ಭ್ರಷ್ಟಾಚಾರ ನಿಗ್ರಹ ಕಾನೂನುಗಳಲ್ಲೇ ಲೋಪ ಸರ್ಕಾರಿ ನೌಕರಿ ಎಂದರೆ ಜನಸೇವೆ ಮಾಡಲು ಸಿಕ್ಕ ಅವಕಾಶವೇ ಹೊರತು, ಅಧಿಕಾರ ಸಾಧಿಸುವ ವೇದಿಕೆ ಅಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮನೋಭಾವ ಬದಲಾಗಬೇಕು. ಆಗ ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟಾದರು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.