• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರಕ್ಕೆ ಮಾರಕವಾದ ವಿದ್ಯುತ್ ಯೋಜನೆ ಕೈಬಿಡಿ
ಕರ್ನಾಟಕ ವಿದ್ಯುತ್ ನಿಗಮ ಶರಾವತಿ ಕಣಿವೆಯಲ್ಲಿ ಬೃಹತ್ ಜಾಲ ವಿದ್ಯುತ್ ಯೋಜನೆ ಜಾರಿ ಮಾಡಲು ತಯಾರಿ ನಡೆಸಿದ್ದು, ಪರಿಸರಕ್ಕೆ ಮಾರಕವಾಗಿರುವ ಈ ಯೋಜನೆಯನ್ನು ಕೈಬಿಡಬೇಕು. ಪಶ್ಚಿಮಘಟ್ಟದ ಹೃದಯ ಭಾಗವಾಗಿರುವ ಶರಾವತಿ ಕಣಿವೆಯಲ್ಲಿ ೨೦೦೦ ಮೆ.ವ್ಯಾ. ಸಾಮರ್ಥ್ಯದ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಜಾರಿಗೆ ಸರ್ಕಾರ ಮತ್ತು ವಿದ್ಯುತ್ ನಿಗಮ ಮುಂದಾಗಿದೆ. ಈ ಹಿನ್ನೆಲೆ ಪರಿಸರ ರಕ್ಷಣೆ ಮಾಡಬೇಕೆಂದು ವೃಕ್ಷಲಕ್ಷ ಆಂದೋಲನದ ನಿಯೋಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿತು.
ಕಾಂಗ್ರೆಸ್‌ನಿಂದ ಗೀತಾ ಶಿವರಾಜಕುಮಾರ್‌ಗೆ ಲೋಕಸಭೆ ಟಿಕೆಟ್
ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ ಮೊದಲ ಪಟ್ಟಿಯಲ್ಲಿಯೇ ಗೀತಾ ಶಿವರಾಜ್‌ಕುಮಾರ್ ಅವರಿಗೆ ಟಿಕೆಟ್ ಸಿಕ್ಕಿದ್ದು, ಎರಡನೇ ಬಾರಿಗೆ ಈ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ. ಯಾವುದೇ ಬಂಡಾಯದ ಸದ್ದಿಲ್ಲದೇ ಟಿಕೆಟ್ ಪಡೆದುಕೊಳ್ಳುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಅವರೇ ಉಸ್ತುವಾರಿ ಸಚಿವರೂ ಆಗಿರುವುದರಿಂದ ಇದಕ್ಕೆ ಪಕ್ಷದಲ್ಲಿ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಹಾಗೆಯೇ ನೋಡಿಕೊಂಡಿದ್ದಾರೆ ಕೂಡ.
ಭಕ್ತರ ಪ್ರೀತಿ ಮರೆಯಲು ಸಾಧ್ಯವಿಲ್ಲ: ಮಹಾಂತ ಶ್ರೀ
ಯಾವುದೇ ಮೋಹ, ಲೋಭಗಳಿಲ್ಲದೇ, ಶುದ್ಧ ಮನಸ್ಸಿನಿಂದ ಸೇವಾ ಮನೋಭಾವದಿಂದ ಮಾಡುವ ಕಾರ್ಯಗಳಿಂದ ಮತ್ತು ಮಠಗಳಿಗೆ ಭಕ್ತರು ತೋರಿಸುವ ಪ್ರೀತಿ, ವಾತ್ಸಲ್ಯವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸೊರಬ ತಾಲೂಕು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ನುಡಿದಿದ್ದಾರೆ.
ಪ್ರತಿಯೊಬ್ಬರೂ ಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕು: ಸಂಸದ ರಾಘವೇಂದ್ರ
ಶ್ರಮದ ದುಡಿಮೆ ಜನರಲ್ಲಿ ಇತ್ತೀಚಿನ ದಿನದಲ್ಲಿ ಕಡಿಮೆ ಆಗುತ್ತಿದೆ. ಶ್ರಮವಿಲ್ಲದೇ ಗಳಿಸುವ ಭಾಗ್ಯ ತಾತ್ಕಾಲಿಕ ಆಗುವುದು. ಆದ್ದರಿಂದ ಪ್ರತಿಯೊಬ್ಬರು ಶ್ರಮ ವಹಿಸಿ ದುಡಿದು, ಗಳಿಸಿ ತಿನ್ನುವ ಕಾಯಕ ತತ್ವವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
ದಲಿತರ ಕೇರಿಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇ ಬಿಜೆಪಿ
ಕಾಂಗ್ರೆಸ್‌ನವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯವನ್ನು ಓಟಿಗಾಗಿ ಬಳಸಿಕೊಂಡಿದ್ದು ಬಿಟ್ಟರೆ, ದಲಿತರ ಕಲ್ಯಾಣಕ್ಕೆ ಏನೂ ಮಾಡಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಮೂಲಸೌಕರ್ಯ ಕಲ್ಪಿಸಿದ್ದು ಯಾರು ಎಂದು ದಲಿತ ಬಂಧುಗಳು ಚಿಂತಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ವಿಧೇಯಕ ರದ್ದುಪಡಿಸಿ
ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ- 2024 ಅನ್ನು ರದ್ದುಪಡಿಸುವಂತೆ ಆಗ್ರಹಿಸಿ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಗುರುವಾರ ರಾಜ್ಯಪಾಲರಿಗೆ ಶಿಕಾರಿಪುರ ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಲಾಯಿತು.
ಕೋಟೆ ಮಾರಿಕಾಂಬೆ ಜಾತ್ರೆ: 10ರಂದು ಟಗರು ಕಾಳಗ
ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಮಾ.10ರಂದು ಬೆಳಗ್ಗೆ 9 ಗಂಟೆಗೆ ಎನ್‌ಇಎಸ್‌ ಮೈದಾನದಲ್ಲಿ 7ನೇ ಬಾರಿಗೆ ರಾಜ್ಯಮಟ್ಟದ ಟಗರು ಕಾಳಗವನ್ನು ಏರ್ಪಡಿಸಲಾಗಿದೆ. ಟಗರುಗಳ ಹಲ್ಲುಗಳನ್ನು ಆಧರಿಸಿ, ಪ್ರತ್ಯೇಕ ವಿಭಾಗಗಳಾಗಿ ವಿಂಗಡಿಸಿ ಸ್ಪರ್ಧೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಟಗರು ಕಾಳಗಕ್ಕೆ ಚಾಲನೆ ನೀಡುವರು. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭಾಗವಹಿಸುವರು.
ಶಿಕಾರಿಪುರ ಪುರಸಭೆ: ₹16.55 ಕೋಟಿ ವೆಚ್ಚದ ಬಜೆಟ್‌ ಮಂಡನೆ
ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಗುರುವಾರ 2024-25ನೇ ಸಾಲಿನ ಆಯವ್ಯಯವನ್ನು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಯತೀಶ್ ಆರ್. ಮಂಡಿಸಿ ₹32,08590 ಉಳಿತಾಯ ಘೋಷಿಸಿದರು. ಬೀದಿದೀಪ ನಿರ್ವಹಣೆಗೆ ₹30 ಲಕ್ಷ, ನೈರ್ಮಲೀಕರಣ ನಿರ್ವಹಣೆಗೆ ₹11.5 ಲಕ್ಷ, ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಗೆ ₹1.07 ಕೋಟಿ, ರಸ್ತೆ ನಿರ್ಮಾಣಕ್ಕೆ ₹35 ಲಕ್ಷ, ರಸ್ತೆ ಬದಿ ಚರಂಡಿ ನಿರ್ಮಾಣಕ್ಕೆ ₹42 ಲಕ್ಷ ಎಂದು ವಿವರಿಸಿದ್ದಾರೆ.
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿ ಹಲವು ಕಾಮಗಾರಿ
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವೇ ಪೂರ್ಣಗೊಳಿಸಲಾಗುವುದು. ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ ಅಡಿ 2048 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೀದಿಬದಿ ವ್ಯಾಪಾರಿಗಳಿಗೆ ಸುಸಜ್ಜಿತವಾದ ಫುಡ್ ಕೋರ್ಟ್ ನಗರದ ವಿವಿಧಡೆ ನಿರ್ಮಿಸಲಾಗುತ್ತಿದೆ ಎಂದು ಅಧ್ಯಕ್ಷೆ ಲತಾ ಚಂದ್ರಶೇಖರ್ ಹೇಳಿದ್ದಾರೆ.
ಕುವೆಂಪು ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ
ಕುವೆಂಪು ಹೆಸರಿನ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕಗೊಂಡಿರುವುದು ಅತ್ಯಂತ ಹೆಮ್ಮೆಯ ವಿಷಯ. ಅವರ ವೈಚಾರಿಕತೆ, ಆದರ್ಶಗಳೇ ನನಗೆ ಮಾರ್ಗದರ್ಶಿ. ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ವಾತಾವರಣವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ, ಸಂವಾದಗಳು ನಡೆಯಬೇಕು ಎಂದು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕ, ಕುವೆಂಪು ವಿವಿ ನೂತನ ಕುಲತಪಿ ಡಾ.ಶರತ್ ಅನಂತಮೂರ್ತಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 489
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved