ಉತ್ತಮ ಸೇವೆ ನೀಡಿ ಜನರ ವಿಶ್ವಾಸ ಗಳಿಸಿಆನವಟ್ಟಿ: ಹೊಸದಾಗಿ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮಾನ್ಯತೆ ಪಡೆದ ಕೂಡಲೇ ನಿವಾಸಿಗಳಿಗೆ ತೆರೆಗೆ ಹೆಚ್ಚಾಗುತ್ತದೆ, ಇದರಿಂದ ಪಟ್ಟಣ ಪಂಚಾಯಿತಿ ಮೇಲೆ ಕೋಪಗೊಳ್ಳುತ್ತಾರೆ. ಜನರಿಗೆ ಮೂಲಸೌಕರ್ಯ ಸೌಲಭ್ಯ ಸೇರಿದಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಉತ್ತಮ ಸೇವೆ ನೀಡಿ ಜನರ ವಿಶ್ವಾಸ ಗಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಕಿವಿಮಾತು ಹೇಳಿದರು.