• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕಾರಿಪುರದಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಿಹಿ ವಿತರಣೆ
ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 3 ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಸಂಭ್ರಮ ಹಿನ್ನೆಲೆಯಲ್ಲಿ ಇಲ್ಲಿನ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಸಂಜೆ ವೇಳೆ ಮೋದಿಯವರು ಪ್ರಮಾಣ ವಚನ ವೇಳೆ ಕ್ಷೇತ್ರ ದೇವತೆ ಶ್ರೀ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಒಗ್ಗೂಡಿ ಪೂಜೆ ಸಲ್ಲಿಸಿ ಮೋದಿಯವರ ದೀರ್ಘಾಯುಷ್ಯಕ್ಕೆ ಹಾಗೂ ಅವಧಿ ಪೂರ್ತಿ ಸುಸೂತ್ರ ಆಡಳಿತಕ್ಕೆ ಪ್ರಾರ್ಥಿಸಿದರು. ಸ್ವಾಮಿ ದರ್ಶನಕ್ಕೆ ಪರಸ್ಥಳದಿಂದ ಆಗಮಿಸಿದ್ದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಸಂಭ್ರಮಾಚರಿಸಿದರು.
ನ್ಯಾಯದಾನ ಪ್ರಕ್ರಿಯೆ ಜೊತೆ ಸಾಮಾಜಿಕ ಬದ್ಧತೆ ಸಣ್ಣ ವಿಚಾರವಲ್ಲ: ನ್ಯಾ.ಕೃಷ್ಣ ದೀಕ್ಷಿತ್
ನೂರು ವರ್ಷ ಮನುಷ್ಯನ ಬದುಕಿನಲ್ಲಿ ದೀರ್ಘ ಕಾಲವಾಗಿದ್ದರೂ ಸಂಸ್ಥೆ, ದೇಶದ ವಿಷಯದಲ್ಲಿ ದೊಡ್ಡದು ಎನ್ನಿಸುವುದಿಲ್ಲ.ಸಾಗರದಂತಹ ಊರಿನಲ್ಲಿ ಸ್ವಾತಂತ್ರ್ಯ ಬರುವುದಕ್ಕೂ ೨೫ ವರ್ಷ ಮೊದಲೇ ವಕೀಲಿಕೆ ವೃತ್ತಿ ಪ್ರಾರಂಭಿಸಿ, ಸಾಮಾಜಿಕ ಬದ್ಧತೆಯೊಂದಿಗೆ ನ್ಯಾಯದಾನ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಸಣ್ಣ ವಿಚಾರವಲ್ಲ. ಅಲ್ಲದೆ ಇಲ್ಲಿಯೇ ಕಾನೂನು ಕಚೇರಿ ತೆರೆದು, ನೂರು ವರ್ಷ ಕಾಲ ಕಕ್ಷಿದಾರರು, ವಕೀಲರ ಭರವಸೆ ಉಳಿಸಿಕೊಂಡು ಬರುವುದು ನಮಗೆಲ್ಲ ಖುಷಿಯ ಸಂಗತಿ. ಊರಿನ ಇತಿಹಾಸ ಬರೆಯುವಾಗ ಈ ಕಾರ್ಯಾಲಯದ ಉಲ್ಲೇಖವೂ ಬರುತ್ತದೆ ಎನ್ನುವುದು ಗಮನಿಸಬೇಕಾದ ಅಂಶ ಎಂದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು; ಅಲ್ಲಲ್ಲಿ ಹಾನಿ
ಭಾರಿ ಗಾಳಿ ಮಳೆಗೆ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವರ ವಾಸದ ಮನೆಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಗಾಳಿಮಳೆಯಿಂದ ಮನೆ ಮೇಲೆ ಮರ ಉರುಳಿಬಿದ್ದು ಸಾಕಷ್ಟು ಹಾನಿಗೀಡಾದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭಾನುವಾರ ಬೆಳಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿ ವೈಯಕ್ತಿಕ ಧನಸಹಾಯದ ನೀಡಿ ತಕ್ಷಣ ಸರ್ಕಾರದಿಂದ ನೀಡಲಾಗುವ ಪರಿಹಾರದ ಮೊತ್ತ ಕೊಡಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಜೀವ ಸಂಸ್ಕೃತಿ ಉಳಿಸಿ, ಬೆಳೆಸುವ ದೇಶ ಭಾರತ: ಶಂಕರ ಭಾರತೀ ಸ್ವಾಮೀಜಿ
ಐತಿಹಾಸಿಕ ಲೆಕ್ಕಾಚಾರದಂತೆ ವೇದಗಳು 12,000 ಸಾವಿರ ವರ್ಷಗಳಿಗಿಂತಲೂ ಪ್ರಾಚೀನ ಎಂಬುದಕ್ಕೆ ದ್ವಾಪರದಿಂದ ಇಂದಿನವರೆಗೂ ಗಾಯತ್ರಿ ಮಂತ್ರದ ಶುದ್ಧತೆ ಹಾಗೂ ಸ್ವರೂಪ ಸೇರಿ ದೈವಿಶಕ್ತಿ ಹಾಗೇ ಇದೆ. ಐತಿಹಾಸಿಕ ಇತಿಹಾಸದಂತೆ 72 ಮತಗಳಿದ್ದವು ಎನ್ನಲಾಗುತ್ತಿದ್ದು ವೇದ ವಿರೋಧಿ ಮತಗಳ ನಿಷ್ಕ್ರಿಯಗೊಳಿಸಿ ವೈದಿಕ ಮತ ಸ್ಥಾಪನೆಯಾಯಿತು.
ಮೋದಿ ಪ್ರಮಾಣವಚನ: ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಂಭ್ರಮ
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕಾರ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಸದಸ್ಯ ಆರ್‌.ಕೆ.ಸಿದ್ರಾಮಣ್ಣ, ಮುಖಂಡರಾದ ಗಿರೀಶ್ ಪಟೇಲ್‌ ಸೇರಿ ಹಲವು ಮುಖಂಡರು ಪಕ್ಷದ ಕಚೇರಿಗೆ ಆಗಮಿಸಿ ಮೋದಿ ಪ್ರಮಾಣ ವಚನ ನೇರಪ್ರಸಾರ ವೀಕ್ಷಿಸಿದರು.
ಬಿಜೆಪಿ ಶಕ್ತಿ ಮತ್ತಷ್ಟು ಹೆಚ್ಚಿದೆ: ಗಣೇಶ್ ಪ್ರಸಾದ್
ಪಟ್ಟಣದ ಪ್ರದೇಶದಲ್ಲಿ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ೬ ಸಾವಿರಕ್ಕೂ ಹೆಚ್ಚು ಮತ ಪಡೆದಿದೆ. ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದ್ದಾರೆ. ಸಾಗರ ಕ್ಷೇತ್ರದ ಮತದಾರರು ಬಿಜೆಪಿಯತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ. ನಗರಸಭೆ ಆಡಳಿತ ಶಾಸಕರ ಮರ್ಜಿಯಂತೆ ನಡೆಯುತ್ತಿದ್ದು, ಅಧಿಕಾರಿಗಳ ದಬ್ಬಾಳಿಕೆ ಜಾಸ್ತಿಯಾಗಿದೆ.
ವಾಮ ಮಾರ್ಗದಲ್ಲಿ ನೈಋತ್ಯ ಕ್ಷೇತ್ರ ಚುನಾವಣೆ ಗೆಲುವು: ಆಯನೂರು ಮಂಜುನಾಥ್‌
ಪದವೀಧರರ, ಅತಿಥಿ ಉಪನ್ಯಾಸಕರ ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಹೋರಾಡಿದೆ. ನನ್ನ ಹೋರಾಟವೇ ಇವರ ಒಳಿತಿಗಾಗಿ ಇತ್ತು. ಆದರೂ ಕೂಡ ಕೊನೆಯ ಕ್ಷಣಗಳಲ್ಲಿ ನನ್ನ ಪರವಾಗಿದ್ದವರು ನನ್ನ ಹೋರಾಟಕ್ಕೆ ಬೆಂಬಲ ನೀಡಿದವರು, ನನ್ನ ಜೊತೆ ತಮ್ಮ ದುಃಖಗಳ ಹಂಚಿಕೊಂಡವರು ಏಕೆ ರಾಜೀಯಾದರೋ? ಇದು ನನ್ನ ಸೋಲೋ ಅಥವಾ ಮತದಾರರ ಸೋಲೋ ಎಂಬುದು ಪ್ರಶ್ನೆಯಾಗಿಯೇ ಉಳಿದುಕೊಂಡಿದೆ ಎಂದು ತಿಳಿಸಿದರು.
ಡಾ.ಸರ್ಜಿ ಜನ ಮೆಚ್ಚುವ ಕೆಲಸ ಮಾಡಬಲ್ಲರು: ಕೆ.ಬಿ.ಪ್ರಸನ್ನಕುಮಾರ್
ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಇದು ಕಾರ್ಯಕರ್ತರ ಗೆಲುವು, ಪದವೀಧರರ ಗೆಲುವು, ಜೆಡಿಎಸ್, ಬಿಜೆಪಿ ಮೈತ್ರಿ ಶಕ್ತಿಯ ಗೆಲುವು, ಎಲ್ಲರ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಪರಿಷತ್ ನಲ್ಲಿ ಪದವೀಧರರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.
ಬಿಜೆಪಿ ಸಂವಿಧಾನ ಒಪ್ಪುತ್ತೊ, ಇಲ್ಲ ಸ್ಪಷ್ಟಪಡಿಸಲಿ: ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್
ಅಧಿಕಾರಕ್ಕಾಗಿ ಸುಳ್ಳು ಹೇಳುವ ಬಿಜೆಪಿಯವರಿಗೆ ಇದೀಗ ಸಂವಿಧಾನವೇ ಸುಪ್ರೀಂ ಅನ್ನೋದು ಅರಿವಾದ ಮೇಲೆ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಪ್ರತಿಗೆ ನಮಸ್ಕರಿಸುವ ಹಂತಕ್ಕೆ ಬಂದಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದಿದ್ದರೂ ಈ ಬಾರಿ ಪ್ರಧಾನಿ ಕುರ್ಚಿಯ ನಾಲ್ಕೂ ಕಾಲುಗಳೂ ಬೇರೆಯವರ ಕೈಯಲ್ಲಿದೆ.
ರಕ್ತದಾನದಿಂದ ಜೀವ ಉಳಿಸುವ ಶ್ರೇಷ್ಠ ಕಾರ್ಯ: ಅನಿಲ್ ಕುಮಾರ್ ಭೂಮಾರೆಡ್ಡಿ
ಯುವಕರು ಆರೋಗ್ಯಕರ ಜೀವನ ನಡೆಸಬೇಕು. ಉತ್ತಮ ಚಟುವಟಿಕೆಯಿಂದ ಗುರಿ ಸಾಧಿಸಬೇಕು. ಆರ್ಥಿಕವಾಗಿ ಸದೃಢರಾಗಿ ದೇಶದ ಅಸ್ತಿಯಾಗಬೇಕು ಎಂದು ತಿಳಿಸಿದರು. ಶೇ.95 ರಷ್ಟು ಅಪಘಾತ ಯುವಕರ ಅಜಾಗರೂಕತೆಯಿಂದ ಆಗುತ್ತದೆ ಎಂದು ಅಂಕಿ ಅಂಶಗಳು ತಿಳಿಸುತ್ತವೆ. ಕಾನೂನು ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ನಗರದಲ್ಲಿ ಪ್ರತಿ ದಿನ 5ರಿಂದ 6 ಅಪಘಾತ ಆಗುತ್ತಿವೆ. ತಾಳ್ಮೆ ಇದ್ದರೆ ಅಪಘಾತ ತಡೆಘಟ್ಟಬಹುದು.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved