• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28 ಕ್ಕೆ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿಕೊಂಡು ಬರ್ತೇನೆ: ಬಿ.ಎಸ್‌.ಯಡಿಯೂರಪ್ಪ
ಕಳೆದ 10 ವರ್ಷದಲ್ಲಿ ಭಾರತವನ್ನು ವಿದೇಶಿಗರು ತಿರುಗಿ ನೋಡುವಂತೆ ಮೋದಿ ಅಭಿವೃದ್ಧಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ ಐದನೇ ಆರ್ಥಿಕ ಶಕ್ತಿಯಾಗಿ ಬೆಳವಣಿಗೆ ಆಗಿದೆ. ಇನ್ನು ಕೆಲವೇ ವರ್ಷದಲ್ಲಿ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ತಲುಪಲಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಸಮರ್ಥ ನಾಯಕರಾಗಿದ್ದ ಶಾಂತವೇರಿ ಗೋಪಾಲಗೌಡ: ಡಿ.ಮಂಜುನಾಥ್
ಶಾಂತವೇರಿ ಗೋಪಾಲಗೌಡರು ಸಮಾಜವಾದಿ ಸಿದ್ಧಾಂತಗಳನ್ನು ರೂಢಿಸಿಕೊಂಡು ಪ್ರಜಾಪ್ರಭುತ್ವದ ಆಶಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸುವ ಸಮರ್ಥ ನಾಯಕರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಮಾತುಗಳನ್ನು ಆಲಿಸಲು ಬಹಳಷ್ಟು ಜನರು ಸೇರುತ್ತಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ಮೋದಿ, ಬಿಜೆಪಿ ಅಲೆಯಲ್ಲಿ ತೇಲಿದ ಮಲ್ನಾಡು ನಗರಿ

ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಎಲ್ಲ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಜನರು ಸಮಾವೇಶಗೊಂಡರು.

ಲೋಕಸಭೆ ಚುನಾವಣೆ: ಶಸ್ತ್ರ/ ಆಯುಧ ಠೇವಣಿ ಇರಿಸಬೇಕು: ಜಿಲ್ಲಾಧಿಕಾರಿ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜೂನ್ 6 ರವರೆಗೆ ಜಾರಿಯಲ್ಲಿ ಇದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಲಕ್ಷಾಂತರ ಭಕ್ತರ ಸಮ್ಮುಖ ಶ್ರೀ ರೇಣುಕಾಂಬೆ ಮಹಾರಥೋತ್ಸವ
ಸೊರಬ ತಾಲೂಕು ಚಂದ್ರಗುತ್ತಿಯ ಶೀ ರೇಣುಕಾಂಬಾ ದೇವಿ ಮಹಾರಥೋತ್ಸವವು ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಟ್ಟದ ಮೇಲಿರುವ ದೇವಾಲಯದಲ್ಲಿ ಶ್ರೀ ರೇಣುಕಾಂಬಾ ದೇವಿಯ ಉತ್ಸವ ಮೂರ್ತಿಯನ್ನು ತಂದು ಅಲಂಕೃತಗೊಂಡ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ಸಾಗರ ಉಪವಿಭಾಗಾಧಿಕಾರಿ ಆರ್. ಯತೀಶ್ ಚಾಲನೆ ನೀಡಿದರು.
ಸಂಪ್ರದಾಯ ನೆಪದಲ್ಲಿ ಜಲಮೂಲಗಳ ಮಲಿನ ಸಲ್ಲದು: ಶ್ರೀಧರ್‌
ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿದೆ. ಭಕ್ತರು ಹಾಗೂ ಪ್ರವಾಸಿಗರು ಸಂಗಮ ಸ್ಥಳದಲ್ಲಿ ಬಟ್ಟೆ, ಅಸ್ಥಿ ವಿಸರ್ಜನೆ ನಂತರದ ತ್ಯಾಜ್ಯ ವಸ್ತುಗಳನ್ನು ನದಿ ಬಿಟ್ಟು, ಪಾವಿತ್ರ್ಯತೆ ಹಾಳು ಮಾಡಬಾರದು. ಪರಿಸರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಪರೋಪಕಾರಂ ಕುಟುಂಬ ಸಂಸ್ಥೆ ಮುಖ್ಯಸ್ಥ ಎನ್.ಎಂ.ಶ್ರೀಧರ್ ಕೂಡ್ಲಿಯಲ್ಲಿ ಹೇಳಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ರಾಘವೇಂದ್ರ
ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆ ಪುನಶ್ಚೇತನ ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಬಿಜೆಪಿಯ ಗುರಿಯಾಗಿದೆ. ಶರಾವತಿ ಸಂತ್ರಸ್ತರಿಗೆ, ಬಗರ್‌ಹುಕುಂ ಸಾಗುವಳಿದಾರರಿಗೆ ಮೋಸ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈಗ ನಾವು ಅದನ್ನು ಸರಿ ಮಾಡಲು ಹೊರಟಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಸಮಾವೇಶದಲ್ಲಿ ಹೇಳಿದ್ದಾರೆ.
ರಾಘಣ್ಣನನ್ನು ಸಾಹೇಬರನ್ನಾಗಿ ಮಾಡಬೇಕು: ಹರತಾಳು ಹಾಲಪ್ಪ
ಕಳೆದ ಎರಡು ಬಾರಿ ಗೆದ್ದರೂ ಬಿ.ವೈ.ರಾಘವೇಂದ್ರ ಅವರನ್ನು ರಾಘಣ್ಣ ಎಂದೇ ಜನ ಕರೆಯುತ್ತಿದ್ದಾರೆ. ಈ ಬಾರಿ ಅವರನ್ನು ಗೆಲ್ಲಿಸಿಕೊಡುವ ಮೂಲಕ ಕೇಂದ್ರದ ಮಂತ್ರಿಯನ್ನಾಗಿಸಿ ಅವರನ್ನು ಸಾಹೇಬರು ಎಂದು ಕರೆಯುವಂತೆ ಮಾಡಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಶಿವಮೊಗ್ಗ ಬಿಜೆಪಿ ಸಮಾವೇಶದಲ್ಲಿ ಹೇಳಿದ್ದಾರೆ.
ಈಶ್ವರಪ್ಪ ಜೊತೆ ಬಿಜೆಪಿ ವರಿಷ್ಠರ ಸಂಧಾನ ವಿಫಲ
ದೆಹಲಿಯಿಂದ ಬಂದ ರಾಧಾ ಮನವಿಯೂ ನಿಷ್ಫಲವಾಗಿದ್ದು, ಶಿವಮೊಗ್ಗದಲ್ಲಿ ಸ್ವತಂತ್ರ ಸ್ಪರ್ಧೆ ಖಚಿತ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಕಾಡಿಗೆ ಬೆಂಕಿ: ಕೆಲವರಿಂದ ಅರಣ್ಯ ಭೂಮಿ ಕಬಳಿಸುವ ಹುನ್ನಾರ
ಸೊರಬ ತಾಲೂಕಿನ ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮದಲ್ಲಿ ಅರಣ್ಯ ಭೂಮಿಯನ್ನು ಸರ್ಕಾರಿ ಬಂಜರು ಜಮೀನು ಎಂದು ಪರಿವರ್ತಿಸಿ ಮಂಜೂರಾತಿಗೆ ಮುಂದಾಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಸುಮಾರು ೮ ಎಕರೆ ಅರಣ್ಯ ಸಂಪೂರ್ಣ ನಾಶವಾಗಿದೆ. ಇದಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಎನ್ನುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 421
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved