ಶಿವಮೊಗ್ಗದ ಶರಾವತಿ ಯೋಜನೆ ವಿರೋಧಿಸಿ ಮಾರ್ಚ್ 19ಕ್ಕೆ ಧರಣಿಶರಾವತಿ ನದಿ ಕಣಿವೆಯಲ್ಲಿ ಆರಂಭವಾಗಿರುವ ಅಂತರ್ಗತ ಜನ ವಿದ್ಯುತ್ಯೋಜನೆ ಮತ್ತು ಶರಾವತಿ ನದಿ ತಿರುವು ಯೋಜನೆಗಳನ್ನು ವಿರೋಧಿಸಿ ಮಾ.19ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶರಾವತಿ ನದಿ ಕಣಿವೆ ಉಳಿಸಿ ಹೋರಾಟ ಒಕ್ಕೂಟದ (ಶಿವಮೊಗ್ಗ, ಉತ್ತರ ಕನ್ನಡ) ಮುಖ್ಯಸ್ಥ ಅಖಿಲೇಶ್ ಚಿಪ್ಳಿ ಹೇಳಿದರು.