ಪತ್ರಿಕಾ ಮಾಧ್ಯಮದಿಂದ ಬೌದ್ಧಿಕ ಶಕ್ತಿ ವೃದ್ಧಿ ಇತ್ತೀಚೆಗೆ ಮಕ್ಕಳಲ್ಲಿ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ದೃಶ್ಯ ಮಾಧ್ಯಮಗಳ ವೀಕ್ಷಣೆ ಹೆಚ್ಚುತ್ತಿದೆ. ಆದರೆ, ದೃಶ್ಯ ಮಾಧ್ಯಮ ನಮ್ಮ ಕಲ್ಪನೆಗಳನ್ನು ಬೆಳೆಸುವುದಿಲ್ಲ. ಕ್ರಿಯಾಶೀಲತೆಯನ್ನು ಹೆಚ್ಚಿಸಲು ಪತ್ರಿಕಾ ಮಾಧ್ಯಮದಿಂದ ಮಾತ್ರ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಆನಂದಪುರ ಗ್ರಾಪಂ ಅಧ್ಯಕ್ಷ ಕೆ.ಗುರುರಾಜ್ ಹೇಳಿದರು.