• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯಲು ಮುಂದಾಗಿ
ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ನಿತ್ಯ ಬಿಸಿಲು, ಮಳೆ, ಗಾಳಿ ಎನ್ನದೇ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರ ನೆಮ್ಮದಿ ಬದುಕಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಮೂಲಕ ಕುಟುಂಬ ವರ್ಗಕ್ಕೆ ಸದೃಢ ಬದುಕನ್ನು ಕಟ್ಟಿಕೊಡುವಂತೆ ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ಶರಾವತಿ ಸಂತ್ರಸ್ತರ ಸಮಸ್ಯೆ ಮರೆತ ಸರ್ಕಾರ
ನಾವು ಅಧಿಕಾರಕ್ಕೆ ಬಂದರೆ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಮಾತು ಕೊಟ್ಟಿದ್ದ ಕಾಂಗ್ರೆಸ್ ಸರ್ಕಾರ ಈಗ ಮಾತು ತಪ್ಪಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ನಾವು ಅಧಿಕಾರಕ್ಕೆ ಬಂದರೆ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದಿದ್ದರು. ಆದರೆ, ಈಗ ಅಧಿಕಾರಕ್ಕೆ ಬಂದು 9 ತಿಂಗಳಾದರೂ ಈ ಬಗ್ಗೆ ಸರ್ಕಾರ ಚಕಾರವೇ ಎತ್ತುತ್ತಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.
ಇಂದಿನಿಂದ ಚರಕ ಉತ್ಸವ
ಭೀಮನಕೋಣೆ ಕವಿಕಾವ್ಯ ಟ್ರಸ್ಟ್ ಮತ್ತು ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಶ್ರಯದಲ್ಲಿ ಫೆ.೨೪ ಮತ್ತು ೨೫ರಂದು ಸಾಗರ ತಾಲೂಕಿನ ಹೊನ್ನೆಸರದ ಶ್ರಮಜೀವಿ ಆಶ್ರಮದಲ್ಲಿ ಚರಕ ಉತ್ಸವ ಹಮ್ಮಿಕೊಳ್ಳಲಾಗಿದೆ. ಫೆ.೨೪ರಂದು ಕೈಮಗ್ಗ ಜವಳಿ ಇಲಾಖೆ ಸಹಯೋಗದೊಂದಿಗೆ ಪವಿತ್ರ ವಸ್ತ್ರ ಯೋಜನೆ ಅಡಿಯಲ್ಲಿ ಕೊಡು-ಕೊಳ್ಳುವವರ ಸಮಾವೇಶ ಹಾಗೂ ಪವಿತ್ರ ವಸ್ತ್ರ ಕುರಿತು ವಿಚಾರ ಮಂಥನ ನಡೆಯಲಿದೆ. ದೇಶದ ಹೆಸರಾಂತ ವಿನ್ಯಾಸಕಾರರು, ಕೈ ಉತ್ಪನ್ನಗಳ ಉತ್ಪಾದಕರು, ವಿವಿಧ ಜಿಲ್ಲೆಯ ನೇಕಾರರು, ಸಾಹಿತಿಗಳು, ಬರಹಗಾರರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಕ್ತಿ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳಿಗೆ 1.74 ಲಕ್ಷ ಮಹಿಳೆಯರ ಭೇಟಿ: ಶಾಸಕ
ಶಕ್ತಿ ಯೋಜನೆ ಜಾರಿಗೆ ಬಂದ ನಂತರ ತಾಲ್ಲೂಕಿನಲ್ಲಿ ೧.೭೪ ಲಕ್ಷ ಮಹಿಳೆಯರು ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ್ದಾರೆ. ಉಚಿತ ಬಸ್ ಸಂಚಾರ ಪ್ರಾರಂಭವಾದ ಮೇಲೆ ಮನೆಯಿಂದ ಹೊರಗೆ ಬಾರದ ಸಾಕಷ್ಟು ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸಾಗರದಲ್ಲಿ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಮಳೆ ಕೊರತೆಯಿಂದ ಭತ್ತ ಬೆಳೆಗೆ ಹಿನ್ನೆಡೆ
ಮುಂಗಾರು ಮತ್ತು ಹಿಂಗಾರು ಮಳೆ ಕ್ಷೀಣವಾದ ಪರಿಣಾಮ ನೀರಿನ ಕೊರತೆಯಿಂದ ತಾಲೂಕಿನ ರೈತರು ಭತ್ತ ಬೆಳೆಯಲು ಸಾಧ್ಯವಾಗಿಲ್ಲ. ಈ ಕಾರಣದಿಂದ ತಾಲೂಕಿನಲ್ಲಿ ಭತ್ತದ ಬೆಳೆಗೆ ಹಿನ್ನೆಡೆಯಾಗಿದೆ. ಅಲ್ಪಸ್ವಲ್ಪ ಸುರಿದ ಮಳೆಯಿಂದ ಭತ್ತ ಬೆಳೆದ ದೊಡ್ಡ ಹಿಡುವಳಿದಾರರು ಕೊಳವೆಬಾವಿ ಮೂಲಕ ನೀರು ಹಾಯಿಸಿಕೊಂಡು, ಬೆಳೆ ಉಳಿಸಿಕೊಳ್ಳುವ ಪ್ರಯತ್ನ ನಡೆದಿದೆ. ಆದರೆ, ಭತ್ತಕ್ಕೆ ಪರ‍್ಯಾಯವಾಗಿ ಬೆಳೆದ ತೋಟಗಾರಿಕಾ ಮತ್ತು ವಾಣಿಜ್ಯ ಬೆಳೆಗಳೂ ಸಹ ನೀರಿಲ್ಲದೇ ಸೊರಗುತ್ತಿವೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಜಿ. ಕುಮಾರ್ ಸೊರಬದಲ್ಲಿ ಹೇಳಿದ್ದಾರೆ.
ಸಂವಿಧಾನ ಜಾಗೃತಿ ಜಾಥಾ: ಭದ್ರಾವತಿಯಲ್ಲಿ ಬೃಹತ್‌ ಮೆರವಣಿಗೆ
ಭದ್ರಾವತಿ ತಾಲೂಕಿನಾದ್ಯಂತ 5 ದಿನ ಕಾಲ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಶುಕ್ರವಾರ ಮುಕ್ತಾಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಿತು. ಇದಕ್ಕೂ ಮೊದಲು ಅಂಡರ್ ಬ್ರಿಡ್ಜ್‌ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆಗೆ ಚಾಲನೆ ನೀಡಿದರು. ವೀರಗಾಸೆ, ಬ್ಯಾಂಡ್ ಸೆಟ್, ಗೃಹರಕ್ಷಕ ದಳ ಸೇರಿದಂತೆ ಶಾಲಾ ವಿದ್ಯಾರ್ಥಿಗಳ ವಿವಿಧ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಸೊಬಗು ಹೆಚ್ಚಿಸಿದವು.
ಭಗವತ್ ಪ್ರೇರಣೆಗೆ ಶ್ರದ್ಧೆ, ನಿಷ್ಠೆ ಬೇಕು: ಅಮರೇಶ್ವರ ಶ್ರೀ
ಸೊರಬ ತಾಲೂಕಿನ ಬಾಡದಬೈಲು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ರಾಮೇಶ್ವರ ಹಾಗೂ ಬಸವಣ್ಣ ದೇವರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ವನ್ನು ನಂದಿಗುಡಿ ಮಠದ ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಚಿಂತನೆ ದೊಡ್ಡದಿದ್ದರೆ ಗುರಿ ಸಾಧನೆ ಸುಲಭ: ಬಿವೈಆರ್‌
ಹೊಳೆಹೊನ್ನೂರು ಸಮೀಪದ ಮಲ್ಲಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಗುಡ್ಡದ ಮಲ್ಲೇಶ್ವರ ಸಮುದಾಯ ಭವನಕ್ಕೆ ಗುರುವಾರ ಚಾಲನೆ ದೊರೆಯಿತು.
ಬಡವರ ‘ಕೈ’ ಹಿಡಿದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ: ಸುಂದರೇಶ್
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಜಿಲ್ಲೆಯಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.
ಸಹಜವಾಗಿ ಅರ್ಥವಾಗುವ ಭಾಷೆ ಜೀವಂತ: ಪ್ರೊ.ಸುರೇಶ್ ಜಂಬಾನಿ
ಸಾಗರದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪ್ರೊ.ಸುರೇಶ್ ಜಂಬಾನಿ ಉಪನ್ಯಾಸ ನೀಡಿದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 419
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved