ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸ ಮಾಡಿ ಮಕ್ಕಳನ್ನು ದಡ್ಡರು ಎಂದು ಕೈತೊಳೆದು ಕೊಳ್ಳವ ಸಂಸ್ಕೃತಿ ಬಿಟ್ಟು, ಅವರನ್ನು ಜವಾಬ್ದಾರಿಯಿಂದ ವಿದ್ಯಾವಂತರನ್ನಾಗಿ ಮಾಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಸರ್ಕಾರ ಜವಾಬ್ದಾರಿಯಿಂದ ಶಿಕ್ಷಣಕ್ಕೆ ಸಕಲ ಸವಲತ್ತುಗಳನ್ನು ಒದಗಿಸಿದೆ ಪ್ರಾಮಾಣಿಕತನ ಹಾಗೂ ಶ್ರದ್ಧೆಯಿಂದ ಪಾಠ ಮಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷಕರಿಗೆ ಸಲಹೆ ನೀಡಿದರು.