ಪುತ್ರನಿಗೆ ಟಿಕೆಟ್: ಈಶ್ವರಪ್ಪ ‘ಮಾಡು ಇಲ್ಲವೆ ಮಡಿ’ ತಂತ್ರ ಅನುರಿಸ್ತಾರಾ?ಹಾವೇರಿ-ಗದಗ ಲೋಕಸಭಾ ಚುನಾವಣಾ ಟಿಕೆಟ್ ಅನ್ನು ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಪಡೆಯಲು ತೀವ್ರ ಯತ್ನ ನಡೆಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಕಟ್ಟಾಳು, ಪ್ರಖರ ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರು ಒಂದು ಪಕ್ಷ ಟಿಕೆಟ್ ನೀಡದೇ ಇದ್ದರೆ ಮುಂದೇನು ಎಂಬ ಪ್ರಶ್ನೆ ಎದುರಿಗಿಟ್ಟುಕೊಂಡು ತಮ್ಮ ಬೆಂಬಲಿಗರ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅನಿವಾರ್ಯದ ಹೆಜ್ಜೆಗೆ ಮುಂದಾಗುತ್ತಿದ್ದಾರೆಯೇ?