ಶಿವಾಜಿ ಮಹಾರಾಜರ ಜೀವನ ಚರಿತ್ರೆ ಮಕ್ಕಳಿಗೆ ತಿಳಿಸಬೇಕುಹಿಂದೂ ಸಮಾಜವನ್ನು ಸದೃಢಗೊಳಿಸುವ ದಿಸೆಯಲ್ಲಿ ಹಿಂದೂ ಸಾಮ್ರಾಟ್ ಛತ್ರವತಿ ಶಿವಾಜಿ ಮಹಾರಾಜರ ಸಾಹಸಮಯ ಜೀವನ ಚರಿತ್ರೆ ಮುಂದಿನ ಪೀಳಿಗೆಗೆ ತಿಳಿಸಿಹೇಳಬೇಕಾದ ಅಗತ್ಯತೆ ಹೆಚ್ಚಿದೆ. ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ರಾಜ್ಯಕ್ಕೆ ಸೀಮಿತವಾಗದೇ, ಸಮಸ್ತ ಹಿಂದೂಗಳ ಅಸ್ಮಿತೆಗಾಗಿ ಹೋರಾಡಿದ ಮಹಾನ್ ದೇಶಭಕ್ತ, ಧರ್ಮಭಕ್ತ ಎಂದು ಖ್ಯಾತ ವಾಗ್ಮಿ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಶಿಕಾರಿಪುರ ಹಾಗೂ ಆನವಟ್ಟಿ ಕಾರ್ಯಕ್ರಮಗಳಲ್ಲಿ ಹೇಳಿದ್ದಾರೆ.