• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಗೆಲುವು ಖಚಿತ: ಸುಂದರೇಶ್‌
ಜಿಲ್ಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಘಟನೆ ಬಲವಾಗಿದೆ. ಎಲ್ಲ ನಾಯಕರು ಒಗ್ಗಟ್ಟಾಗಿ ಈ ಬಾರಿ ನಮ್ಮ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ಅವರನ್ನು ಗೆದ್ದೇ ಗೆಲ್ಲಿಸುತ್ತೇವೆ. ಗೀತಾ ಅವರು ಈಗಾಗಲೇ ಸೊರಬದಲ್ಲಿ ಇದ್ದಾರೆ. ಪ್ರಚಾರವನ್ನೂ ಕೂಡ ಕೈಗೊಂಡಿದ್ದಾರೆ. ಅವರ ಸಹೋದರ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕೂಡ ಚುನಾವಣೆ ಕೆಲಸ ಮಾಡುತ್ತಿದ್ದಾರೆ. ಗೀತಾ ಶಿವರಾಜ್‍ಕುಮಾರ್ ಜೊತೆಗೆ ನಟ ಶಿವರಾಜ್‍ಕುಮಾರ್ ಕೂಡ ಪ್ರಚಾರಕ್ಕೆ ಕೈ ಜೋಡಿಸಲಿದ್ದಾರೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ
ಬೆಂಗಳೂಳೂರಿನ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ. ಕೆಫೆ ಬಾಂಬ್ ಸ್ಫೋಟದಲ್ಲಿ ಶಿವಮೊಗ್ಗ ಜಿಲ್ಲೆಯ ಶಂಕಿತ ಉಗ್ರರ ಕೈವಾಡ ಶಂಕೆ ಮೇರೆಗೆ ಮಾಝನನ್ನು ಎನ್‌ಐಎ ಗ್ರೀಲ್‌ ನಡೆಸಿದೆ ಎನ್ನಲಾಗಿದೆ.
ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ: ರಮೇಶ್‌ ಜಾರಕಿಹೊಳಿ
ಈಶ್ವರಪ್ಪ ಜೊತೆ ಟಿಕೆಟ್ ಅಸಮಾಧಾನ ಕುರಿತು ಚರ್ಚೆ ನಡೆಸಲಾಗಿದೆ. ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದೆ. ಇನ್ನೂ ಸಮಯ ಮೀರಿಲ್ಲ. ನಾನು ಟಿಕೆಟ್ ವಿಚಾರವಾಗಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಸಾಕಷ್ಟು ಬದಲಾವಣೆಗೆ ಅವಕಾಶ ಇದೆ. ಈಶ್ವರಪ್ಪ ಅವರಿಗೆ ಪದೇಪದೆ ಅನ್ಯಾಯ ಆಗುತ್ತಿದೆ. ಇದನ್ನು ಸರಿಪಡಿಸಬೇಕು ಎಂದೂ ಹೇಳಿದ್ದಾರೆ.
ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚನೆ: ಸಂಸದ
ಉದ್ಯೋಗ ಸೃಷ್ಠಿ, ಅಭಿವೃದ್ಧಿಯ ಕೆಲಸಗಳಿಗೆ ಒತ್ತು ನೀಡುವುದು ಈ ಬಾರಿಯ ಚುನಾವಣಿ ಮುಖ್ಯ ಉದ್ದೇಶವಾಗಿದೆ. ದಕ್ಷಿಣ ಕನ್ನಡ ಮತ್ತು ಮಲೆನಾಡಿನ ನಡುವಿನ ಹೆಬ್ಬಾಗಿಲಾಗಿರುವ ಆಗುಂಬೆಯಲ್ಲಿ ಟನಲ್ ನಿರ್ಮಿಸಲು ಡಿಪಿಆರ್ ರಚಿಸಲಾಗುತ್ತಿದೆ. ಇವತ್ತಲ್ಲ ನಾಳೆ ಅದನ್ನ ಪೂರ್ಣಗೊಳಿಸುತ್ತೇವೆ ಎಂದು ಸಂಸದ ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಂಗವಿಕಲೆಗೆ ಅಲೆಸದೇ ಪತಿ ಮರಣ ಪತ್ರ ನೀಡಿ
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಂಗವಿಕಲೆ ಕಮಲಮ್ಮ ಅವರ ಪತಿ ಮೃತ ತಿರುಕಪ್ಪನವರ ಶವ ಪರೀಕ್ಷೆ ಮಾಡಿ, ವರದಿಯನ್ನು ನೀಡಿ, ಮರಣ ಪ್ರಮಾಣ ಪತ್ರಕ್ಕೆ ಮಾತ್ರ ಮೊದಲು ದಾಖಲಾದ ಆಸ್ಪತ್ರೆ ವ್ಯಾಪ್ತಿಯ ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಎಂದು ಪತ್ರ ಬರೆದುಕೊಟ್ಟು ಆರು ವರ್ಷದಿಂದ ಮರಣ ಪತ್ರಕ್ಕಾಗಿ ಅಲೆದಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಜನಧನಿ ಜನಾ ಸೇವಾ ಸಂಸ್ಥೆಯ ಮಹಿಳಾ ಘಟಕದ ಉಪಾಧ್ಯಕ್ಷೆ ಕುಸುಮ ಆನವಟ್ಟಿಯಲ್ಲಿ ಒತ್ತಾಯಿಸಿದ್ದಾರೆ.
ದೇಹ, ಮನಸ್ಸಿಗೆ ಸಾಮರ್ಥ್ಯ ತರುವ ಕ್ರೀಡೆ ಪ್ರೋತ್ಸಾಹಿಸಿ
ದೇಹ ಮತ್ತು ಮನಸ್ಸಿಗೆ ಶ್ರಮ ನೀಡದ ಕ್ರೀಡಾ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿಸುವುದಿಲ್ಲ. ಬದಲಾಗಿ ಬದುಕಿನ ದಾರಿಯನ್ನೇ ಕವಲುಗೊಳಿಸುತ್ತವೆ. ಆದ್ದರಿಂದ ಯುವಜನತೆ ಮನಸ್ಸು ಮತ್ತು ದೇಹಕ್ಕೆ ಸಾಮರ್ಥ್ಯ ನೀಡುವ, ಪರಸ್ಪರ ವಿಶ್ವಾಸಕ್ಕೆ ಪೂರಕವಾದ ಕ್ರೀಡೆಗಳನ್ನು ಪ್ರೋತ್ಸಾಹಿಸಿ, ಅವುಗಳಲ್ಲಿ ಭಾಗವಹಿಸಬೇಕು ಎಂದು ಆರ್ಯ ಈಡಿಗ ಸಂಘದ ಅಧ್ಯಕ್ಷ ಎಚ್. ಗಣಪತಿ ಸೊರಬದಲ್ಲಿ ಹೇಳಿದ್ದಾರೆ.
ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಶಿವರುದ್ರಯ್ಯ ಸ್ವಾಮಿ ಹೇಳಿಕೆ
ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಥಳೀಯ ನಾಯಕರು ಮತ್ತು ಸಮಾನ ಮನಸ್ಕ ಪಕ್ಷಗಳ ಸಹಕಾರ, ಆತ್ಮೀಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ನಿವೃತ್ತ ಅಧಿಕಾರಿ ಶಿವರುದ್ರಯ್ಯ ಸ್ವಾಮಿ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಅಸಾಧಾರಣ ಸಮಾಜವಾದಿ ಶಾಂತವೇರಿ ಗೋಪಾಲಗೌಡ
ಸತ್ಯ ಆವೇಶಗೊಂಡಾಗ ವಿಧಾನಸೌಧವನ್ನೇ ಗಢಗಢ ನಡುಗಿಸಿದ ಅಸಾಧಾರಣ ಸಮಾಜವಾದಿ ಶಾಂತವೇರಿ ಗೋಪಾಲಗೌಡ. ನಾಯಕತ್ವಕ್ಕೆ ಗೌಡರೆಂದರೆ ಶಾಂತವೇರಿಯ ಗೋಪಾಲಗೌಡರು ಎಂದು ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಯಡಿಯೂರಪ್ಪ ಯಾರಿಗೂ ದ್ರೋಹ ಬಗೆದಿಲ್ಲ: ಸಂಸದ ರಾಘವೇಂದ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಾರಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ಕೆ.ಎಸ್. ಈಶ್ವರಪ್ಪ ಅವರು, ನಮ್ಮ ತಂದೆ ಬಿ.ಎಸ್. ಯಡಿಯೂರಪ್ಪ ಹಾಗೂ ಅನಂತ್‌ಕುಮಾರ್ ಜೊತೆಗೆ ಪಕ್ಷ ಕಟ್ಟಿದವರು. ಅವರು ಕಟ್ಟರ್ ರಾಷ್ಟ್ರವಾದಿ ಮತ್ತು ಪ್ರಧಾನಿ ಮೋದಿ ಅಭಿಮಾನಿ. ಯಾವುದೇ ಕಾರಣಕ್ಕೂ ಪಕ್ಷವಿರೋಧಿ ಚಿಂತನೆಯನ್ನು ಅವರು ಮಾಡುವುದಿಲ್ಲ. ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯ ಸಾರಥ್ಯ ವಹಿಸಿ ರಥ ಮುನ್ನಡೆಸಲಿದ್ದಾರೆಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಪುತ್ರನಿಗೆ ತಪ್ಪಿದ ಟಿಕೆಟ್‌: ಇಂದು ಸಂಜೆ ಈಶ್ವರಪ್ಪ ಸಭೆ

ಲೋಕಸಭಾ ಚುನಾವಣೆಯಲ್ಲಿ ಪುತ್ರನಿಗೆ ಹಾವೇರಿಯಿಂದ ಟಿಕೆಟ್‌ ತಪ್ಪಿದ ಬೆನ್ನಲ್ಲೆ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಮಾ.15ರಂದು ಸಂಜೆ 5ಕ್ಕೆ ನಗರದ ಬಂಜಾರ ಕನ್ವೆನ್ಸನ್‌ನಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಲಿದ್ದಾರೆ.

  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved