ಅನೇಕ ಸಂಸ್ಥೆಗಳನ್ನು ಕಟ್ಟಿ ಶಿಕ್ಷಣ ನೀಡಿದ್ದಲ್ಲದೆ ಉದ್ಯಮಿಯಾಗಿ ನಿರುದ್ಯೋಗಿಗಳಿಗೂ ಉದ್ಯೋಗ ನೀಡಿದ್ದ ಶಾಮನೂರು ಶಿವಶಂಕರಪ್ಪ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರು ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು.
ಧಾರವಾಡ:
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ವತಿಯಿಂದ ಲಿಂಗಾಯತ ಭವನದಲ್ಲಿ ದಿ. ಶಾಮನೂರು ಶಿವಶಂಕರಪ್ಪನವರ ಶ್ರದ್ಧಾಂಜಲಿ ಕಾರ್ಯಕ್ರಮ ಸೋಮವಾರ ಸಭೆ ಜರುಗಿತು.ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಪಾಟೀಲ್ ಮಾತನಾಡಿ, ಅನೇಕ ಸಂಸ್ಥೆಗಳನ್ನು ಕಟ್ಟಿ ಶಿಕ್ಷಣ ನೀಡಿದ್ದಲ್ಲದೆ ಉದ್ಯಮಿಯಾಗಿ ನಿರುದ್ಯೋಗಿಗಳಿಗೂ ಉದ್ಯೋಗ ನೀಡಿದ್ದರು. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರು ಎಲ್ಲರೊಂದಿಗೂ ಸ್ನೇಹ ಸಂಪಾದಿಸಿದ್ದವರು. ಅಜಾತಶತ್ರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಕಷ್ಟದ ಸಂದರ್ಭಗಳಲ್ಲಿ ಜನರಿಗೆ ಸಹಾಯಹಸ್ತ ಚಾಚುತ್ತಿದ್ದ ಶಿವಶಂಕರಪ್ಪನವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ವೀರಶೈವ ಲಿಂಗಾಯತ ಸಮುದಾಯಕ್ಕೆ ಬೆನ್ನೆಲುಬಾಗಿ ನಿಂತು ಸಮಾಜದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಅವರ ನಿಧನದಿಂದ ಜನಪರ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಕೋಶಾಧ್ಯಕ್ಷ ಮಡಿವಾಳಪ್ಪ ಸಿರಿಯಣ್ಣವರ, ಉಪಾಧ್ಯಕ್ಷರಾದ ಶಂಕರ ಕುಂಬಿ, ಡಾ. ಪಾರ್ವತಿ ಹಾಲಬಾವಿ ಕಾರ್ಯದರ್ಶಿ ಡಾ. ಸುವರ್ಣ ಬಿರಾದಾರ್, ನಿರ್ದೇಶಕರಾದ ಬಸವರಾಜ್ ಗೊಲ್ಲಪ್ಪನವರ, ರಾಜಶೇಖರ ಉಪ್ಪಿನ್, ಮಹೇಶ ಬಿಳೆಹಾಳ್, ಬಸವಂತಪ್ಪ ತೋಟದ, ಮೃತ್ಯುಂಜಯ ಬನ್ನೂರು, ವಿಜಯಲಕ್ಷ್ಮಿ ಕಲ್ಯಾಣ ಶೆಟ್ಟರ, ಸಂಧ್ಯಾ ಅಂಬದಗಟ್ಟಿ, ಯುವ ಘಟಕದ ಅಧ್ಯಕ್ಷ ಆನಂದ ಗಡೇಕರ್ ಇದ್ದರು.