• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರೋಧ ಮಧ್ಯೆಯೇ ಬಹುಗ್ರಾಮ ಕುಡಿವ ನೀರು ಯೋಜನೆಗೆ ಚಾಲನೆ
ತೀರ್ಥಹಳ್ಳಿ ತಾಲೂಕಿಗೆ ಮಂಜೂರಾಗಿರುವ ₹344 ಕೋಟಿ ಅನುದಾನದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಜನವಿರೋಧ, ಪ್ರತಿಭಟನೆ ನಡುವೆಯೂ ಸೋಮವಾರ ಪೊಲೀಸ್‌ ಬಿಗಿ ಬಂದೋಬಸ್ತ್‌ನೊಂದಿಗೆ ಚಾಲನೆ ನೀಡಲಾಯಿತು. ಕೋಡ್ಲು ಗ್ರಾಮದ ಸ.ನಂ. 142ರಲ್ಲಿ ಈ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಬೆಳಗ್ಗಿನ ಜಾವ ಉದ್ದೇಶಿತ ಯೋಜನಾ ಸ್ಥಳಕ್ಕೆ ಯಾರೂ ತೆರಳದಂತೆ ರಸ್ತೆಗಳಿಗೆ ರೈತರು ಟ್ರ್ಯಾಕ್ಟರ್, ಕಾರು, ಬೈಕ್ ಸೇರಿದಂತೆ ಇನ್ನಿತರ ವಾಹನಗಳನ್ನು ಅಡ್ಡಗಟ್ಟಿ ನಿಲ್ಲಿಸಲಾಗಿತ್ತು. ಬಳಿಕ ಕಾಮಗಾರಿಗೆ ಅಗತ್ಯವಾದ ಸರಕು, ವಾಹನ, ಜೆಸಿಬಿಗಳಿಗೆ ತೆರಳಲು ಅವಕಾಶ ಕಲ್ಪಿಸಿ, 70ಕ್ಕೂ ಹೆಚ್ಚು ಪೊಲೀಸ್ ಬಂದೋಬಸ್ತ್‌ನಲ್ಲಿ ಜಿಲ್ಲಾಡಳಿತ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಾಳೆ ಅಂಬ್ಲಿಗೊಳ್ಳ ಶಾಲೆಯಲ್ಲಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪನೆ
ಸಂವಿಧಾನ ಕರ್ತೃ ಅಂಬೇಡ್ಕರ್‌ ಅವರ ಸ್ಮರಣಾರ್ಥ ತಾಲೂಕಿನ ಅಂಬ್ಲಿಗೊಳ ಸರ್ಕಾರಿ ಶಾಲೆಯಲ್ಲಿ ಪ್ರತಿಮೆ ನಿರ್ಮಿಸುವ ಉತ್ತಮ ಕಾರ್ಯ ಸದ್ದಿಲ್ಲದೇ ನಡೆದಿದೆ. ಶಾಲೆ ಹಾಗೂ ಪೋಷಕರು, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಅರಿವು ಮೂಡಿಸುವುದು ಈ ಪ್ರಯತ್ನದ ಉದ್ದೇಶವಾಗಿದೆ. ಅಂಬ್ಲಿಗೊಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕ ಪಾಪಯ್ಯ ನೇತೃತ್ವದಲ್ಲಿ ಎಲ್ಲ ಶಿಕ್ಷಕರು, ಸ್ಥಳೀಯ ದಾನಿಗಳ ನೆರವಿನಿಂದ ಸಂವಿಧಾನ ಶಿಲ್ಪಿಯ ಅಂದಾಜು 13 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಫೆ.28ರಂದು ಲೋಕಾರ್ಪಣೆಗೆ ಸಕಲ ಸಿದ್ಧತೆ ನಡೆದಿದೆ. ಅಂದಾಜು ₹1.5 ಲಕ್ಷ ವೆಚ್ಚದಲ್ಲಿ ಈ ಪ್ರತಿಮೆ ಶಾಲೆ ಆವರಣದಲ್ಲಿ ತಲೆಯೆತ್ತಿ ನಿಲ್ಲಲಿದೆ.
ಅಧಿಕಾರ ಅವಧಿಯಲ್ಲಿ ಕ್ಷೇತ್ರ ಸಮಗ್ರ ಅಭಿವೃದ್ಧಿ: ಬಿವೈಆರ್
ಸಮುದಾಯ ಭವನಗಳು ಮಂಗಳ ಕಾರ್ಯದ ಮೂಲಕ ಸಂಬಂಧವನ್ನು ಬೆಸೆದು, ಎಲ್ಲರನ್ನು ಒಗ್ಗೂಡಿಸುವ ಪುಣ್ಯದ ಸ್ಥಳವಾಗಿರುತ್ತವೆ. ಈ ದಿಸೆಯಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಸಮುದಾಯ ಭವನ ನಿರ್ಮಿಸಿ ಎಲ್ಲ ಸಮುದಾಯ ಜನರ ಹಿತಕಾಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಈ ಮಹತ್ಕಾರ್ಯಕ್ಕೆ ತಾಲೂಕಿನ ಎಲ್ಲ ವರ್ಗದ ಜನತೆಯ ಬೆಂಬಲ ಬಹುಮುಖ್ಯ ಕಾರಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ರಾಮ ಜಪದಿಂದ ರೈತರ ಸಮಸ್ಯೆಗಳು ಬಗೆಹರಿಯಲ್ಲ
ರಾಮನ ಜಪದಿಂದ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲ. ಶಿಕ್ಷಣ, ನಿರುದ್ಯೋಗ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ದೇಶದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ, ಮುಗ್ದ ಜನರನ್ನು ಒಗ್ಗೂಡಿಸುವ ಮೂಲಕ ಓಟ್ ಬ್ಯಾಂಕ್ ರಾಜಕಾರಣ ಮಾಡೋದನ್ನು ಇನ್ನಾದರೂ ಬಿಡಬೇಕು ಎಂದು ಸಮಾಜ ಚಿಂತಕ ಟಿ.ರಾಜಪ್ಪ ಮಾಸ್ತರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಸೊರಬದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಿಡಿಕಾರಿದರು.
ದಲಿತ ಸಂಘಟನೆಗಳ ಮೇಲೆ ಮಹತ್ತರ ಜವಾಬ್ದಾರಿ
ಸಮಾಜದಲ್ಲಿ ದಲಿತ ಸಂಘಟನೆಗಳ ಜವಾಬ್ದಾರಿ ಮಹತ್ತರವಾಗಿದೆ. ಸಂಘಟನೆಗಳನ್ನು ಸ್ಥಾಪಿಸುವುದು ಸುಲಭ. ಆದರೆ ತತ್ವ, ಸಿದ್ಧಾಂತದ ಜೊತೆಗೆ ನಿರಂತರವಾಗಿ ಮುನ್ನಡೆಸುವುದು ಸುಲಭವಲ್ಲ. ದಲಿತ ಸಂಘಟನೆಗಳ ಸ್ಥಾಪನೆ ಉತ್ತಮ ಬೆಳವಣಿಗೆ. ದಲಿತ ಸಂಘಟನೆಗಳಿಗೆ ಎಲ್ಲ ಜನಾಂಗದ ಪ್ರೋತ್ಸಾಹ ಸಿಗಬೇಕು. ಅಂಬೇಡ್ಕರ್ ಸೇನೆಗೆ ಸದಾ ಸ್ಪಂದಿಸಲು ಸಿದ್ಧ ಎಂದು ಭದ್ರಾವತಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣ ಜತೆಗೆ ಆತ್ಮರಕ್ಷಣೆ ಕಲೆಗಳೂ ಮುಖ್ಯ: ಶ್ರೀಪಾದ ಬಿಚ್ಚುಗತ್ತಿ
ಶೈಕ್ಷಣಿಕ ಪ್ರಗತಿಯ ಜತೆಗೆ ಸ್ವಾವಲಂಬನೆ, ಆತ್ಮರಕ್ಷಣೆಗೆ ಪೂರಕ ಆಗುವಂತಹ ಚಟುವಟಿಕೆಗಳನ್ನು ಮಕ್ಕಳಿಗೆ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಬೇಕು. ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಪೂರಕವಾಗಿ ಶಿಕ್ಷಣ ದೊರಕಬೇಕು. ಆಗ ಮಾತ್ರ ಗುಣಾತ್ಮಕ ಶಿಕ್ಷಣಕ್ಕೆ ಅರ್ಥ ಮೂಡುತ್ತದೆ. ವಿಶೇಷವಾಗಿ ಹಳೇ ಸೊರಬ ಸರ್ಕಾರಿ ಪ್ರೌಢಶಾಲೆ ಗ್ರಾಮಾಂತರ ಪ್ರದೇಶಗಳ ಮಕ್ಕಳ ಅಂತರ್ಗತ ಮೌಲ್ಯಗಳನ್ನು ಗುರುತಿಸಿ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಸೊರಬದಲ್ಲಿ ಹೇಳಿದ್ದಾರೆ.
ಜಿಲ್ಲೆಯಲ್ಲೂ ಶುರುವಾಯ್ತು ಟೋಲ್‌ ಪಾವತಿ ಸಂಚಾರ!
ರಾಜ್ಯ ಹೆದ್ದಾರಿಗಳಲ್ಲಿ ಟೋಲ್‌ ಗೇಟ್‌ ವಿರುದ್ಧ ಜನರ ಆಕ್ರೋಶದ ನಡುವೆಯೂ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ಹೊಸ ಟೋಲ್‌ ನಿರ್ಮಾಣಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 2 ಟೋಲ್‌ ಗೇಟ್‌ ಸ್ಥಾಪಿಸಲಾಗಿದ್ದು, ಇನ್ಮುಂದೆ ಟೋಲ್‌ ಪಾವತಿಸಿ ಜನರು ಸಂಚರಿಸಬೇಕಾದ ಅನಿವಾರ್ಯತೆ ಇದೆ. ಶಿವಮೊಗ್ಗ – ಸವಳಂಗ ನಡುವೆ 1 ಟೋಲ್‌ ಗೇಟ್‌ ಸ್ಥಾಪಿಸಲಾಗಿದೆ. ಶಿಕಾರಿಪುರ– ಶಿರಾಳಕೊಪ್ಪ ನಡುವೆ ಇನ್ನೊಂದು ಟೋಲ್‌ ನಿರ್ಮಿಸಲಾಗಿದೆ. ಆದರೆ, ಈ ಭಾಗದ ರಸ್ತೆಯಲ್ಲಿ ಶಿಕಾರಿಪುರ, ಸೊರಬ ತಾಲೂಕಿನ ನೂರಾರು ಹಳ್ಳಿಯ ರೈತರು ಒಂದಿಲ್ಲೊಂದು ಕಾರಣಕ್ಕೆ ಶಿಕಾರಿಪುರ ಹಾಗೂ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಮುಂದೆ ಇವರೆಲ್ಲರು ಟೋಲ್‌ ಕಟ್ಟಿ ಮುಂದೆ ಸಾಗಬೇಕಿದೆ.
ಸೊಪ್ಪಿನಬೆಟ್ಟ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
ಸಾಗರ ತಾಲೂಕಿನ ಬೇಳೂರು ಗ್ರಾಮದ ಸ.ನಂ. ೪೦ರ ಸೊಪ್ಪಿನ ಬೆಟ್ಟದಲ್ಲಿ ಅನಧಿಕೃತವಾಗಿ ಜಾಗ ಒತ್ತುವರಿ ಮಾಡುತ್ತಿರುವುದರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಬೇಳೂರು ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸೊಪ್ಪಿನ ಬೆಟ್ಟವನ್ನು ಅನಾದಿ ಕಾಲದಿಂದಲೂ ಕಾಪಾಡಿಕೊಂಡು ಬರುತ್ತಿದ್ದೇವೆ. ಇತ್ತೀಚೆಗೆ ಕೆಲವರು ಅನಧಿಕೃತವಾಗಿ ಜಾಗವನ್ನು ಒತ್ತುವರಿ ಮಾಡಿ ತಾತ್ಕಾಲಿಕ ಷೆಡ್‌ಗಳನ್ನು ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದಿದ್ದಾರೆ.
ಬೂತ್ ಮಟ್ಟದಿಂದ ಬಿಜೆಪಿಗೆ ಶಕ್ತಿ ತುಂಬಲು ಶ್ರಮಿಸಿ: ಬಿವೈಆರ್‌
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಇದರಿಂದ, ಸಮಾಜವನ್ನು ಎಚ್ಚರಿಸುವ ಕಾರ್ಯ ಆಗಬೇಕಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇಲ್ಲಿ ಬೂತ್ ಮಟ್ಟದಿಂದ ಪಕ್ಷಕ್ಕೆ ಶಕ್ತಿ ತುಂಬಲು ಶ್ರಮಿಸಬೇಕು. ಇದಕ್ಕೆ ಮೋರ್ಚಾಗಳ ಪದಾಧಿಕಾರಿಗಳ ಶ್ರಮ ಅಗತ್ಯ. ಆದ್ದರಿಂದ ಪಕ್ಷ ಸಂಘಟನೆಗೆ ಒಗ್ಗೂಡಬೇಕು ಎಂದು ಸಂಸದ ಬಿ‌.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಮನವಿ ಮಾಡಿದ್ದಾರೆ.
ಸಿದ್ಧಾಂತಕ್ಕೆ ಬದ್ಧರಾಗಿದ್ದ ಕೋಣಂದೂರು ಲಿಂಗಪ್ಪ: ಜ್ಞಾನೇಂದ್ರ
ರಾಜಕೀಯ ಕ್ಷೇತ್ರದಲ್ಲಿ ಸಿದ್ಧಾಂತ ಇಸಂ ಮುಂತಾದ ಎಲ್ಲ ಶಬ್ದಗಳು ಭಾಷಣಕ್ಕೆ ಸೀಮಿತವಾಗಿವೆ. ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರಂತೆ ಕೋಣಂದೂರು ಲಿಂಗಪ್ಪ ಕೂಡ ತಾವು ನಂಬಿದ ಸಿದ್ಧಾಂತಕ್ಕೆ ಬದ್ಧರಾಗಿದ್ದವರು. ಈ ಹಿಂದೆ ರಾಜಕೀಯ ಕ್ಷೇತ್ರದಲ್ಲಿ ಬಡವರ ಪರ ಅಭ್ಯರ್ಥಿ ಎಂಬ ಮಾತಿತ್ತು. ಪ್ರಸ್ತುತ ಚುನಾವಣೆ ಮಾಡುವ ತಾಕತ್ತು ಇದೆಯೇ ಎಂಬಂತ ಸ್ಥಿತಿ ನಿರ್ಮಾಣವಾಗಿದೆ. ಲಿಂಗಪ್ಪ ಅವರು ಬಿಟ್ಟ ಜಾಗಕ್ಕೆ ನಾವು ಬಂದವರು. ಆ ಸಂದರ್ಭದಲ್ಲಿ ಅವರು ಆಕ್ಟೀವ್ ಆಗಿದ್ದರೆ ನಮಗೆ ಅವಕಾಶವೇ ಇರುತ್ತಿರಲಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 419
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved