ಯತ್ನಾಳ್ ಹೇಳಿಕೆಗೆ ಸಂಸದ ರಾಘವೇಂದ್ರ ಉತ್ತರಿಸಲಿ: ಆಯನೂರು ಮಂಜುನಾಥ್ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿಜವಾಗಿಯೂ ಲಿಂಗಾಯತರೇ ಅಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಅವರು ತಮ್ಮ ಜಾತಿಯ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡಿ, ಗೊಂದಲ ನಿವಾರಿಸಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಎಸೆದರು.