• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ಅಡಕೆ ಬೆಳೆಗಾರರ ಹಿತಕಾಯಿರಿ
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ವಿಷಯ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆ ಬೆಳೆಗಾರರ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿ, ಅಡಕೆ ಸಹಕಾರ ಸಂಘಗಳ ಮಹಾಮಂಡಲ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಗವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಭದ್ರಾವತಿ: ಈಶ್ವರ ದೇಗುಲಗಳಲ್ಲಿ ಶಿವರಾತ್ರಿ ವಿಜೃಂಭಣೆ ಪೂಜೆ
ಮಹಾಶಿವರಾತ್ರಿ ಅಂಗವಾಗಿ ನಗರದ ಈಶ್ವರ ದೇವಾಲಯಗಳಲ್ಲಿ ಶುಕ್ರವಾರ ವಿಶೇಷ ಅಲಂಕಾರ, ಪೂಜೆ, ಹೋಮ-ಹವನ ಸೇರಿದಂತೆ ಧಾರ್ಮಿಕ ಆಚರಣೆಗಳು ವಿಜೃಂಭಣೆಯಿಂದ ಜರುಗಿದವು. ನಗರದ ಹೃದಯ ಭಾಗದಲ್ಲಿ ಹರಿಯುತ್ತಿರುವ ಭದ್ರಾನದಿಯ ಸಂಗಮೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಹಾವೇರಿ ಟಿಕೆಟ್‌ ಕಾಂತೇಶ್‌ಗೆ ನೀಡಿ, ಗೆಲ್ಲಿಸ್ತಾರೆ: ಈಶ್ವರಪ್ಪ ವಿಶ್ವಾಸ
ಹಾವೇರಿಯಲ್ಲಿ ಪುತ್ರ ಕೆ.ಇ. ಕಾಂತೇಶ್‌ಗೆ ಟಿಕೆಟ್ ಸಿಗುವುದು ಖಚಿತ. ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಕಾಂತೇಶ್‌ಗೆ ಟಿಕೆಟ್ ನೀಡುವುದು ಮಾತ್ರವಲ್ಲ, ಗೆಲ್ಲಿಸಿಕೊಂಡು ಬರುವ ಭರವಸೆ ನೀಡಿದ್ದಾರೆ. ಅವರು ಮಾತಿಗೆ ಎಂದೂ ತಪ್ಪುವರಲ್ಲ. ಹೀಗಾಗಿ, ಟಿಕೆಟ್ ವಿಚಾರದಲ್ಲಿ ಯಾವುದೇ ಆತಂಕ ಇಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಚಿವ ಮಧು ಬಂಗಾರಪ್ಪ ಜನ್ಮದಿನ: 11ರಂದು ವಿವಿಧ ಸಸಿಗಳ ವಿತರಣೆ
ಬಂಗಾರಪ್ಪ ಅಭಿಮಾನಿಗಳ ವತಿಯಿಂದ ಸಚಿವ ಮಧು ಬಂಗಾರಪ್ಪ ಜನ್ಮದಿನವನ್ನು ಸಸಿ ವಿತರಿಸುವ ಮೂಲಕ ಆಚರಿಸಲಾಗುವುದು. ಮಾ.11ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸಸಿ ವಿತರಣೆ ಕಾರ್ಯಕ್ರಮ ನಡೆಯಲಿದೆ. ಶ್ರೀಗಂಧ, ಸಾಗುವಾನಿ, ತೆಂಗು ಸೇರಿ ವಿವಿಧ ಜಾತಿಯ ಸಸಿಗಳ ನೀಡಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಬ್ರಹ್ಮಕುಮಾರಿಯರ ನಿಸ್ವಾರ್ಥ ಸಮಾಜ ಸೇವೆ ಶ್ಲಾಘನೀಯ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಲವು ವರ್ಷಗಳಿಂದ ಜ್ಞಾನ ನೀಡಿ, ಧ್ಯಾನ ಕಲಿಸಿ, ಸಂಸ್ಕಾರ ಪರಿವರ್ತನೆಯಿಂದ ಉತ್ತಮ ವ್ಯಕ್ತಿಗಳಾಗಲು ಮಾರ್ಗದರ್ಶನ ಮಾಡುತ್ತಿದೆ. ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ನಿರಂತರ ಸಮಾಜ ಸುಧಾರಣೆ ಕಾರ್ಯವನ್ನು ಮಾಡುತ್ತಿರುವುದು ಎಂದು ಶ್ಲಾಘನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ನನಗೇ ಟಿಕೆಟ್‌ ಸಿಗೋದು ಖಚಿತ: ಕಾಂತೇಶ್ ವಿಶ್ವಾಸ
ಈ ಬಾರಿ ಲೋಕಸಭಾ ಚುನಾವಣೆಗೆ ಹಾವೇರಿ-ಗದಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ನನಗೆ ಸಿಗಲಿದೆ. ದೃಶ್ಯ ಮಾಧ್ಯಮಗಳಲ್ಲಿ ಹಾವೇರಿ ಲೋಕಸಭಾ ಚುನಾವಣೆಗೆ ಕಾಂತೇಶ್‌ಗೆ ಪಕ್ಷದ ಟಿಕೆಟ್ ಸಿಗುತ್ತಾ ಅಥವಾ ಇಲ್ಲವೋ ಎಂಬ ಚರ್ಚೆ ಆರಂಭ ಆಗಿರುವುದರಿಂದ ಕಾರ್ಯಕರ್ತರು ಸ್ವಲ್ಪ ಗೊಂದಲಕ್ಕೆ ಒಳಗಾಗಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಗೊಂದಲಪಡುವುದು ಬೇಡ. ಬಿ.ಎಸ್‌. ಯಡಿಯೂರಪ್ಪ ನನಗೆ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ನನ್ನ ಪರವಾಗಿ ಪ್ರಚಾರಕ್ಕೂ ಬರುವುದಾಗಿ ತಿಳಿಸಿದ್ದರು ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪುತ್ರ ಕೆ.ಇ. ಕಾಂತೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲಾದ್ಯಂತ ಶಿವರಾತ್ರಿ ಸಂಭ್ರಮ, ವಿಶೇಷ ಪೂಜೆ
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯೆಲ್ಲೆಡೆ ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಯಿತು. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿತ್ತು. ಶಿವನ ದರ್ಶನ ಪಡೆದ ಭಕ್ತರು ಭಕ್ತಿಯ ಭಾವದಲ್ಲಿ ಮಿಂದೆದ್ದರು.
ಪರಿಸರಕ್ಕೆ ಮಾರಕವಾದ ವಿದ್ಯುತ್ ಯೋಜನೆ ಕೈಬಿಡಿ
ಕರ್ನಾಟಕ ವಿದ್ಯುತ್ ನಿಗಮ ಶರಾವತಿ ಕಣಿವೆಯಲ್ಲಿ ಬೃಹತ್ ಜಾಲ ವಿದ್ಯುತ್ ಯೋಜನೆ ಜಾರಿ ಮಾಡಲು ತಯಾರಿ ನಡೆಸಿದ್ದು, ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡಬೇಕು. ಪಶ್ಚಿಮಘಟ್ಟದ ಹೃದಯ ಭಾಗವಾಗಿರುವ ಶರಾವತಿ ಕಣಿವೆಯಲ್ಲಿ ೨೦೦೦ ಮೆ.ವ್ಯಾ. ಸಾಮರ್ಥ್ಯದ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಜಾರಿಗೆ ಸರ್ಕಾರ ಮತ್ತು ವಿದ್ಯುತ್ ನಿಗಮ ಮುಂದಾಗಿದೆ. ಈ ಹಿನ್ನೆಲೆ ಪರಿಸರ ರಕ್ಷಣೆ ಮಾಡಬೇಕೆಂದು ವೃಕ್ಷಲಕ್ಷ ಆಂದೋಲನದ ನಿಯೋಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿತು.
ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್‌ಗೆ ಲೋಕಸಭೆ ಟಿಕೆಟ್
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿಯೇ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಯಾವುದೇ ಬಂಡಾಯದ ಸದ್ದಿಲ್ಲದೇ ಟಿಕೆಟ್ ಪಡೆದುಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಅವರೇ ಉಸ್ತುವಾರಿ ಸಚಿವರೂ ಆಗಿರುವುದರಿಂದ ಇದಕ್ಕೆ ಪಕ್ಷದಲ್ಲಿ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗೆಯೇ ನೋಡಿಕೊಂಡಿದ್ದಾರೆ ಕೂಡ.
ಭಕ್ತರ ಪ್ರೀತಿ ಮರೆಯಲು ಸಾಧ್ಯವಿಲ್ಲ: ಮಹಾಂತ ಶ್ರೀ
ಯಾವುದೇ ಮೋಹ, ಲೋಭಗಳಿಲ್ಲದೇ, ಶುದ್ಧ ಮನಸ್ಸಿನಿಂದ ಸೇವಾ ಮನೋಭಾವದಿಂದ ಮಾಡುವ ಕಾರ್ಯಗಳಿಂದ ಮತ್ತು ಮಠಗಳಿಗೆ ಭಕ್ತರು ತೋರಿಸುವ ಪ್ರೀತಿ, ವಾತ್ಸಲ್ಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸೊರಬ ತಾಲೂಕು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 420
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved