• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ, ವೈದ್ಯಕೀಯ ಕ್ಷೇತ್ರದಲ್ಲೂ ಕನ್ನಡ ಬಳಕೆ ಬೇಕು
ಮಾತೃಭಾಷೆ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಸುವ ಹಂತಕ್ಕೆ ಕನ್ನಡ ಭಾಷೆ ಅಭಿವೃದ್ಧಿಪಡಿಸಬೇಕು. ಜಗತ್ತಿನಲ್ಲಿ ಸಾವಿರಾರು ಭಾಷೆಗಳಿವೆ. ಆದರೆ ಮಾತೃಭಾಷೆ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕು. ಕನ್ನಡ ಅನ್ನ ನೀಡುವ ಭಾಷೆಯಾಗಿದ್ದು, ಅನ್ಯಭಾಷೆಗಳನ್ನು ದ್ವೇಷಿಸದೇ ಕನ್ನಡದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮ್ಮದ್ ರಫೀಕ್ ಖಾನ್ ಶಿಕಾರಿಪುರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಸ್ವಯಂ ಉದ್ಯೋಗಪತಿ ಆಗುವ ಅವಕಾಶಗಳ ಸದ್ಬಳಕೆ ಮುಖ್ಯ
ವಿದ್ಯಾರ್ಥಿಗಳ ಜೀವನ ಅತ್ಯಮೂಲ್ಯವಾದುದು. ವಿದ್ಯಾರ್ಥಿ ಬದುಕು ಸಣ್ಣದಿರಬಹುದು, ಆದರೆ ದೊರೆತ ಅವಕಾಶ ಸಣ್ಣದಲ್ಲ. ವಿದ್ಯಾರ್ಥಿಗಳ ಆಲೋಚನಾ ಲಹರಿ ವಿಶಾಲವಾಗಿರಬೇಕು. ಇದರಿಂದ ಸಮಾಜಕ್ಕೆ ಒಳಿತು ಉಂಟಾಗುವಂತಿರಬೇಕು. ಆ ರೀತಿಯಲ್ಲಿ ಭವಿಷ್ಯದ ಕನಸನ್ನು ಕಾಣಬೇಕು ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ ಪ್ರಬಂಧಕ ಅಮರನಾಥ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಶಿವಾಜಿ ಮಹಾರಾಜರ ಜೀವನ ಚರಿತ್ರೆ ಮಕ್ಕಳಿಗೆ ತಿಳಿಸಬೇಕು
ಹಿಂದೂ ಸಮಾಜವನ್ನು ಸದೃಢಗೊಳಿಸುವ ದಿಸೆಯಲ್ಲಿ ಹಿಂದೂ ಸಾಮ್ರಾಟ್ ಛತ್ರವತಿ ಶಿವಾಜಿ ಮಹಾರಾಜರ ಸಾಹಸಮಯ ಜೀವನ ಚರಿತ್ರೆ ಮುಂದಿನ ಪೀಳಿಗೆಗೆ ತಿಳಿಸಿಹೇಳಬೇಕಾದ ಅಗತ್ಯತೆ ಹೆಚ್ಚಿದೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ರಾಜ್ಯಕ್ಕೆ ಸೀಮಿತವಾಗದೇ, ಸಮಸ್ತ ಹಿಂದೂಗಳ ಅಸ್ಮಿತೆಗಾಗಿ ಹೋರಾಡಿದ ಮಹಾನ್ ದೇಶಭಕ್ತ, ಧರ್ಮಭಕ್ತ ಎಂದು ಖ್ಯಾತ ವಾಗ್ಮಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಶಿಕಾರಿಪುರ ಹಾಗೂ ಆನವಟ್ಟಿ ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ.
ಅಕ್ರಮ ನೀರು ಎತ್ತುವ ಕಾರ್ಯಕ್ಕೆ ಬ್ರೇಕ್‌ ಹಾಕಲು ಸಿದ್ಧತೆ: ಭದ್ರಾ ನಾಲೆ, ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ
ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ, ಫೆ.19ರಿಂದ 26ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಫೆ.5ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ.
ಮಾ.12ರಿಂದ ತೀರ್ಥಹಳ್ಳಿಯಲ್ಲಿ ಮಾರಿಕಾಂಬಾ ಜಾತ್ರೆ
ಎರಡು ವರ್ಷಕ್ಕೊಮ್ಮೆ ನಡೆಯುವ ತೀರ್ಥಹಳ್ಳಿ ಪಟ್ಟಣದ ಶ್ರೀ ಮಾರಿಕಾಂಬಾ ಜಾತ್ರೆ ಮಾ.12ರಿಂದ 20ರವರೆಗೆ ಆಯೋಜಿಸಲಾಗಿದೆ. ಧಾರ್ಮಿಕ ಸಾಂಸ್ಕೃತಿಕ ಮತ್ತು ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿವೆ. ಜಾತ್ರೆ ಹಿನ್ನೆಲೆ ₹65 ಲಕ್ಷ ವೆಚ್ಚದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಧರ್ಮದರ್ಶಿ ಮಂಡಳಿ ಅಧ್ಯಕ್ಷ ಕೆ. ನಾಗರಾಜ ಶೆಟ್ಟಿ ಹೇಳಿದ್ದಾರೆ.
* ವಿಶ್ವಕರ್ಮ ಯೋಜನೆ ಉದ್ದೇಶ ಕುಶಲಕರ್ಮಿಗಳ ಜೀವನ ಸುಧಾರಣೆ
ಕುಶಲಕರ್ಮಿಗಳ ಜೀವನಮಟ್ಟ ಸುಧಾರಣೆ ಹಾಗೂ ಆರ್ಥಿಕ ಸಬಲೀಕರಣ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿಗಳ ವಿಶ್ವಕರ್ಮ ಯೋಜನೆ ಜಾರಿಗೊಳಿಸಿದೆ. ಅರ್ಹ ಕುಶಲಕರ್ಮಿಗಳು ಸದುಪಯೋಗ ಪಡೆಯಬೇಕು. ಕುಶಲಕರ್ಮಿಗಳನ್ನು ಉತ್ತೇಜಿಸಲು ಪಿ.ಎಂ. ವಿಶ್ವಕರ್ಮ ಯೋಜನೆ ಜಾರಿಗೊಳಿಸಲಾಗಿದೆ. ಯೋಜನೆಯಡಿ 18 ಸಾಂಪ್ರದಾಯಿಕ ಕುಶಲಕರ್ಮಿಗಳು ಬರುತ್ತಾರೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಶಿವಮೊಗ್ಗ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಇಂದಿನಿಂದ ಜಡೆ ಮಠದಲ್ಲಿ ಜಾತ್ರಾ ಮಹೋತ್ಸವ
ಸೊರಬ ತಾಲೂಕಿನ ಜಡೆ ಮಠದ ಶ್ರೀ ಸಿದ್ಧವೃಷಭೇಂದ್ರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಮತ್ತು ಶಿಲಾಮಠದ ಲೋಕಾರ್ಪಣೆ, ನಿರಂಜನ ಚರಪಟ್ಟಾಧಿಕಾರ ಮಹೋತ್ಸವ ಮತ್ತು ಡಾ. ಮಹಾಂತ ಮಹಾಸ್ವಾಮಿಗಳ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ಫೆ.21ರಿಂದ 24ರವರೆಗೆ ಮಠದ ಆವರಣದಲ್ಲಿ ಜರುಗಲಿದೆ. ಹಾರನಹಳ್ಳಿ ಕೋಡಿ ಮಠದ ಶಿವಾನಂದ ರಾಜಯೋಗೇಂದ್ರ ಶ್ರೀಗಳ ಲಿಂಗಹಸ್ತದಿಂದ ಮಠದ ಉತ್ತರಾಧಿಕಾರಿ ರುದ್ರದೇವರು ಹಾಗೂ ಅರಕೇರಿ ವಿರಕ್ತಾಶ್ರಮದ ಉತ್ತಾಧಿಕಾರಿ ಸಿದ್ಧಲಿಂಗ ದೇವರಿಗೆ ಚಿನ್ಮಯಾನುಗ್ರಹ ನೀಡಿ, ರುದ್ರದೇಶಿಕರು ಹಾಗೂ ಸಿದ್ದಲಿಂಗ ದೇಶಿಕರು ಎಂದು ನಾಮಕರಣ ಮಾಡುವರು. ಸಂಸದ ಬಿ.ವೈ. ರಾಘವೇಂದ್ರ ಅವರಿಂದ ಜಗದ್ಗುರು ಕುಮಾರ ಕೆಂಪಿನ ಸಿದ್ದವೃಷಭೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಯ ಶಿಲಾಮಠ ಲೋಕಾರ್ಪಣೆ ಮಾಡುವರು.
ಜಾತೀಯತೆ ನಿವಾರಣೆಗೆ ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಿದ್ದ ಸರ್ವಜ್ಞ
ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಸರ್ವಜ್ಞ ಅವರು ಮಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುವ ಉದ್ದೇಶದಿಂದ ಸರ್ಕಾರ ಇಂದು ಅಂತರ್ಜಾತಿ ವಿವಾಹಕ್ಕೆ ಎಲ್ಲ ರೀತಿಯ ಪ್ರೋತ್ಸಾಹ ನೀಡುತ್ತಿದೆ. ಆದರೆ, ಸರ್ವಜ್ಞ ಅಂದಿನ ಕಾಲದಲ್ಲಿಯೇ ಅಂತರ್ಜಾತಿ ವಿವಾಹಕ್ಕೆ ಕರೆ ನೀಡುವ ಮೂಲಕ, ಜಾತಿ ಜಾತಿಗಳ ನಡುವೆ ಸಾಮರಸ್ಯವನ್ನು ಮೂಡಿಸಿದ್ದರು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.
ಅಂಗನವಾಡಿ ಸಿಬ್ಬಂದಿ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೊಳಿಸಿ
ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನ್ಯಾಯ ಮಾಡುತ್ತಿದೆ. ಈ ಬಾರಿ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಯೋಜನೆ ಜಾರಿ ಮರೆತು, ಕಡೆಗಣಿಸಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಗೌರವಾಧ್ಯಕ್ಷೆ ಸುಶೀಲಬಾಯಿ ಭದ್ರಾವತಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ನಿ ಜೊತೆ ಮಾತಾಡಿದ ವ್ಯಕ್ತಿ ಬೆರಳನ್ನೇ ತುಂಡರಿಸಿದ ಪತಿ!
ತನ್ನ ಪತ್ನಿ ಜೊತೆ ಎದುರು ಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ಪತಿರಾಯ ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಗ್ಗೆ ಸಾಗರ ಪಟ್ಟಣಕ್ಕೆ ಸಮೀಪದ ಬೆಳಲಮಕ್ಕಿಯಲ್ಲಿ ನಡೆದಿದೆ. ನೀರಿನ ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯಲಕುಂದ್ಲಿಯ ನವೀನ್ ಹಾಗೂ ಆತನ ಸ್ನೇಹಿತ ಧರೇಶ್ ಹಲ್ಲೆಗೊಳಗಾದವರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 490
  • next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved