ಸೊರಬ: ಬೀಡಾಡಿ ದನಗಳ ಉಪಟಳ ತಪ್ಪಿಸಿಪಟ್ಟಣದಲ್ಲಿ ಬೀಡಾಡಿ ದನಗಳು ಹೆಚ್ಚಾಗುತ್ತಿದ್ದು, ಇವುಗಳ ಉಪಟಳದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಇದನ್ನು ಸರಿಪಡಿಸುವ ಮೂಲಕ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ನೆರವಾಗಬೇಕು ಎಂದು ಆಗ್ರಹಿಸಿ ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಹಾಗೂ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ವತಿಯಿಂದ ಮಂಗಳವಾರ ಪಟ್ಟಣದ ಪುರಸಭೆ ಮುಂಭಾಗ ಕಾಲು ಮುರಿದ ಕರುವನಿಟ್ಟು ಪ್ರತಿಭಟನೆ ನಡೆಸಿದರು.