• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲಿನ್ಯ ಮುಕ್ತ ಪರಿಸರದಿಂದ ಮಾನವ ಸಂಬಂಧ ವೃದ್ಧಿ: ಶ್ರೀಧರ್
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಗರದ ಪಾರ್ಕ್‍ಗಳು ಸೇರಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಹಸಿರೀಕರಣ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಭಾನುವಾರ ಮತ್ತು ಬುಧವಾರ ಸಸಿ ನೆಡುವ ಕಾರ್ಯಕ್ರಮದ ಮೂಲಕ ಪರೋಪಕಾರಂ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರ ಒಂದೆಡೆ ಸೇರಿಸಿ ನಾಗರಿಕ ಸಂಬಂಧವನ್ನೂ ಬೆಸೆಯಲಾಗುವುದು.
ಆಹಾರ ಪ್ರಿಯರ ಆಕರ್ಷಿಸಿದ ಶೆಟ್ಟರ ಸಂತೆ
ವೈವಿಧ್ಯಮಯ ತಿಂಡಿ ತಿನಿಸು ಅಂದ್ರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ. ಒಂದೇ ಸೂರಿನಡಿ ಎಲ್ಲಾದರೂ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಬಿಡೋದಕ್ಕಾಗುತ್ತಾ. ಅದರಲ್ಲೂ ಒಂದೇ ಸೂರಿನಡಿ ಎಲ್ಲಾದರೂ ಶೆಟ್ಟರ ಮನೆಯ ಬೊಂಬಾಟ್ ತಿಂಡಿ ಸಿಗುತ್ತೆ ಅಂದ್ರೆ ಇದಕ್ಕಿಂತ ತಿಂಡಿ ಪ್ರಿಯರಿಗೆ ಬೇರೇನು ಬೇಕು. ಇನ್ನು ಮನೆಯಲ್ಲಿ ತಯಾರಾದ ಬಟ್ಟೆ, ಬ್ಯಾಗು, ಚಕ್ಕುಲಿ ಕೋಡಬಳೆ, ನಿಪ್ಪಟ್ಟು, ನಿಪ್ಪಟ್ಟು ಮಸಾಲೆ, ಬೋಟಿ ಮಸಾಲೆ, ಪಾನಿಪುರಿ, ರವೆ ಉಂಡೆ ಸೇರಿ ಆರ್ಯವೈಶ್ಯರ ವಿಶಿಷ್ಟ ಖಾದ್ಯಗಳು ಮತ್ತಿತರೆ ತಿನಿಸುಗಳು ತಿಂಡಿ ಪ್ರಿಯರ ಕೈ ಬೀಸಿ ಕರೆಯುತ್ತಿದ್ದವು.
ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ರಾಜ್ಯ ಸರ್ಕಾರದಿಂದ ಲೂಟಿ: ಮಲ್ಲೇಶಪ್ಪ
ರಾಜ್ಯದ ಜನರ ಅಭಿವೃದ್ಧಿ ಮಾಡಬೇಕಾದ ಸರ್ಕಾರ ಬಡವ, ಹಿಂದುಳಿದ ಮತ್ತು ದಲಿತರಿಗೆ ಮೀಸಲಿಟ್ಟಿರುವಂತಹ ಹಣ ಲೂಟಿ ಮಾಡುತ್ತಿದೆ. ಕೆಲವು ಅಲ್ಪ ಪ್ರಮಾಣದ ಗ್ಯಾರಂಟಿ ಯೋಜನೆಗಳ ತರಾತುರಿಯಲ್ಲಿ ಜಾರಿ ಮಾಡಿ ಜನತೆಯ ಮೂಗಿಗೆ ತುಪ್ಪ ಸವರಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ. ಇದರಿಂದ ಯಾರೊಬ್ಬರು ನೆಮ್ಮದಿಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ.
ಗ್ರಾಹಕರ ಸೋಗಲ್ಲಿ ಬಂದು ಚಿನ್ನಾಭರಣ ಕದ್ದ ಕಳ್ಳಿಯರು!
ಸಂಪತ್ ಜ್ಯುವೆಲರ್ಸ್‌ಗೆ ಗ್ರಾಹಕರಂತೆ ಬಂದಿದ್ದ ಈ ಮೂವರು ಯುವತಿಯರು ಹಾಗೂ ಓರ್ವ ಪುರುಷ ಉಂಗುರ, ವಗೈರೆಗಳನ್ನು ಖರೀದಿಸುವ ನೆಪದಲ್ಲಿ ಒಡವೆ ದೋಚಿದ್ದಾರೆ. ಉಡುಗೊರೆ ನೀಡಲು ಚಿನ್ನದ ಉಂಗುರು ಮತ್ತು ಬೆಳ್ಳಿ ದೀಪ ವಿಚಾರಿಸಿಕೊಂಡು ಓರ್ವ ಪುರುಷ, ಮೂವರು ಮಹಿಳೆಯರು ಬಂದಿದ್ದರು. ಕಡಿಮೆ ದರದ ಉಂಗುರ ತೋರಿಸುವಂತೆ ತಿಳಿಸಿದ್ದರಿಂದ ಅಂಗಡಿ ಓನರ್‌ ಹರ್ಷಬಿ ಸ್ಟೋರ್‌ ರೂಂಗೆ ತೆರಳಿದ್ದರು. ಅಂಗಡಿಯ ಕೆಲಸದ ಹುಡುಗಿ ಬೆಳ್ಳಿ ದೀಪಗಳನ್ನು ತೋರಿಸುತ್ತಿದ್ದರು. ಈ ಸಂದರ್ಭ ಹಿಂದೆ ನಿಂತಿದ್ದ ಮಹಿಳೆ ಡಿಸ್‌ಪ್ಲೇ ಡ್ರಾದಲ್ಲಿದ್ದ ಆಭರಣಗಳ ಪ್ಲಾಸ್ಟಿಕ್‌ ಬಾಕ್ಸ್‌ ತೆಗೆದುಕೊಂಡು ಬ್ಲೌಸ್‌ನೊಳಗೆ ಇಟ್ಟುಕೊಂಡು ಅಲ್ಲಿದ್ದ ಕಾಲ್ಕಿತ್ತಿದ್ದಾರೆ.
ಸಿಗಂದೂರು ದೇವಿ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನಾ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಇಲ್ಲಿನ ಬ್ಯಾಕೋಡು ಮಾರ್ಗದ ಮೂಲಕ ನೇರವಾಗಿ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದರು. ಮಧ್ಯಾಹ್ನ 3 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಸ್ಥಾನದ ಧರ್ಮಾಧಿಕಾರಿ ಎಸ್. ರಾಮಪ್ಪ ಅತ್ಮೀಯವಾಗಿ ಸ್ವಾಗತಿಸಿ, ದೇವಸ್ಥಾನದ ಪೂಜಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್‌ ಸೇವೆ
ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ, ಮೂಲಕ ರೋದನೆ ತಪ್ಪಿಸಲು ಸರ್ಕಾರ ಜಾರಿಗೊಳಿಸಿರುವ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಜಿಲ್ಲೆಯಲ್ಲಿ ಕಳೆದ 8-10 ತಿಂಗಳಿಂದ ಕೆಲಸ ಮಾಡುತ್ತಿದೆ. ರೋಗಗ್ರಸ್ತ ಜಾನುವಾರುಗಳಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ದೂರದ ಪಶು ಆಸ್ಪತ್ರೆಗಳೊಂದಿಗೆ ಸಾಗಿಸಲು ರೈತರಿಗೆ ಅನಾನುಕೂಲದ ಜತೆಗೆ ಆರ್ಥಿಕ ಹೊರೆ ಆಗುತ್ತಿದ್ದು, ಸಮಯಕ್ಕೆ ಚಿಕಿತ್ಸೆ ಲಭ್ಯವಾಗದೇ ಅಸು ನೀಗುತ್ತಿವೆ.
ವಿಧಾನ ಪರಿಷತ್‌ ಚುನಾವಣೆ: ಇಂದು ಮತದಾನ
ಮತದಾನ ಹಿನ್ನೆಲೆ ಭಾನುವಾರ ಚುನಾವಣಾ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆ ಕುರಿತು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಾಹಿತಿ ನೀಡಿ ಬಳಿಕ ಮತದಾನ ಸಲಕರಣೆಗಳ ನೀಡಲಾಯಿತು. ಸಲಕರಣೆ ಪಡೆದ ಸಿಬ್ಬಂದಿಗಳು ಮತಗಟ್ಟೆಗಳತ್ತ ಹೊರಟರು. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಒಟ್ಟು 27,412 ಮಂದಿ 38 ಮತಕೇಂದ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 4,365 ಮತದಾರರಿದ್ದು ಒಟ್ಟು 32 ಮತಕೇಂದ್ರಗಳ ತೆರೆಯಲಾಗಿದೆ.
ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ವಾಲ್ಮೀಕಿ ನಿಗಮ ಹಣ ವರ್ಗಕ್ಕೆ ಸಿಎಂ, ಡಿಸಿಎಂ ಕುಮ್ಮಕ್ಕು: ಶಾಸಕ ಆರಗ ಜ್ಞಾನೇಂದ್ರ

ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಚಂದ್ರಶೇಖರನ್‌ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved