• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೀರ್ಥಹಳ್ಳಿ ಮಾರಿ ಜಾತ್ರೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ವೈಭವ
ಮಾ 12ರಿಂದ 9 ದಿನಗಳ ಪರ್ಯಂತ ನಡೆಯಲಿರುವ ತೀರ್ಥಹಳ್ಳಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಭರದ ಸಿದ್ದತೆ ನಡೆದಿದ್ದು ದೇವಸ್ಥಾನ ಮತ್ತು ಪಟ್ಟಣದ ಆಜಾದ್ ರಸ್ತೆ ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದೆ. ಮಾ.12ರಂದು ಮಾರಿ ಸಾರುವುದರೊಂದಿಗೆ ಚಾಲನೆ ದೊರೆಯಲಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲದೇ ವಿಶೇಷವಾಗಿ ಮಾ.14 ರಿಂದ 17ರವರೆಗೆ ಬಾಳೇಬೈಲು ಮೈದಾನದಲ್ಲಿ ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿಯನ್ನು ಕೂಡಾ ಆಯೋಜಿಸಲಾಗಿದೆ.
ಮೋದಿ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗೋದಿಲ್ವೆ?
ಕಾಂಗ್ರೆಸ್‌ ಗ್ಯಾರಂಟಿಗಳನ್ನು ನೀಡಿದಾಗ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ, ಜನ ಸೋಮಾರಿಗಳಾಗುತ್ತಾರೆ ಎಂದು ಬಿಜೆಪಿಯವರು ಬೇಕಾಬಿಟ್ಟಿಯಾಗಿ ಮಾತನಾಡಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿ ಎಂದು ಏಕೆ ಮಾಡಿದ್ದಾರೆ? ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ಮೋದಿ ಗ್ಯಾರಂಟಿಯಿಂದ ಬಡವರ ಹಸಿದ ಹೊಟ್ಟೆಗಳು ತುಂಬಿಲ್ಲ. ಕಾಂಗ್ರೆಸ್‌ ಗ್ಯಾರಂಟಿ ಮೇಲೆಯೇ ಲೋಕಸಭೆ ಚುನಾವಣೆಯನ್ನೂ ಮಾಡುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಕಿಡಿಕಾರಿದ್ದಾರೆ.
14ರಂದು ಶಾಂತವೇರಿ ಗೋಪಾಲಗೌಡ ಜನ್ಮದಿನ ಕಾರ್ಯಕ್ರಮ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿಯ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಮಾ.14ರಂದು ಎ.ಟಿ.ಎನ್.ಸಿ. ಕಾಲೇಜಿನ ಚಂದನ ಸಭಾಂಗಣದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮದಿನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಸಾಪ ಅಧ್ಯಕ್ಷ ಡಿ.ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಸಾಪ ಅಧ್ಯಕ್ಷ ಡಿ. ಮಂಜುನಾಥ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಮಧು ಬಂಗಾರಪ್ಪಗೆ ಫಲಿತಾಂಶವೇ ಉತ್ತರ: ಸಂಸದ ರಾಘವೇಂದ್ರ
ಕಾಂಗ್ರೆಸ್‌ನವರು ಮೊದಲು ಅವರ ಐಎನ್‌ಡಿಐಎ ಟೀಮ್ ಎಲ್ಲಿದೆ ಎಂದು ಹುಡುಕಿಕೊಳ್ಳಲಿ. ಅದನ್ನು ಬಿಟ್ಟು ಬಿಜೆಪಿ ಎ ಟೀಂ, ಬಿ ಟೀಂ ಅಂತ ನಮ್ಮ ಬಗ್ಗೆ ಯೋಚನೆ ಮಾಡೋದು ಬೇಡ. ಕಾಂಗ್ರೆಸ್‌ನವರು ಅವರ ಪಕ್ಷದ ಬಗ್ಗೆ ಯೋಚನೆ ಮಾಡಬೇಕು. ಮಧು ಬಂಗಾರಪ್ಪ ಅವರ ಹಣ ಸಾಗಾಟ ಹೇಳಿಕೆ ಅಸಹ್ಯ ಅನಿಸುತ್ತದೆ. ಬಂಗಾರಪ್ಪನವರ ಮಗನ ಬಾಯಲ್ಲಿ ಈ ರೀತಿ ಹಗುರ ಮಾತು ಬರಬಾರದು ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ತಿರುಗೇಟು ನೀಡಿದ್ದಾರೆ.
ಭಾರತ್‌ ಅಕ್ಕಿ ಸೌಲಭ್ಯ ಪಡೆದುಕೊಳ್ಳಿ: ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕೇಂದ್ರ ಸರ್ಕಾರದ ಭಾರತ್ ಅಕ್ಕಿ ಯೋಜನೆಯಲ್ಲಿ ಕೆಜಿಗೆ ₹29 ನಂತೆ ಎಲ್ಲರಿಗೂ ಲಭ್ಯವಾಗುವಂತೆ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ಶಾಶ್ವತವಾಗಿ 5 ಕೆಜಿ ಅಕ್ಕಿಯನ್ನು ವಿತರಣೆ ಮಾಡುತ್ತಿದೆ. ಭಾರತ್ ಅಕ್ಕಿ ಯೋಜನೆಯಲ್ಲಿ ಕೆಜಿಗೆ ₹29 ರಂತೆ ₹290 ರೂಗಳಿಗೆ 10 ಕೆಜಿ ಅಕ್ಕಿಯನ್ನು ಇಂದಿನಿಂದ ವಿತರಿಸಲಾಗುತ್ತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
ಪುತ್ರನಿಗೆ ಟಿಕೆಟ್: ಈಶ್ವರಪ್ಪ ‘ಮಾಡು ಇಲ್ಲವೆ ಮಡಿ’ ತಂತ್ರ ಅನುರಿಸ್ತಾರಾ?
ಹಾವೇರಿ-ಗದಗ ಲೋಕಸಭಾ ಚುನಾವಣಾ ಟಿಕೆಟ್ ಅನ್ನು ತಮ್ಮ ಪುತ್ರ ಕೆ.ಇ. ಕಾಂತೇಶ್ ಅವರಿಗೆ ಪಡೆಯಲು ತೀವ್ರ ಯತ್ನ ನಡೆಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಕಟ್ಟಾಳು, ಪ್ರಖರ ಹಿಂದುತ್ವವಾದಿ ಕೆ.ಎಸ್. ಈಶ್ವರಪ್ಪ ಅವರು ಒಂದು ಪಕ್ಷ ಟಿಕೆಟ್ ನೀಡದೇ ಇದ್ದರೆ ಮುಂದೇನು ಎಂಬ ಪ್ರಶ್ನೆ ಎದುರಿಗಿಟ್ಟುಕೊಂಡು ತಮ್ಮ ಬೆಂಬಲಿಗರ ಜೊತೆ ಗಂಭೀರ ಮಾತುಕತೆ ನಡೆಸುತ್ತಿದ್ದಾರೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಅನಿವಾರ್ಯದ ಹೆಜ್ಜೆಗೆ ಮುಂದಾಗುತ್ತಿದ್ದಾರೆಯೇ?
ಪೊಲೀಸ್ ಠಾಣೆಗಳ ಅನಿವಾರ್ಯತೆ, ಅಗತ್ಯತೆ ತಿಳಿದುಕೊಳ್ಳಿ: ಎಸ್‌ಪಿ
ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳು ಸಹಕಾರಿಯಾಗಿವೆ. ಪೊಲೀಸ್ ಠಾಣೆಗಳ ಅನಿವಾರ್ಯತೆ ಹಾಗೂ ಅಗತ್ಯತೆಗಳನ್ನು ಜನರು ತಿಳಿದುಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಭದ್ರಾವತಿಯಲ್ಲಿ ಹೇಳಿದ್ದಾರೆ.
ಬರಪೀಡಿತ ತಾಲೂಕೆಂದು ಘೋಷಿಸಿ, ಬಿಡಿಗಾಸೂ ನೀಡಿಲ್ಲ
ರಾಜ್ಯದಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆ ಆಗಿದೆ ಹೊರತು, ಇಲ್ಲಿಯತನಕ ಬಿಡಿಗಾಸು ಪರಿಹಾರ ನೀಡಿಲ್ಲ. ಜಲದ ಸೆಲೆ ಬತ್ತಿಹೋಗಿ ಕಂಗಾಲಾಗಿರುವ ರೈತರು 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿರುವ ಸರ್ಕಾರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಇಲ್ಲದೆ ರೈತರ ತೋಟ, ಕೃಷಿಗಳು ಒಣಗುತ್ತಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ ಹೊಸನಗರ ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
5 ವರ್ಷದಲ್ಲಿ ಸಾಗರ ಕ್ಷೇತ್ರ ಸಮಗ್ರ ಅಭಿವೃದ್ಧಿ: ಶಾಸಕ ಬೇಳೂರು ಭರವಸೆ
ಸಾಗರ ವಿಧಾನಸಭಾ ಕ್ಷೇತ್ರ ಐದು ವರ್ಷದಲ್ಲಿ ಸಮಗ್ರ ಅಭಿವೃದ್ಧಿಯಾಗಲಿದೆ. ಹಿಂದಿನ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದ್ದ ಆನಂದಪುರ, ಯಡೇಹಳ್ಳಿ, ಆಚಾಪುರ ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳು ಅಭಿವೃದ್ಧಿ ಕಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗಿನಿಂದ ಕ್ಷೇತ್ರದ ಎಲ್ಲೆಡೆ ಹೆಚ್ಚಿನ ಅಭಿವೃದ್ಧಿ ಕಾಣುತ್ತಿದೆ ಎಂದು ಆನಂದಪುರದಲ್ಲಿ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಶಾಸಕ ಸಂಗಮೇಶ್ವರ್ ಕ್ಷೇತ್ರ, ಬಡವರ ಪರ ಶ್ರಮಿಸುವ ವ್ಯಕ್ತಿ
ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಕ್ಷೇತ್ರದ ಜನರು ಎಂದಿಗೂ ಮರೆಯುವಂತಿಲ್ಲ. ಸದಾಕಾಲ ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಪರವಾಗಿ ಶ್ರಮಿಸುವ ವ್ಯಕ್ತಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಹೆಚ್ಚಿನ ಅಧಿಕಾರ ಲಭಿಸುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕೆಂದು ನಗರಸಭೆ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಮೋಹನ್ ಭದ್ರಾವತಿಯಲ್ಲಿ ಮನವಿ ಮಾಡಿದರು.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved