ಪ್ರತಿಯೊಬ್ಬರೂ ಕನಿಷ್ಠ ಏಳು ಗಿಡಗಳನ್ನಾದರೂ ನೆಡಿ ಹಸಿರು ಜೀವನಕ್ಕೆ ಅತಿ ಅವಶ್ಯಕ. ಪರಿಸರ ಇದ್ದರೆ ಮನುಕುಲದ ಉಳಿವು. ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲು ಹಸಿರು ನೆರವಾಗುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಕನಿಷ್ಠ ಏಳು ಗಿಡಗಳನ್ನಾದರೂ ನೆಟ್ಟು ಬೆಳೆಸಿದರೆ, ಅದಕ್ಕಿಂತ ಉತ್ತಮ ಕಾರ್ಯ ಬೇರೊಂದಿಲ್ಲ ಎಂದು ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಮಧ್ಯಪ್ರದೇಶದ ಇಂದೋರ್ ನ ನಿವಾಸಿ, ಪರಿಸರ ಪ್ರೇಮಿ ಡಾ. ಶಂಕರ್ ಲಾಲ್ ಗಾರ್ಗ್ ಹೇಳಿದರು.