ಉಡುಪಿ: ಹುಕ್ಕೇರಿ ಹಿರೇಮಠಾಧೀಶ ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಷ. ಬ್ರ. ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮತ್ತು ಕೊಣ್ಣೂರು ಮರಡಿಮಠದ ಶ್ರೀ ಮ ಘ ಚ ಪವಾಡೇಶ್ವರ ಸ್ವಾಮೀಜಿ ಸೋಮವಾರ ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮೂವರು ಶ್ರೀಗಳನ್ನು ಪರಸ್ಪರ ಗೌರವಿಸಲಾಯಿತು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ, ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು, ವೀರಶೈವ ಲಿಂಗಾಯತ ಮಹಾಸಭಾದ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.