ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಹಬ್ಬಗಳ ಆಚರಣೆಯೇ ಕಷ್ಟ: ಕೆ.ಈ. ಕಾಂತೇಶ್ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಬಹುಸಂಖ್ಯಾತ ಹಿಂದೂಗಳು ಬದುಕುವುದೇ ದುಸ್ತರವಾಗಿದೆ. ಮುಸ್ಲಿಂ ಓಲೈಕೆ ಮತ್ತು ತುಷ್ಠೀಕರಣದಿಂದಾಗಿ ಹಿಂದೂಗಳು ತಮ್ಮ ಹಬ್ಬಗಳ ಆಚರಣೆಗಳನ್ನು ಮಾಡುವುದೇ ಕಷ್ಟವಾಗಿದ್ದು, ಅದಕ್ಕೆ ಮದ್ದೂರಿನಲ್ಲಿ ನಡೆದ ಘಟನೆಯೇ ಸಾಕ್ಷಿ ಎಂದು ಜಿಪಂ ಮಾಜಿ ಸದಸ್ಯ, ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಕೆ.ಈ. ಕಾಂತೇಶ್ ಹೇಳಿದರು.