ಮಂಗಳೂರು: ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು. ಅವರು ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಂಗಳೂರು ಹವ್ಯಕ ಮಂಡಲ ಸಹಯೋಗದೊಂದಿಗೆ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಮಂಗಳವಾರ ನಡೆದ ಶ್ರೀಶಂಕರಾಚಾರ್ಯ ಜಯಂತಿ ಸಮಾರಂಭ ಉದ್ಘಾಟಿಸಿ, ಮಾತನಾಡಿದರು.ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಲವೀನಾ ಪಿಂಟೊ ಮಾತನಾಡಿ, ಶ್ರೀ ಶಂಕರಾಚಾರ್ಯರ ಸಾಧನೆ, ಆದರ್ಶ, ಮಾಹಿತಿ ತಲುಪಲು ಅರ್ಹವಾದ ಶಿಕ್ಷಣ ಸಂಸ್ಥೆಯಲ್ಲಿ ಸರ್ಕಾರದಿಂದ ಶ್ರೀ ಶಂಕರಾಚಾರ್ಯ ಜಯಂತಿ ಆಚರಿಸುವುದು ಸೂಕ್ತವಾಗಿದೆ ಎಂದರು.ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ ಮಾತನಾಡಿ, ಗುರುಕುಲ ಮಾದರಿಯಲ್ಲಿ ವೇದಾಧ್ಯಯನ ನಡೆಯುತ್ತಿರುವ ಸ್ಥಳದಲ್ಲಿ ಶ್ರೀ ಶಂಕರಾಚಾರ್ಯರ ಮಹತ್ವವನ್ನು ಸಾರಲಾಗಿದೆ. ಅವರ ಆದರ್ಶ, ತತ್ವಗಳನ್ನು ಅನುಸರಿಸಲು ಮಕ್ಕಳಿಗೆ ಯೋಗ್ಯ ಮಾಹಿತಿ ಸಾಧ್ಯವಾಗಿದೆ ಎಂದು ಹೇಳಿದರು. ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯಾಧ್ಯಕ್ಷ ಗಣೇಶ ಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ, ಮಂಗಳೂರು ಮಧ್ಯ ಹವ್ಯಕ ವಲಯಾಧ್ಯಕ್ಷ ಅನಂತಸುಬ್ರಹ್ಮಣ್ಯ ಶರ್ಮ ಉಪನ್ಯಾಸ ನೀಡಿದರು. ಮಂಗಳೂರು ಹವ್ಯಕ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಭಟ್ ಕೋಣೆಮ್ಮೆ, ಶಂಕರಶ್ರೀ ವೇದಪಾಠಶಾಲೆ ಮುಖ್ಯ ಗುರು ವೇ.ಮೂ. ಅಮೈ ಶಿವಪ್ರಸಾದ ಭಟ್, ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ ಮತ್ತಿತರರು ಇದ್ದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಪ್ರಾಂಶುಪಾಲ ಸಂದೀಪ್ ಆಚಾರ್ಯ ವಂದಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ ಹೊಸಮನೆ ನಿರೂಪಿಸಿದರು.
ಶಂಕರರ ಆದರ್ಶ, ತತ್ವಗಳು ಸಾರ್ವಕಾಲಿಕ : ಐವನ್ ಡಿಸೋಜಾ
ಶ್ರೀ ಶಂಕರಾಚಾರ್ಯರು ಪ್ರಪಂಚಕ್ಕೇ ಶ್ರೇಷ್ಠರು. ಅವರ ಆದರ್ಶ, ತತ್ವಗಳು ಸಾರ್ವಕಾಲಿಕವಾಗಿದೆ. ಜಾತಿ, ಮತ, ಬೇಧವಿಲ್ಲದೇ ಸರ್ವರನ್ನೂ ಒಂದುಗೂಡಿಸಿದ ಮಹಾತ್ಮರು. ಅವರನ್ನು ನೆನಪಿಸಿಕೊಂಡು, ಅನುಸರಿಸುವುದು ಅತ್ಯಂತ ಅವಶ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.