• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ನಲ್ಲಿ ಮೀಸಲಿಟ್ಟ ಪಾಲನ್ನೂ ಕೊಡದ ಕೇಂದ್ರ
ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಅತಿವೃಷ್ಟಿ ಅನಾವೃಷ್ಟಿಗಳಿಗೂ ಪರಿಹಾರ ನೀಡುತ್ತಿಲ್ಲ. ಕೇಂದ್ರ ಸರ್ಕಾರದ ಬಜೆಟ್ಟಿನಲ್ಲಿ ಕಾದಿರಿಸಿದ ಅನುದಾನವನ್ನು ಕೂಡ ಕೊಡದೆ ವಂಚಿಸುತ್ತಿದ್ದು, ಸಾಮಾನ್ಯ ಜನರಿಗೆ ಈ ವಿಚಾರಗಳು ಅರಿವಿಗೇ ಬರುವುದಿಲ್ಲ ಎಂದು ಕಾಂಗ್ರೆಸ್ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದರು.
ಸರ್ಕಾರಗಳ ರೈತ ವಿರೋಧಿ ನೀತಿಗೆ ಖಂಡನೆ
ರೈತ ಸಮೂಹವನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೈಮನಗಳು ಜಿಡ್ಡುಗಟ್ಟಿದ್ದು, ಚುರುಕು ಮುಟ್ಟಿಸಲು ರೈತರು ಹೋರಾಟ ತೀವ್ರಗೊಳಿಸಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎನ್.ಕೆ. ಮಂಜುನಾಥಗೌಡ ನಿಸರಾಣಿ ಕರೆನೀಡಿದರು.
ನಾಡಗೀತೆ ವೈಶಿಷ್ಟತೆ ಅರಿತುಕೊಳ್ಳಲು ಪ್ರಯತ್ನಿಸಿ
ವಿದ್ಯಾರ್ಥಿಗಳು ದೈನಿಂದಿನ ಪ್ರಾರ್ಥನೆ ಹಾಡುವಾಗ ನಾಡಗೀತೆಯ ವೈಶಿಷ್ಟತೆ ಅರಿತುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರವಿ ಎಚ್. ಸಲಹೆ ನೀಡಿದರು.
ಟೀಕೆ, ಗದ್ದಲಗಳ ನಡುವೆ ಸಂಪನ್ನಗೊಂಡ ಯುವ ಸಂಸತ್
ಸಂಸದೀಯ ಚಟುವಟಿಕೆಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನರಚನೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಯುವ ಅಣುಕು ಸಂಸತ್ ಸ್ಪರ್ಧೆ ಆಡಳಿತ ಮತ್ತು ವಿರೋಧ ಪಕ್ಷಗಳ ಪರಸ್ಪರ ಆರೋಪ, ಪ್ರತ್ಯಾರೋಪ, ಕೆಸರೆರೆಚುವಿಕೆ, ಟೀಕೆ ಮತ್ತು ಗದ್ದಲಗಳ ನಡುವೆ ಸಂಪನ್ನಗೊಂಡಿತು.
ಈಶ್ವರಪ್ಪ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ
ಕಾಂಗ್ರೆಸ್ ನಾಯಕರನ್ನು ಕಂಡಲ್ಲಿ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ವಿರುದ್ಧ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್ ಆಗ್ರಹಿಸಿದರು.
ರಸ್ತೆ ಗುಂಡಿಗಳಿಗೆ ಬಂತು ನಾವೀನ್ಯತೆಯ ಕಾಯಕಲ್ಪ
ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟೋ ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತ ಉಂಟು ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡ ''''ಜೆ.ಎನ್.ಎನ್.ಸಿ.ಇ ಕೋಲ್ಡ್ ಪಾಟ್ ಹೋಲ್ ಮಿಕ್ಸ್'''' ಎಂಬ ಉತ್ಪನ್ನ ಆವಿಷ್ಕರಿಸಿದೆ.
ಇ- ಆಸ್ತಿ ಪ್ರಮಾಣ ಪತ್ರ ಪಡೆಯಲು ಹಣಕ್ಕೆ ಬೇಡಿಕೆ
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇ-ಆಸ್ತಿ ವ್ಯವಸ್ಥೆ ಗೊಂದಲದ ಗೂಡಾಗಿ ಪರಿಣಮಿಸಿದೆ. ನಾಗರೀಕರಿಂದ ಹಣಕ್ಕೆ ಡಿಮ್ಯಾಂಡ್ ಮಾಡಲಾಗುತ್ತಿದೆ ಎಂದು ಆರೋಪಿಸಿ, ಯುವ ಕಾಂಗ್ರೆಸ್ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಶುದ್ಧ, ಗುಣಮಟ್ಟದ ತಿನಿಸುಗಳಿಂದ ವಹಿವಾಟು ವೃದ್ಧಿಸಿ
ಸ್ವಚ್ಛ ಪರಿಸರ ಶುದ್ಧ ಹಾಗೂ ಗುಣಮಟ್ಟದ ತಿನಿಸುಗಳಿಂದ ಬೀದಿ ಬದಿ ವ್ಯಾಪಾರಸ್ಥರು ವಹಿವಾಟು ವೃದ್ಧಿಸಿಕೊಳ್ಳಲು ಸಾಧ್ಯ. ಈ ದಿಸೆಯಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಫುಡ್ ಕೋರ್ಟ್ ಆರಂಭಕ್ಕೆ ಸೂಕ್ತ ಸ್ಥಳ ಗುರುತಿಸಿ ಅವಕಾಶ ದೊರಕಿಸಿಕೊಡುವುದಾಗಿ ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.
ಮದ್ಯದಂಗಡಿ ತೆರವುಗೊಳಿಸುವಂತೆ ಪ್ರತಿಭಟನೆ
ಮದ್ಯದಂಗಡಿ ಹಾಗೂ ಲಾಡ್ಜಿಂಗ್ ತೆರವುಗೊಳಿಸುವಂತೆ ಒತ್ತಾಯಿಸಿ ಗುರುವಾರ ತಟ್ಟೆಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪರ ಕನಸಿಗೆ ಸಹಕಾರ ನೀಡಿದ್ದು ಗುತ್ತಿಗೆದಾರರು
ಸಂಪೂರ್ಣ ಶಿಕಾರಿಪುರ ತಾಲೂಕನ್ನು ಮಾದರಿ ರೀತಿಯಲ್ಲಿ ನಿರ್ಮಿಸುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕನಸಿಗೆ ಸಹಕಾರ ನೀಡಿದ್ದು ತಾಲೂಕಿನ ಗುತ್ತಿಗೆದಾರರು ಎಂದು ಸಂಸದ ಬಿವೈ. ರಾಘವೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved