• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲೂ ಶುರುವಾಯ್ತು ಟೋಲ್‌ ಪಾವತಿ ಸಂಚಾರ!
ರಾಜ್ಯ ಹೆದ್ದಾರಿಗಳಲ್ಲಿ ಟೋಲ್‌ ಗೇಟ್‌ ವಿರುದ್ಧ ಜನರ ಆಕ್ರೋಶದ ನಡುವೆಯೂ ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರ ಹೊಸ ಟೋಲ್‌ ನಿರ್ಮಾಣಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 2 ಟೋಲ್‌ ಗೇಟ್‌ ಸ್ಥಾಪಿಸಲಾಗಿದ್ದು, ಇನ್ಮುಂದೆ ಟೋಲ್‌ ಪಾವತಿಸಿ ಜನರು ಸಂಚರಿಸಬೇಕಾದ ಅನಿವಾರ್ಯತೆ ಇದೆ. ಶಿವಮೊಗ್ಗ – ಸವಳಂಗ ನಡುವೆ 1 ಟೋಲ್‌ ಗೇಟ್‌ ಸ್ಥಾಪಿಸಲಾಗಿದೆ. ಶಿಕಾರಿಪುರ– ಶಿರಾಳಕೊಪ್ಪ ನಡುವೆ ಇನ್ನೊಂದು ಟೋಲ್‌ ನಿರ್ಮಿಸಲಾಗಿದೆ. ಆದರೆ, ಈ ಭಾಗದ ರಸ್ತೆಯಲ್ಲಿ ಶಿಕಾರಿಪುರ, ಸೊರಬ ತಾಲೂಕಿನ ನೂರಾರು ಹಳ್ಳಿಯ ರೈತರು ಒಂದಿಲ್ಲೊಂದು ಕಾರಣಕ್ಕೆ ಶಿಕಾರಿಪುರ ಹಾಗೂ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಇನ್ನು ಮುಂದೆ ಇವರೆಲ್ಲರು ಟೋಲ್‌ ಕಟ್ಟಿ ಮುಂದೆ ಸಾಗಬೇಕಿದೆ.
ಸೊಪ್ಪಿನಬೆಟ್ಟ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
ಸಾಗರ ತಾಲೂಕಿನ ಬೇಳೂರು ಗ್ರಾಮದ ಸ.ನಂ. ೪೦ರ ಸೊಪ್ಪಿನ ಬೆಟ್ಟದಲ್ಲಿ ಅನಧಿಕೃತವಾಗಿ ಜಾಗ ಒತ್ತುವರಿ ಮಾಡುತ್ತಿರುವುದರ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿ ಬೇಳೂರು ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸೊಪ್ಪಿನ ಬೆಟ್ಟವನ್ನು ಅನಾದಿ ಕಾಲದಿಂದಲೂ ಕಾಪಾಡಿಕೊಂಡು ಬರುತ್ತಿದ್ದೇವೆ. ಇತ್ತೀಚೆಗೆ ಕೆಲವರು ಅನಧಿಕೃತವಾಗಿ ಜಾಗವನ್ನು ಒತ್ತುವರಿ ಮಾಡಿ ತಾತ್ಕಾಲಿಕ ಷೆಡ್‌ಗಳನ್ನು ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದಿದ್ದಾರೆ.
ಬೂತ್ ಮಟ್ಟದಿಂದ ಬಿಜೆಪಿಗೆ ಶಕ್ತಿ ತುಂಬಲು ಶ್ರಮಿಸಿ: ಬಿವೈಆರ್‌
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಇದರಿಂದ, ಸಮಾಜವನ್ನು ಎಚ್ಚರಿಸುವ ಕಾರ್ಯ ಆಗಬೇಕಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇಲ್ಲಿ ಬೂತ್ ಮಟ್ಟದಿಂದ ಪಕ್ಷಕ್ಕೆ ಶಕ್ತಿ ತುಂಬಲು ಶ್ರಮಿಸಬೇಕು. ಇದಕ್ಕೆ ಮೋರ್ಚಾಗಳ ಪದಾಧಿಕಾರಿಗಳ ಶ್ರಮ ಅಗತ್ಯ. ಆದ್ದರಿಂದ ಪಕ್ಷ ಸಂಘಟನೆಗೆ ಒಗ್ಗೂಡಬೇಕು ಎಂದು ಸಂಸದ ಬಿ‌.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಮನವಿ ಮಾಡಿದ್ದಾರೆ.
ಸಿದ್ಧಾಂತಕ್ಕೆ ಬದ್ಧರಾಗಿದ್ದ ಕೋಣಂದೂರು ಲಿಂಗಪ್ಪ: ಜ್ಞಾನೇಂದ್ರ
ರಾಜಕೀಯ ಕ್ಷೇತ್ರದಲ್ಲಿ ಸಿದ್ಧಾಂತ ಇಸಂ ಮುಂತಾದ ಎಲ್ಲ ಶಬ್ದಗಳು ಭಾಷಣಕ್ಕೆ ಸೀಮಿತವಾಗಿವೆ. ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರಂತೆ ಕೋಣಂದೂರು ಲಿಂಗಪ್ಪ ಕೂಡ ತಾವು ನಂಬಿದ ಸಿದ್ಧಾಂತಕ್ಕೆ ಬದ್ಧರಾಗಿದ್ದವರು. ಈ ಹಿಂದೆ ರಾಜಕೀಯ ಕ್ಷೇತ್ರದಲ್ಲಿ ಬಡವರ ಪರ ಅಭ್ಯರ್ಥಿ ಎಂಬ ಮಾತಿತ್ತು. ಪ್ರಸ್ತುತ ಚುನಾವಣೆ ಮಾಡುವ ತಾಕತ್ತು ಇದೆಯೇ ಎಂಬಂತ ಸ್ಥಿತಿ ನಿರ್ಮಾಣವಾಗಿದೆ. ಲಿಂಗಪ್ಪ ಅವರು ಬಿಟ್ಟ ಜಾಗಕ್ಕೆ ನಾವು ಬಂದವರು. ಆ ಸಂದರ್ಭದಲ್ಲಿ ಅವರು ಆಕ್ಟೀವ್ ಆಗಿದ್ದರೆ ನಮಗೆ ಅವಕಾಶವೇ ಇರುತ್ತಿರಲಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
ಮೋದಿ ಕಾರ್ಯಕ್ರಮಗಳ ಮುಂದೆ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು: ಸಂಸದ ರಾಘವೇಂದ್ರ
ನರೇಂದ್ರ ಮೋದಿ ಅವರು ನೀಡಿದ ಕಾರ್ಯಕ್ರಮಗಳ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು ಮಾತ್ರ. ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಇಂದಿಗೂ ಬಿಜೆಪಿ ಮಾತ್ರ 5 ಕೆಜಿ ಅಕ್ಕಿ ಕೊಡುತ್ತಿದೆ. ಮೋದಿ ಕಾರ್ಯಕ್ರಮಗಳಿಗೆ ತುಲನೆ ಮಾಡಿದರೆ ಅದು ನಗೆಪಾಟಲಿಗೆ ಈಡಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿಕಾರಿಪುರ ಪಟ್ಟಣದಲ್ಲಿ ಮೂಲಸೌಕರ್ಯಗಳತ್ತ ಸರಿಪಡಿಸಿ
ಶಿಕಾರಿಪುರ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಬಜೆಟ್ ಕುರಿತ ಚರ್ಚೆಗಾಗಿ ಆಯೋಜಿಸಲಾಗಿದ್ದ ಸಭೆಯಲ್ಲಿ ಇ-ಸ್ವತ್ತು ಮತ್ತಿತರ ದಾಖಲೆ ಪತ್ರಗಳ ಸೌಲಭ್ಯಕ್ಕಾಗಿ ಜನತೆ ನಿರಂತರ ಕಚೇರಿಗಳಿಗೆ ಅಲೆದಾಟ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರು ಸಭೆಯಲ್ಲಿ ಮೂಲಸೌಕರ್ಯಗಳ ಅವ್ಯವಸ್ಥೆ ಕುರಿತು ಸಭೆ ಗಮನ ಸೆಳೆದರು.
ತುಳಜಾಭವಾನಿ ಮಂದಿರ ಮರಾಠರ ಸಂಘಟಿತ ಶಕ್ತಿಗೆ ಸಾಕ್ಷಿ
ಶಿಕಾರಿಪುರ ಪಟ್ಟಣದ ಹೃದಯಭಾಗದಲ್ಲಿ ಶ್ರೀ ತುಳಜಾಭವಾನಿ ಮಂದಿರ ನಿರ್ಮಿಸಿರುವುದು ಸಮಾಜದ ಸಂಘಟಿತ ಶಕ್ತಿಗೆ ಸಾಕ್ಷಿಯಾಗಿದೆ. ದೇವರು ಎಲ್ಲರಿಗೂ ಮಂಗಲ ಕರುಣಿಸಲಿ. ಶ್ರೀಮಠದ ಆವರಣದಲ್ಲಿ ಶ್ರೀ ಭವಾನಿ ಶಂಕರ, ಬೃಹತ್ ನಾಗರಕಟ್ಟೆ ನಿರ್ಮಿಸಿದ್ದು ಭಕ್ತರಿಗೆ ಅನುಕೂಲ ಕಲ್ಪಿಸಿದಂತಾಗಿದೆ. ಶಿವಾಜಿ ಮಹಾರಾಜರಲ್ಲಿ ಇದ್ದ ಶಕ್ತಿ ತೋರಿಸಿ, ಹಿಂದೂವೀ ಸ್ವರಾಜ್ಯ ನಿರ್ಮಾಣಕ್ಕೆ ಪ್ರೇರೇಪಿಸಿದ ತುಳಜಾಭವಾನಿ ದೇವಸ್ಥಾನ ಇಲ್ಲಿನ ಭಕ್ತರಿಗೂ ಆದರ್ಶ ಜೀವನ ಕಲ್ಪಿಸುವಂತಾಗಲಿ ಎಂದು ಬೆಂಗಳೂರು ಗೋಸಾಯಿ ಮಠ, ಭವಾನಿ ಪೀಠದ ಶ್ರೀ ವೇದಾಂತಚಾರ್ಯ ಶ್ರೀ ಮಂಜುನಾಥ ಸ್ವಾಮೀಜಿ ನುಡಿದಿದ್ದಾರೆ.
ರಾಜ್ಯದ ಬಹುತೇಕ ಮರಾಠಿಗರಿಗೆ ಕನ್ನಡವೇ ಪ್ರೀತಿ
ರಾಜ್ಯದ ಬಹುತೇಕ ಮರಾಠಿಗರು ಕನ್ನಡ ಭಾಷೆಯನ್ನೇ ಅತ್ಯಂತ ಪ್ರೀತಿಯಿಂದ ಬಳಸುತ್ತಿರುವುದು ಉತ್ತಮ ಬೆಳವಣಿಗೆ. ರಾಜ್ಯದ ಗಡಿಯಲ್ಲಿ ಕೆಲವರು ಪುಂಡಾಟ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ, ಅವರಿಗೂ ರಾಜ್ಯದಲ್ಲಿ ಬದುಕುತ್ತಿರುವ ಮರಾಠಿಗರಿಗೂ ಯಾವುದೇ ಸಂಬಂಧ ಇಲ್ಲ. ಮರಾಠಿಗರು ರಾಜ್ಯದ ಕನ್ನಡಿಗರೊಂದಿಗೆ ಮತ್ತು ಅನ್ಯ ಧರ್ಮೀಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಹಬಾಳ್ವೆ ಜೀವನ ನಡೆಸುತ್ತಿದ್ದಾರೆ. ರಾಜ್ಯದ ಮರಾಠಿಗರು ಕನ್ನಡ ಭಾಷಾಪ್ರೇಮಿ ಸಹೃದಯಿಗಳಾಗಿದ್ದಾರೆ. ಸಣ್ಣಪುಟ್ಟ ವೈಮನಸುಗಳನ್ನು ಮರೆತು ಸಮಾಜ ಬಾಂಧವರು ಒಗ್ಗಟ್ಟಾಗಬೇಕು ಎಂದು ಭದ್ರಾವತಿ ಮರಾಠ ಸಮಾಜದ ಅಧ್ಯಕ್ಷ ವಕೀಲ ಲೋಕೇಶ ರಾವ್ ದೊಂಬಾಳೆ ಹೊಳೆಹೊನ್ನೂರಿನಲ್ಲಿ ಹೇಳಿದ್ದಾರೆ.
ಮಕ್ಕಳ ಪ್ರತಿಭೆಗಳ ಗುರುತಿಸಿ, ವೇದಿಕೆಗೆ ತನ್ನಿ
ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿಯಾಗಿವೆ. ಪ್ರತಿಯೊಂದು ಮಗುವಿನಲ್ಲಿ ಒಂದೊಂದು ಪ್ರತಿಭೆ ಹುಟ್ಟಿನಿಂದಲೇ ಬಂದಿರುತ್ತದೆ.
ಸರ್ಕಾರ ಇರೊವರೆಗೂ ಗ್ಯಾರಂಟಿ ಯೋಜನೆ ಮುಂದುವರೆಯಲಿವೆ
ಗ್ಯಾರೆಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ತುಂಬಾ ಕೇವಲವಾಗಿ ಮಾತನಾಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಗ್ಯಾರಂಟಿ ತಗೋಬೇಡಿ ಅಂತ ಜನರಿಗೆ ಕರೆ ಕೊಟ್ಟು ನೋಡಲಿ. ಆಗ ಅವರಿಗೆ ಗೊತ್ತಾಗುತ್ತೆ ಪ್ರತಿಕ್ರಿಯೆ ಯಾವ ರೀತಿ ಇರುತ್ತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದರು.
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved