• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿ, ಜಾತಿ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ
ವ್ಯಕ್ತಿವಾದ, ಜಾತಿವಾದ, ಕೋಮುವಾದಗಳು ಚುನಾವಣೆ ದಿಕ್ಕನ್ನೇ ಬದಲಿಸಿವೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವ ನಾವು ಚುನಾವಣೆಯಲ್ಲಿ ನಿರ್ಭೀತರಾಗಿ ಮತ ಚಲಾಯಿಸಬೇಕು ಎಂದು ಹೇಳಲಾಗುತ್ತಿದೆ. ಆದರೆ, ಇಂದು ಹಣ, ಹೆಂಡ, ಜಾತಿ, ಧರ್ಮದ ಆಧಾರದ ಮೇಲೆ ಚುನಾವಣೆ ನಡೆಯುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ‌ ಎಂದು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಸಂವಾದ ಕಾರ್ಯಕ್ರಮದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಗೋಪಿನಾಥ್ ಅಮಾನತು, ಭ್ರಷ್ಟಾಚಾರ ತನಿಖೆಗೆ ಆದೇಶ ಸ್ವಾಗತಾರ್ಹ: ಆರ್.ಶಿವಣ್ಣ
ಭ್ರಷ್ಟಾಚಾರದಲ್ಲಿ ತೊಡಗಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಅವರನ್ನು ಸರ್ಕಾರ ಅಮಾನತುಗೊಳಿಸಿ, ತನಿಖೆಗೆ ಆದೇಶಿಸಿರುವುದು ಸ್ವಾಗತಾರ್ಹ. ಗೋಪಿನಾಥ್ ಅವರು ಇಲಾಖೆಯ ಆಹಾರ ಮತ್ತು ಇತರೆ ಸಾಮಗ್ರಿಗಳ ಪೂರೈಕೆ ಟೆಂಡರ್‌ನಲ್ಲಿ ಕೋಟ್ಯಂತರ ರು.ಗಳ ಭ್ರಷ್ಟಾಚಾರ ಎಸಗಿದ್ದು, ಅದನ್ನು ಬಯಲಿಗೆಳೆದಿದ್ದೆ. ಈ ಬಗ್ಗೆ ಸರ್ಕಾರಕ್ಕೆ ಮತ್ತು ಸಮಾಜ ಕಲ್ಯಾಣ ಸಚಿವರಿಗೆ ಆಧಾರ ಸಮೇತ ದೂರು ನೀಡಿದ್ದೆ. ಇದನ್ನು ಗಮನಿಸಿದ ಸಚಿವರು ಗೋಪಿನಾಥ್ ಅವರನ್ನು ಅಮಾನತುಪಡಿಸಿ, ತನಿಖೆಗೆ ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಶಿವಣ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಎದುರು ಶಿಕ್ಷಕರು ಎಚ್ಚರದಿಂದ ವರ್ತಿಸಲಿ
ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಆಂಗ್ಲ ಮಾಧ್ಯಮಕ್ಕೂ ಅನುಮತಿ ನೀಡಿ, ಕನಿಷ್ಠ ಸಂಖ್ಯೆ ವಿದ್ಯಾರ್ಥಿಗಳು ಇರುವ ಶಾಲೆಗಳನ್ನು ವಿಲೀನಗೊಳಿಸುವುದು ಅತ್ಯಂತ ಅಗತ್ಯದ ಕಾರ್ಯವಾಗಿದೆ. ವ್ಯಕ್ತಿ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕವಾಗಿದೆ. ಹೀಗಾಗಿಯೇ ಸಮಾಜದಲ್ಲಿ ಶಿಕ್ಷಕರಿಗಿರುವ ಗೌರವ ಬೇರೆಯವರಿಗಿಲ್ಲ. ವಿದ್ಯಾರ್ಥಿಗಳು ನಿಮ್ಮನ್ನು ಅನುಸರಿಸುವ ಕಾರಣ ನಿಮ್ಮಗಳ ವರ್ತನೆ ಬಗ್ಗೆ ಎಚ್ಚರ ವಹಿಸಿ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ತಾಲೂಕು ಅಧ್ಯಕ್ಷರಾಗಿ ಎಸ್.ಡಿ.ನಾಯಕ್, ಸುಮಾ ಆಯ್ಕೆ
ಸೊರಬ ತಾಲೂಕಿನ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ತಾಲೂಕು ಅಧ್ಯಕ್ಷರಾಗಿ ಎಸ್.ಡಿ. ನಾಯಕ್ ಮತ್ತು ಮಹಿಳಾ ಘಟಕ ಅಧ್ಯಕ್ಷರಾಗಿ ಸುಮಾ ಸಂತೋಷ್ ಅವರನ್ನು ಆಯ್ಕೆ ಮಾಡಲಾಯಿತು. ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಎನ್. ಡಿಪಿ ಸಂಘಟನೆಯ ತಾಲೂಕು ಸಂಘಟನೆಯ ಪುರುಷ-ಮಹಿಳಾ ಪದಾಧಿಕಾರಿಗಳ ಆಯ್ಕೆಗಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಹರೀಶಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ
ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಸೊರಬ ತಾಲೂಕಿನ ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ದ್ಯಾವಾಸ, ಹರೀಶಿ ಸರ್ಕಲ್ ಹಾಗೂ ಶ್ರಿನಗರ ಗ್ರಾಮದ ಶ್ರೀ ಭೂತೇಶ್ವರ ಯುವಕ ಸಂಘ, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಶನಿವಾರ ಪಟ್ಟಣದ ಅಬಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಲೋಕಾಯುಕ್ತ ಅಧಿಕಾರಿ ಎಂದ್ಹೇಳಿ ಮಹಿಳಾ ಅಧಿಕಾರಿಗೆ 1 ಲಕ್ಷ ರು. ವಂಚನೆ!
ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು, ವಂಚಿಸಿದ್ದಾನೆ.
ಶಿವಮೊಗ್ಗ ಜಿಲ್ಲೆ ಮೂಗಿಗೆ ತುಪ್ಪ ಸವರಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಮಲೆನಾಡು ರಾಜಧಾನಿ ಶಿವಮೊಗ್ಗಕ್ಕೆ ಸಿಹಿ-ಕಹಿಯ ಬಜೆಟ್‌ ಎಂಬಂತೆ ಭಾಸವಾಗುತ್ತಿದೆ. ಕೊಟ್ಟೂ ಕೊಡದಿರುವ ತಂತ್ರಗಾರಿಕೆ ಕಾಣುತ್ತಿದೆ. ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದನ್ನು ಹೊರತುಪಡಿಸಿ, ಪ್ರಮುಖವಾದ ಯೋಜನೆಗಳ ಕುರಿತು ಯಾವ ಪ್ರಸ್ತಾಪವೂ ಇಲ್ಲವಾಗಿವೆ.
ಸಿಎಂರಿಂದ ಅರ್ಥವಿಲ್ಲದ ಬಜೆಟ್‌: ಶಾಸಕ ಚನ್ನಬಸಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ತಮ್ಮ 15ನೇ ಬಜೆಟ್‌, ಗ್ಯಾರಂಟಿಗಳ ಅರ್ಥವಿಲ್ಲದ ಆರ್ಥಿಕ ಕೂಪದಲ್ಲಿ ಬಿದ್ದಿರುವುದು ಎದ್ದುಕಾಣುತ್ತಿದೆ. ತಮ್ಮ ತಪ್ಪಿಗೆ ತೇಪೆ ಹಾಕಲು ಕೇಂದ್ರ ಸರ್ಕಾರದೆಡೆಗೆ ಬೊಟ್ಟು ಮಾಡುವ ಚಾಳಿಯನ್ನು ಮೈಗೂಡಿಸಿಕೊಂಡಿರುವ ಮಾನ್ಯ ಸಿದ್ದರಾಮಯ್ಯ ಅವರು ಕೇಂದ್ರದ ಪಾಲು ಬಂದಿಲ್ಲ ಎಂದು ಒಂದು ಸುಳ್ಳನ್ನೇ ನೂರು ಸಾರಿ ಪದೇಪದೇ ಹೇಳಿದರೆ ಜನರನ್ನು ತಮ್ಮ ಸುಳ್ಳಿನಿಂದ ನಂಬಿಸಬಹುದು ಎಂದುಕೊಂಡಿದ್ದಾರೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯೆಯಲ್ಲಿ ಕಿಡಿಕಾರಿದರು.
ಹ್ಯೂಂಡಾಯ್‌ ಕಾರ್ ಶೋ ರೂಂಗೆ ಬೆಂಕಿ
ಕರೆಂಟ್ ಶಾರ್ಟ್ ಸರ್ಕ್ಯೂರ್ಟ್‌ನಿಂದಾಗಿ ಶಿವಮೊಗ್ಗ ನಗರದ ಶಂಕರ ಮಠ ರಸ್ತೆಯ ರಾಹುಲ್ ಹ್ಯೂಂಡಾಯ್‌ ಕಾರ್ ಶೋ ರೂಂಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರು. ಮೌಲ್ಯವ ಕಾರು ಮತ್ತು ಇತರೆ ವಸ್ತುಗಳು ಸುಟ್ಟು ಕರಕಲಾಗಿವೆ. ರಾತ್ರಿ 10 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಶೋ‌ ರೂಂ ನಲ್ಲಿದ್ದ ಹೊಸ ಕಾರುಗಳು ಹಾಗೂ ಸರ್ವಿಸ್ ಗೆ ಬಂದಿದ್ದ ಲಕ್ಷಾಂತರ ರು. ಮೌಲ್ಯದ ಕಾರುಗಳು ಭಾಗಶಃ ಅಥವಾ ಪೂರ್ಣ ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದುಬಂದಿದೆ.
ನವದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಸಾಗರದಲ್ಲಿ ರೈತರ ಬೆಂಬಲ
ನವದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 378
  • 379
  • 380
  • 381
  • 382
  • 383
  • 384
  • 385
  • 386
  • ...
  • 490
  • next >
Top Stories
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌
ಬುದ್ಧಿವಂತ ನಟ, ನಿರ್ದೇಶಕ ಉಪೇಂದ್ರಗೇ ಸೈಬರ್‌ ಟೋಪಿ!
ವಿಶ್ವದ ಅತಿ ದೊಡ್ಡ ಡ್ಯಾಂ ಕಟ್ಟುವ ಚೀನಾಕ್ಕೆ ಭಾರತ ಸಡ್ಡು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved