ್ಲಿ ಸಂಘರ್ಷದ ಹಾದಿ ತುಳಿಯಬಾರದು ಎಂದು ಕಿವಿಮಾತು ಹೇಳಿದ ಅವರು ಈಚೆಗೆ ಅಖಿಲ ಕೊಡವ ಸಮಾಜದ ಸಭೆಯಲ್ಲಿ ಉಂಟಾದ ಅಹಿತಕರ ಘಟನೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು.ವಿಶೇಷ ಜನಾಂಗ:
ಮುಖ್ಯ ಅತಿಥಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಗುಡ್ಡಗಾಡು ಪ್ರದೇಶದಲ್ಲಿ ತಮ್ಮ ನಾಗರಿಕತೆ ಹಾಗೂ ಬದುಕನ್ನು ಕಂಡುಕೊಂಡ ಒಂದು ವಿಶೇಷ ಜನಾಂಗ ಕೊಡವರಾಗಿದ್ದು, ಇತರ ಜನಾಂಗ ಮತ್ತು ಧರ್ಮಕ್ಕಿಂತ ತಮ್ಮ ಸಂಸ್ಕೃತಿ, ಆಚರಣೆಗಳು ವಿಭಿನ್ನವಾಗಿರುವ ಪರಂಪರೆಯನ್ನು ಹೊಂದಿರುವ ಜನಾಂಗವಾಗಿದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು 10 ದಿನದ ಕಾರ್ಯಕ್ರಮ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಿರಾಯಾಸವಾಗಿ ಆಗಿದೆ. ಪ್ರತಿ ವರ್ಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ವರ್ಷ 10ನೇ ವರ್ಷದ ಕಾರ್ಯಕ್ರಮವಿದ್ದು ಕೊಡವಾಮೆಗೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮ ನೀಡುವಂತೆ ಎಲ್ಲರಲ್ಲಿ ಕೋರಿದರು. 10 ದಿನದ ಕಾರ್ಯಕ್ರಮದಲ್ಲಿ ಪ್ರತಿದಿನ ನೂರಾರು ಜನರು ಪಾಲ್ಗೊಂಡಿದ್ದು ಅವರಿಗೆಲ್ಲರಿಗೂ ಊಟದ ವ್ಯವಸ್ಥೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕೊಡವ ಸಮಾಜ ಸ್ಥಾಪನೆ:ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಮಾತನಾಡಿ 1984ರಲ್ಲಿ ತುಂಬಾ ಆರ್ಥಿಕ ಕಷ್ಟವಿದ್ದ ಕಾಲದಲ್ಲಿ ನಮ್ಮ ಹಿರಿಯರು ಈ ಕೊಡವ ಸಮಾಜವನ್ನು ಸ್ಥಾಪನೆ ಮಾಡಲು ಮುಂದಾದರು. ನಂತರ ನ್ಯಾಯ ಪೀಠವನ್ನು ಸಹ ಸ್ಥಾಪನೆ ಮಾಡಲಾಯಿತು. ನಂತರದಲ್ಲಿ ಬಹಳಷ್ಟು ಆರ್ಥಿಕ ಸಂಕಷ್ಟ ದೊಂದಿಗೆ ಬಹಳಷ್ಟು ದಾನಿಗಳ ನೆರವಿನಿಂದ ಹಿರಿಯರ ಶ್ರಮ ಸೇವೆ ಯೊಂದಿಗೆ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಬೆಳೆದು ಬಂದ ದಾರಿಯನ್ನು ಅವರು ಸ್ಮರಿಸಿದರು.
ಸಮಾಜದ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ, ಸಂಭ್ರಮ ಮಹಿಳಾ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ತೀತಿರ ಲೀನಾ ಸತೀಶ್ ಮಾತನಾಡಿದರು. ಈ ಸಂದರ್ಭ ಕೊಡವ ಜಾನಪದ ಕಲೆಗೆ ಸೇವೆಸಲ್ಲಿಸಿರುವುದ್ದನ್ನು ಪರಿಗಣಿಸಿ ಮಲ್ಲಮಾಡ ಶ್ಯಾಮಲಾ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ನೆಲ್ಲೀರ ಪೂರ್ಣಿಮಾ, ಪೆರುಮಾಳೇಶ್ವರ ಆಟೋ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ಚೊಟ್ಟೆಯಂಡ ಮಾಡ ಪ್ರವೀಣ್ ಮೇದಪ್ಪ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ತೀತಿರ ಲೀನಾ ಸತೀಶ್, ಟಿ.ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಅಧ್ಯಕ್ಷ ಕೋಟ್ರಮಾಡ ರೇಷ್ಮಾ ಕಾರ್ಯಪ್ಪ, ಕೊಡವ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ, ಜಂಟಿ ಕಾರ್ಯದರ್ಶಿ ಆಂಡಮಾಡ ಸತೀಶ್ ವಿಶ್ವನಾಥ್, ಖಜಾಂಚಿ ಚಂಗುಲಂಡ ಸತೀಶ್, ಕ್ರೀಡಾ ಸಂಚಾಲಕ ತಡಿಯಂಗಡ ಶಮ್ಮಿ ಸುಬ್ಬಯ್ಯ, ನಿರ್ದೇಶಕರುಗಳಾದ ಚಂಗುಲಂಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪದೇವಯ್ಯ, ತೀತಿರ ಅನಿತ ಸುಬ್ಬಯ್ಯ, ಬಾದುಮಂಡ ವಿಷ್ಣು ಕಾರ್ಯಪ್ಪ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಹಾಜರಿದ್ದರು.
ಅತಿ ಸೂಕ್ಷ್ಮ ಹಾಗೂ ಅಲ್ಪಸಂಖ್ಯಾತ ಕೊಡವ ಜನಾಂಗದ ಭಾಷೆ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೊಡವ ಸಮಾಜ, ಸಂಘ ಸಂಸ್ಥೆಗಳು, ಅಕಾಡೆಮಿ ಪ್ರಯತ್ನದ ನಡುವೆ ಬೆಳವಣಿಗೆ ಕಾಣುತ್ತಿದೆ, ಆದರೆ ಇದರ ನಡುವೆ ಕೊಡವರು ತಮ್ಮ ಮಣ್ಣನ್ನು ಮಾರಾಟ ಮಾಡದೇ ಉಳಿಸಿಕೊಳ್ಳಬೇಕು ಹಾಗೂ ಜನಸಂಖ್ಯೆ ವೃದ್ಧಿಗೆ ಗಂಭೀರವಾದ ಚಿಂತನೆ ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆದ ಒಂಬತ್ತನೇ ವರ್ಷದ ಪತ್ತಲೋದಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕೊಡವ ಸಮಾಜಗಳು ಸಂಘ ಸಂಸ್ಥೆ ಕೊಡವರ ಹಿತಾಸಕ್ತಿ ಕಾಪಾಡಲು ಕೆಲಸ ಮಾಡುತ್ತಿವೆ ಆದರೆ ಸಣ್ಣ ಸಣ್ಣ ಭಿನ್ನಾಭಿಪ್ರಾಯ ಬಂದರೆ ಅದನ್ನು ವೇದಿಕೆಯಲ್ಲಿ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳಬೇಕೇ ಹೊರತು, ಯಾವುದೇ ರೀತಿಯಲ್ಲಿ ಸಂಘರ್ಷದ ಹಾದಿ ತುಳಿಯಬಾರದು ಎಂದು ಕಿವಿಮಾತು ಹೇಳಿದ ಅವರು ಈಚೆಗೆ ಅಖಿಲ ಕೊಡವ ಸಮಾಜದ ಸಭೆಯಲ್ಲಿ ಉಂಟಾದ ಅಹಿತಕರ ಘಟನೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು.ವಿಶೇಷ ಜನಾಂಗ:
ಮುಖ್ಯ ಅತಿಥಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಗುಡ್ಡಗಾಡು ಪ್ರದೇಶದಲ್ಲಿ ತಮ್ಮ ನಾಗರಿಕತೆ ಹಾಗೂ ಬದುಕನ್ನು ಕಂಡುಕೊಂಡ ಒಂದು ವಿಶೇಷ ಜನಾಂಗ ಕೊಡವರಾಗಿದ್ದು, ಇತರ ಜನಾಂಗ ಮತ್ತು ಧರ್ಮಕ್ಕಿಂತ ತಮ್ಮ ಸಂಸ್ಕೃತಿ, ಆಚರಣೆಗಳು ವಿಭಿನ್ನವಾಗಿರುವ ಪರಂಪರೆಯನ್ನು ಹೊಂದಿರುವ ಜನಾಂಗವಾಗಿದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಅಧ್ಯಕ್ಷ ಕೈಬುಲೀರ ಹರೀಶ್ ಅಪ್ಪಯ್ಯ ಅವರು 10 ದಿನದ ಕಾರ್ಯಕ್ರಮ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಿರಾಯಾಸವಾಗಿ ಆಗಿದೆ. ಪ್ರತಿ ವರ್ಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮುಂದಿನ ವರ್ಷ 10ನೇ ವರ್ಷದ ಕಾರ್ಯಕ್ರಮವಿದ್ದು ಕೊಡವಾಮೆಗೆ ಉತ್ತಮ ಸಂದೇಶ ನೀಡುವ ಕಾರ್ಯಕ್ರಮ ನೀಡುವಂತೆ ಎಲ್ಲರಲ್ಲಿ ಕೋರಿದರು. 10 ದಿನದ ಕಾರ್ಯಕ್ರಮದಲ್ಲಿ ಪ್ರತಿದಿನ ನೂರಾರು ಜನರು ಪಾಲ್ಗೊಂಡಿದ್ದು ಅವರಿಗೆಲ್ಲರಿಗೂ ಊಟದ ವ್ಯವಸ್ಥೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕೊಡವ ಸಮಾಜ ಸ್ಥಾಪನೆ:ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ಅವರು ಮಾತನಾಡಿ 1984ರಲ್ಲಿ ತುಂಬಾ ಆರ್ಥಿಕ ಕಷ್ಟವಿದ್ದ ಕಾಲದಲ್ಲಿ ನಮ್ಮ ಹಿರಿಯರು ಈ ಕೊಡವ ಸಮಾಜವನ್ನು ಸ್ಥಾಪನೆ ಮಾಡಲು ಮುಂದಾದರು. ನಂತರ ನ್ಯಾಯ ಪೀಠವನ್ನು ಸಹ ಸ್ಥಾಪನೆ ಮಾಡಲಾಯಿತು. ನಂತರದಲ್ಲಿ ಬಹಳಷ್ಟು ಆರ್ಥಿಕ ಸಂಕಷ್ಟ ದೊಂದಿಗೆ ಬಹಳಷ್ಟು ದಾನಿಗಳ ನೆರವಿನಿಂದ ಹಿರಿಯರ ಶ್ರಮ ಸೇವೆ ಯೊಂದಿಗೆ ಟಿ. ಶೆಟ್ಟಿಗೇರಿ ಕೊಡವ ಸಮಾಜದ ಬೆಳೆದು ಬಂದ ದಾರಿಯನ್ನು ಅವರು ಸ್ಮರಿಸಿದರು.
ಸಮಾಜದ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ, ಸಂಭ್ರಮ ಮಹಿಳಾ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ತೀತಿರ ಲೀನಾ ಸತೀಶ್ ಮಾತನಾಡಿದರು. ಈ ಸಂದರ್ಭ ಕೊಡವ ಜಾನಪದ ಕಲೆಗೆ ಸೇವೆಸಲ್ಲಿಸಿರುವುದ್ದನ್ನು ಪರಿಗಣಿಸಿ ಮಲ್ಲಮಾಡ ಶ್ಯಾಮಲಾ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಟಿ. ಶೆಟ್ಟಿಗೇರಿ ರೂಟ್ಸ್ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ನೆಲ್ಲೀರ ಪೂರ್ಣಿಮಾ, ಪೆರುಮಾಳೇಶ್ವರ ಆಟೋ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ಚೊಟ್ಟೆಯಂಡ ಮಾಡ ಪ್ರವೀಣ್ ಮೇದಪ್ಪ, ಸಂಭ್ರಮ ಮಹಿಳಾ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ತೀತಿರ ಲೀನಾ ಸತೀಶ್, ಟಿ.ಶೆಟ್ಟಿಗೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಅಧ್ಯಕ್ಷ ಕೋಟ್ರಮಾಡ ರೇಷ್ಮಾ ಕಾರ್ಯಪ್ಪ, ಕೊಡವ ಎಳ್ತ್ ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಕೊಡವ ಸಮಾಜದ ಕಾರ್ಯದರ್ಶಿ ಕೋಟ್ರಮಾಡ ಸುಮಂತ್ ಮಾದಪ್ಪ, ಜಂಟಿ ಕಾರ್ಯದರ್ಶಿ ಆಂಡಮಾಡ ಸತೀಶ್ ವಿಶ್ವನಾಥ್, ಖಜಾಂಚಿ ಚಂಗುಲಂಡ ಸತೀಶ್, ಕ್ರೀಡಾ ಸಂಚಾಲಕ ತಡಿಯಂಗಡ ಶಮ್ಮಿ ಸುಬ್ಬಯ್ಯ, ನಿರ್ದೇಶಕರುಗಳಾದ ಚಂಗುಲಂಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪದೇವಯ್ಯ, ತೀತಿರ ಅನಿತ ಸುಬ್ಬಯ್ಯ, ಬಾದುಮಂಡ ವಿಷ್ಣು ಕಾರ್ಯಪ್ಪ, ಬೊಳ್ಳೇರ ಅಪ್ಪುಟ ಪೊನ್ನಪ್ಪ ಹಾಜರಿದ್ದರು.
;Resize=(128,128))
;Resize=(128,128))