• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವಧಿಯಲ್ಲಿ ಅಧಿಕ ಅನುದಾನ: ಸಂಸದ
ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಅತಿ ಹೆಚ್ಚಿನ ಅನುದಾನ ನೀಡಿ, ಕಾಳಜಿ ವಹಿಸಿದ್ದಾರೆ. ಮಕ್ಕಳು ಈ ಸೌಲಭ್ಯದ ಸದುಪಯೋಗ ಪಡೆದು ಅತ್ಯುತ್ತಮ ಫಲಿತಾಂಶದ ಮೂಲಕ ತಾಲೂಕಿನ ಕೀರ್ತಿ ಹೆಚ್ಚಿಸಬೇಕು ಎಂದು ಸಂಸದ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಸೂರ್ಯನ ಚಿನ್ನದ ಕಿರಣವಾಯ್ತು ಕಾದ ಕಬ್ಬಿಣ!
ಮಳೆ ಮತ್ತು ಚಳಿಗಾಲದಲ್ಲಿ ಸದಾ ತಂಪಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬಿಸಿಲಿನ ಆರ್ಭಟ. ಬಯಲು ಸೀಮೆ ಬಿಸಿಲನ್ನು ನಾಚಿಸುವಂತೆ ಮಲೆನಾಡಿನಲ್ಲಿ ಬಿಸಿಲಿನ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದು, ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮಾರ್ಚ್‌ ಪ್ರಾರಂಭದಲ್ಲೆ ಬಿಸಿಲಿನ ಝಳ ವಿಪರೀತವಾಗಿದೆ. ಅಧಿಕ ಬಿಸಿಲಿನಿಂದ ರಕ್ಷ ಣೆ ಪಡೆಯಲು ಜನರು ಮರಗಳ ಕೆಳಗೆ, ಗಾಳಿ ಬೀಸುವ ಕೆಲ ವಸ್ತುಗಳಿಗೆ ಮೊರೆಹೋಗಿದ್ದಾರೆ. ಬೀದಿ ವ್ಯಾಪಾರಿಗಳಿಗೆ ಗ್ರಾಹಕರಿಲ್ಲ, ಗಾಂಧಿಬಜಾರ್‌, ಬಿಗ್‌ ಬಜಾರ್‌ನಂತಹ ಮಾರುಕಟ್ಟೆಗಳ ವ್ಯಾಪಾರವೂ ಡಲ್‌ ಆಗಿದೆ.
ಪ್ರೇಕ್ಷಕರ ಮನರಂಜಿಸಿದ ಟಗರುಗಳ ಜಿದ್ದಾಜಿದ್ದಿ ಕಾಳಗ
ರಂಗೇರಿರುವ ಅಖಾಡ, ಅಖಾಡದಲ್ಲಿ ಗೆಲುವು ನಂದೇ ಅಂತ ಗುದ್ದಾಡುತ್ತಿರುವ ಟಗರುಗಳು, ಹಿಂದೆ ಹೆಜ್ಜೆಯಿಟ್ಟು ಮರುಕ್ಷಣವೇ ಮುಂದೆ ನುಗ್ಗಿ ಡಿಕ್ಕಿ ಹೊಡೆಯುತ್ತಾ ಎದುರಾಳಿಯನ್ನು ಮಣ್ಣು ಮುಕ್ಕಿಸಲು ಹೋರಾಟ, ಕೊಬ್ಬಿದ ಟಗರುಗಳ ಅಬ್ಬರದ ಕಾಳಗ ಕಂಡು ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುತ್ತಿದ್ದ ಪ್ರೇಕ್ಷಕರು.. ಈ ರೋಚಕ ದೃಶ್ಯ ಶಿವಮೊಗ್ಗ ನಗರದ ಎನ್‌ಇಎಸ್‌ ಮೈದಾನದಲ್ಲಿ ಭಾನುವಾರ ಮಾರಿಕಾಂಬ ಜಾತ್ರೆ ಅಂಗವಾಗಿ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಆಯೋಜಿಸಿದ್ದ ಟಗರು ಕಾಳಗದಲ್ಲಿ ಕಂಡುಬಂದವು.
ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಎಸ್‌ಪಿ ನೇತೃತ್ವದಲ್ಲಿ ಮ್ಯಾರಥಾನ್
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಶಿವಮೊಗ್ಗ ನಗರದಲ್ಲಿ ಮ್ಯಾರಥಾನ್ ಓಟ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.
ಮೌಢ್ಯಗಳ ವಿರುದ್ಧ ಸಾಹಿತ್ಯ ರಚನೆಗೆ ಯುವ ವೈದ್ಯರು ಮುಂದಾಗಲಿ
ಇಂದಿನ ಆಧುನಿಕ ಯುಗದಲ್ಲೂ ಜನರು ವೈದ್ಯರನ್ನು ನಂಬುವುದಕ್ಕಿಂದ ಮಂತ್ರವಾದಿಗಳನ್ನು ಹೆಚ್ಚು ನಂಬುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಸಾಹಿತ್ಯದ ಉದ್ದೇಶ ಜನರಲ್ಲಿ ಅರಿವು ಮೂಡಿಸಲು ಯುವ ವೈದ್ಯರು ಮುಂದೆ ಬರಬೇಕು. ಜನರಲ್ಲಿರುವ ಮೌಢ್ಯಗಳ ನಿವಾರಣೆ ಕಾರಣಕ್ಕೆ ಚಂದ್ರಪ್ಪಗೌಡ ವೈದ್ಯಕೀಯ ಸಾಹಿತ್ಯ ಬರೆಯಲು ಮುಂದಾದರು ಎಂದು ಮನೋವೈದ್ಯ ಸಿ.ಆರ್.ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಹಿಳೆಯರು ಪ್ರೋತ್ಸಾಹಕ್ಕೆ ಕಾಯದೇ ಗುರಿ ತಲುಪಬೇಕು: ಅನಿತಾ ಪ್ರಕಾಶ್‌
ಮಹಿಳೆಯರು ಪ್ರೋತ್ಸಾಹಕ್ಕೆ ಕಾಯುತ್ತಾ ಕೂರದೆ ತನ್ನ ಗುರಿಯನ್ನು ನೆನೆದು ಅನುಷ್ಠಾನಕ್ಕಾಗಿ ಪ್ರಯತ್ನಿಸಬೇಕು. ಮಹಿಳಾ ಸಾಧನೆಗೆ ಪೂರಕವಾಗಿ ಪ್ರತಿಯೊಬ್ಬರು ಪ್ರಯತ್ನಿಸಬೇಕು,ಯೋಜನೆಗಳನ್ನು ರೂಪಿಸಬೇಕು. ಆಗ ಮಾತ್ರ ಸಬಲೀಕರಣ ಸಾಧ್ಯ ಎಂದು ಜ್ಞಾನದೀಪ ಆಂಗ್ಲ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಅನಿತಾ ಪ್ರಕಾಶ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ದಿವ್ಯಾಂಗರ ಸ್ವಾವಲಂಬನೆಗೆ ಕೇಂದ್ರ ಯೋಜನೆಗಳು ಸಹಕಾರಿ
ದಿವ್ಯಾಂಗರು ಮತ್ತು ಹಿರಿಯ ನಾಗರೀಕರು ಸ್ವಾಭಿಮಾನದಿಂದ ಬದುಕಲು ಅನುವಾಗುವಂತೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. ಜೀವನದ ಸವಾಲುಗಳನ್ನು ಎದುರಿಸಲು ದೇವರು ದಿವ್ಯಾಂಗರಿಗೆ ದುಪ್ಪಟ್ಟು ಶಕ್ತಿ ನೀಡಿರುತ್ತಾನೆ. ಜೊತೆಗೆ ಕೇಂದ್ರ ಸರ್ಕಾರ ಕೂಡ ಅವರು ಸ್ವಾಭಿಮಾನದಿಂದ ಬದುಕಲು ಅವಶ್ಯಕವಾದ ಸೌಲಭ್ಯಗಳನ್ನು ವಿತರಿಸುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅನಿವಾಸಿ ಕನ್ನಡಿಗರ ರಕ್ಷಣೆಗೆ ಪ್ರತ್ಯೇಕ ಸಚಿವಾಲಯ: ಡಾ.ಆರತಿ ಕೃಷ್ಣ
ವ್ಯಾಪಾರ, ಶಿಕ್ಷಣ ಸೇರಿದಂತೆ ನಾನಾ ಕಾರಣಕ್ಕೆ ಹೊರ ದೇಶಗಳಿಗೆ ತೆರಳುವ ಮತ್ತು ಅಲ್ಲಿ ತಾತ್ಕಾಲಿಕವಾಗಿ ನೆಲೆಸಿರುವ ಅನಿವಾಸಿ ಕನ್ನಡಿಗರ ರಕ್ಷಣೆ ಮತ್ತು ಸಾಮಾಜಿಕ ಭದ್ರತೆ ದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿವರಾತ್ರಿಯಂದು ನಾಟ್ಯ ತರಂಗ ಸಂಸ್ಥೆ ಕಲಾವಿದರಿಂದ ನೃತ್ಯ ಸೇವೆ
ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ನಾಟ್ಯ ತರಂಗ ಸಂಸ್ಥೆ ಕಲಾವಿದರು ವಿದ್ವಾನ್ ಜಿ.ಬಿ. ಜನಾರ್ದನ್‌ ಮಾರ್ಗದರ್ಶನದಲ್ಲಿ ಶುಕ್ರವಾರ ಸಂಜೆ ೬.೩೦ರಿಂದ ಶನಿವಾರ ಬೆಳಗ್ಗೆ ೫ ಗಂಟೆವರೆಗೆ ಎಂಟು ಶಿವಾಲಯಗಳಲ್ಲಿ ವಿನೂತನ ಪರಿಕಲ್ಪನೆಯಾದ ಶಿವ ಜಾಗರಣೆ ನೃತ್ಯ ಸಂಚಾರವನ್ನು ನಡೆಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಸಂಸ್ಥೆ ಮುಖ್ಯಸ್ಥ ವಿದ್ವಾನ್ ಜಿ.ಬಿ.ಜನಾರ್ಧನ ಅವರ ಪರಿಕಲ್ಪನೆಯಲ್ಲಿ ಮಹಾಶಿವರಾತ್ರಿ ಜಾಗರಣೆಯಂದು ಶಿವನನ್ನು ನೃತ್ಯದ ಮೂಲಕ ಪೂಜಿಸಬೇಕೆನ್ನುವ ಪರಿಕಲ್ಪನೆಯಲ್ಲಿ ಹುಟ್ಟಿಕೊಂಡ ಕಾರ್ಯಕ್ರಮವೇ ಶಿವ ಸಂಚಾರ ನೃತ್ಯ ಜಾಗರಣೆ.
ಶುದ್ಧ ಕುಡಿಯುವ ನೀರಿನ ಯೋಜನೆ ಸಾಕಾರ: ಜ್ಞಾನೇಂದ್ರ
2024ರೊಳಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಆಶ್ವಾಸನೆಯಂತೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆಯನ್ನು ನೀಡಿದೆ. ಜನಪರವಾದ ಈ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 420
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved