• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ 8 ಸ್ಥಾನ ಗೆಲ್ಲುತ್ತದೆಂದರೆ ಆಶ್ಚರ್ಯ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ. ಚುನಾವಣೆ ಎಂಬುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು. ಕಾಂಗ್ರೆಸ್‍ನವರ ಟೀಕೆಗೆ ಉತ್ತರ ಕೊಡಬೇಕಾಗಿಲ್ಲ. ಜೂ.4ರವರೆಗೂ ಅವರು ಕಾಂಗ್ರೆಸೇ ಅಧಿಕಾರಕ್ಕೆ ಬರುತ್ತೇ ಎಂದು ಹೇಳುತ್ತಲೇ ಇರುತ್ತಾರೆ. ಒಂದು ವೇಳೆ ಸೋತರೆ ಇವಿಎಂ ಮಿಷನ್ ಮೇಲೆ ಆರೋಪ ಹೊರಿಸುತ್ತಾರೆ.
ತಿಗಳಾರಿ ಲಿಪಿ ತಜ್ಞ ಡಾ.ಕೆಳದಿ ಗುಂಡಾ ಜೋಯಿಸ್ ನಿಧನ
ಎಂ.ಎ. ಪದವೀಧರರಾಗಿದ್ದ ಡಾ.ಗುಂಡಾ ಜೋಯಿಸ್ ಮರೆಯಾಗುತ್ತಿರುವ ಕೆಳದಿ ಇತಿಹಾಸವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಭಾರತ ಸರ್ಕಾರದ ಶಿಷ್ಯವೇತನ ಪಡೆದು ಕನ್ನಡದ ಮೋಡಿ ಲಿಪಿ ಮತ್ತು ತಿಗಳಾರಿ ಲಿಪಿ ಅಭ್ಯಾಸ ಮಾಡಿದ್ದ ಇವರು ಪುರಾತನ ಮೋಡಿಲಿಪಿ ಮತ್ತು ತಿಗಳಾರಿ ಲಿಪಿ ತಜ್ಞರಾಗಿ ಇತಿಹಾಸ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸಿದ್ದರು.
ಮೇಲ್ಮನೆ ಚುನಾವಣೆ: ಜಿಲ್ಲೆಯಲ್ಲಿ ಶೇ.80 ಮತದಾನ
ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರಿದ್ದರು. ಈ ಪೈಕಿ, 2320 ಪುರುಷರು, 1523 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಶೇ.80.61ರಷ್ಟು ಮತದಾನವಾಗಿದೆ. ಒಟ್ಟು 15578 ಪುರುಷರು, 11833 ಮಹಿಳಾ ಮತದಾರರು ನೋಂದಾಯಿಸಿದ್ದರು. ಈ ಪೈಕಿ, 12922 ಪುರುಷ, 9176 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ.
ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಯಾರ ಕಡೆಗೆ ಮತದಾರನ ವಿಜಯಮಾಲೆ ?, ತಿಂಗಳ ಕಾಲದ ಕುತೂಹಲದ ಪ್ರಶ್ನೆಗೆ ಇಂದು ಉತ್ತರ
ಜೆಡಿಎಸ್‌ ಬೆಂಬಲದೊಂದಿಗೆ ಬಿಜೆಪಿಯಿಂದ ಹಾಲಿ ಸಂಸದ ಬಿ. ವೈ.ರಾಘವೇಂದ್ರ, ಕಾಂಗ್ರೆಸ್‌ನಿಂದ ಗೀತಾ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಸೇರಿ ಒಟ್ಟು 23 ಜನ ಕಣಕ್ಕೆ ಇಳಿದಿದ್ದರು. ಮೂರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಬಿ. ವೈ.ರಾಘವೇಂದ್ರ ನಾಲ್ಕನೇ ಬಾರಿಯ ಗೆಲುವಿನ ಮೂಲಕ ಎಸ್.ಬಂಗಾರಪ್ಪ ದಾಖಲೆ ಸರಿಗಟ್ಟುವ ಉತ್ಸಾಹದಲ್ಲಿದ್ದಾರೆ.
ಮಾಲಿನ್ಯ ಮುಕ್ತ ಪರಿಸರದಿಂದ ಮಾನವ ಸಂಬಂಧ ವೃದ್ಧಿ: ಶ್ರೀಧರ್
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಗರದ ಪಾರ್ಕ್‍ಗಳು ಸೇರಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಹಸಿರೀಕರಣ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಭಾನುವಾರ ಮತ್ತು ಬುಧವಾರ ಸಸಿ ನೆಡುವ ಕಾರ್ಯಕ್ರಮದ ಮೂಲಕ ಪರೋಪಕಾರಂ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರ ಒಂದೆಡೆ ಸೇರಿಸಿ ನಾಗರಿಕ ಸಂಬಂಧವನ್ನೂ ಬೆಸೆಯಲಾಗುವುದು.
ಆಹಾರ ಪ್ರಿಯರ ಆಕರ್ಷಿಸಿದ ಶೆಟ್ಟರ ಸಂತೆ
ವೈವಿಧ್ಯಮಯ ತಿಂಡಿ ತಿನಿಸು ಅಂದ್ರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ಒಂದೇ ಸೂರಿನಡಿ ಎಲ್ಲಾದರೂ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಬಿಡೋದಕ್ಕಾಗುತ್ತಾ. ಅದರಲ್ಲೂ ಒಂದೇ ಸೂರಿನಡಿ ಎಲ್ಲಾದರೂ ಶೆಟ್ಟರ ಮನೆಯ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಇದಕ್ಕಿಂತ ತಿಂಡಿ ಪ್ರಿಯರಿಗೆ ಬೇರೇನು ಬೇಕು. ಇನ್ನು ಮನೆಯಲ್ಲಿ ತಯಾರಾದ ಬಟ್ಟೆ, ಬ್ಯಾಗು, ಚಕ್ಕುಲಿ ಕೋಡಬಳೆ, ನಿಪ್ಪಟ್ಟು, ನಿಪ್ಪಟ್ಟು ಮಸಾಲೆ, ಬೋಟಿ ಮಸಾಲೆ, ಪಾನಿಪುರಿ, ರವೆ ಉಂಡೆ ಸೇರಿ ಆರ್ಯವೈಶ್ಯರ ವಿಶಿಷ್ಟ ಖಾದ್ಯಗಳು ಮತ್ತಿತರೆ ತಿನಿಸುಗಳು ತಿಂಡಿ ಪ್ರಿಯರ ಕೈ ಬೀಸಿ ಕರೆಯುತ್ತಿದ್ದವು.
ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.
ಗ್ರಾಹಕರ ಸೋಗಲ್ಲಿ ಬಂದು ಚಿನ್ನಾಭರಣ ಕದ್ದ ಕಳ್ಳಿಯರು!
ಸಂಪತ್ ಜ್ಯುವೆಲರ್ಸ್‌ಗೆ ಗ್ರಾಹಕರಂತೆ ಬಂದಿದ್ದ ಈ ಮೂವರು ಯುವತಿಯರು ಹಾಗೂ ಓರ್ವ ಪುರುಷ ಉಂಗುರ, ವಗೈರೆಗಳನ್ನು ಖರೀದಿಸುವ ನೆಪದಲ್ಲಿ ಒಡವೆ ದೋಚಿದ್ದಾರೆ. ಉಡುಗೊರೆ ನೀಡಲು ಚಿನ್ನದ ಉಂಗುರು ಮತ್ತು ಬೆಳ್ಳಿ ದೀಪ ವಿಚಾರಿಸಿಕೊಂಡು ಓರ್ವ ಪುರುಷ, ಮೂವರು ಮಹಿಳೆಯರು ಬಂದಿದ್ದರು. ಕಡಿಮೆ ದರದ ಉಂಗುರ ತೋರಿಸುವಂತೆ ತಿಳಿಸಿದ್ದರಿಂದ ಅಂಗಡಿ ಓನರ್‌ ಹರ್ಷಬಿ ಸ್ಟೋರ್‌ ರೂಂಗೆ ತೆರಳಿದ್ದರು. ಅಂಗಡಿಯ ಕೆಲಸದ ಹುಡುಗಿ ಬೆಳ್ಳಿ ದೀಪಗಳನ್ನು ತೋರಿಸುತ್ತಿದ್ದರು. ಈ ಸಂದರ್ಭ ಹಿಂದೆ ನಿಂತಿದ್ದ ಮಹಿಳೆ ಡಿಸ್‌ಪ್ಲೇ ಡ್ರಾದಲ್ಲಿದ್ದ ಆಭರಣಗಳ ಪ್ಲಾಸ್ಟಿಕ್‌ ಬಾಕ್ಸ್‌ ತೆಗೆದುಕೊಂಡು ಬ್ಲೌಸ್‌ನೊಳಗೆ ಇಟ್ಟುಕೊಂಡು ಅಲ್ಲಿದ್ದ ಕಾಲ್ಕಿತ್ತಿದ್ದಾರೆ.
ಸಿಗಂದೂರು ದೇವಿ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನಾ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಇಲ್ಲಿನ ಬ್ಯಾಕೋಡು ಮಾರ್ಗದ ಮೂಲಕ ನೇರವಾಗಿ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದರು. ಮಧ್ಯಾಹ್ನ 3 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಸ್ಥಾನದ ಧರ್ಮಾಧಿಕಾರಿ ಎಸ್. ರಾಮಪ್ಪ ಅತ್ಮೀಯವಾಗಿ ಸ್ವಾಗತಿಸಿ, ದೇವಸ್ಥಾನದ ಪೂಜಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 423
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಆಪರೇಷನ್‌ ಸಿಂದೂರ ಭರ್ಜರಿ ಸಕ್ಸಸ್‌ : ಜಾಗತಿಕ ರಕ್ಷಣಾ ವಿಶ್ಲೇಷಕರ ಮೆಚ್ಚುಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved