• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಐಎಸ್ಎಲ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ: ಸಿಂಧಿಯಾಗೆ ಶಾ ಪತ್ರ
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಪುನರುಜ್ಜೀವನಗೊಳಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜ.13ರಂದು ಮನವಿ ಸಲ್ಲಿಸಿದ್ದ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪತ್ರ ಬರೆದು ಕ್ರಮಕ್ಕೆ ಕೋರಿದ್ದಾರೆ.
ನಾಳೆ ನೂತನ ಬಂಟರ ಭವನ ಲೋಕಾರ್ಪಣೆ
ಸುಮಾರು 25 ಸಾವಿರ ಚದರ ಅಡಿ ಜಾಗದಲ್ಲಿ ನಿರ್ಮಿಸಲಾಗಿರುವ ಬಂಟರ ಭವನದಲ್ಲಿ ಸುಮಾರು 800 ಆಸನವುಳ್ಳ ಸಂಪೂರ್ಣ ಹವಾ ನಿಯಂತ್ರಿತ ಸಭಾಂಗಣವಿದೆ ಎಂದು ಸಂಘದ ಅಧ್ಯಕ್ಷ ಡಾ.ಎ.ಸತೀಶ್‌ಕುಮಾರ್ ಶೆಟ್ಟಿ ತಿಳಿಸಿದರು.
ಸಂವಿಧಾನದ ಮಹತ್ವವನ್ನು ನೆನೆಯಿರಿ: ಎಚ್.ಕೆ.ನಾಗಪ್ಪ ಕರೆ
ಸೊರಬ ತಾಲೂಕಿನ ನ್ಯಾರ್ಶಿ ಗ್ರಾಮ ಹಾಗೂ ಸಾಗರ ಪಟ್ಟಣದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.
ಕನ್ನಡ ಭಾಷೆ ಮಾತ್ರವಲ್ಲ, ಅದೊಂದು ಸಂಸ್ಕೃತಿ: ಸಿದ್ರಾಮಣ್ಣ
ಕನ್ನಡ ಒಂದು ಭಾಷೆ ಮಾತ್ರವಲ್ಲ, ಅದೊಂದು ಸಂಸ್ಕೃತಿ. ಅನೇಕ ವರ್ಷಗಳ ವಿಕಾಸವಾದ ಇದರಲ್ಲಿದೆ. ಬಳಕೆ ಮಾಡಿದ್ದು ಮಾತ್ರ ಉಳಿಯುತ್ತದೆ. ಬಳಕೆ ಮಾಡದಿದ್ದರೆ ಉಳಿಯುವುದಿಲ್ಲ. ಅದೇ ರೀತಿ ಕನ್ನಡವನ್ನು ಎಲ್ಲೆಲ್ಲಿ ಬಳಕೆ ಮಾಡಲು ಅವಕಾಶವಿದೆ ಎಂಬುದನ್ನು ತಿಳಿದು ಬಳಸಬೇಕು. ಕನ್ನಡ ಬಳಕೆಗೆ ಅವಕಾಶ ಇರುವುದು‌ ಕರ್ನಾಟಕದಲ್ಲಿ. ಇದನ್ನು ಅರಿತು ಕನ್ನಡ ಬಳಸಬೇಕಿದೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಆರ್.ಕೆ. ಸಿದ್ರಾಮಣ್ಣ ಶಿವಮೊಗ್ಗದಲ್ಲಿ ಹೇಳಿದ್ಧಾರೆ.
ರೈತ ಸಂಘಕ್ಕೆ ಸೇರುವವರಿಗೆ ಬದ್ಧತೆ ಬೇಕು: ದಿನೇಶ್‌ ಶಿರವಾಳ
ಮಾರ್ಚ್ 1ರಂದು ಭೂ ಸುಧಾರಣೆ ಕಾಯ್ದೆ ಜಾರಿಗೆ ಬಂದು 50 ವರ್ಷ ಕಳೆಯುತ್ತಿರುವ ಹಿನ್ನೆಲೆ ರೈತ ಸಂಘದ ವತಿಯಿಂದ ಬೃಹತ್ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತ ಸಂಘದ ಗಣಪತಿಯಪ್ಪ ಬಣ ಜಿಲ್ಲೆಯಲ್ಲಿ ಸದೃಢವಾಗಿ ಬೆಳೆಯುತ್ತಿದೆ. ಬೇರೆ ಬೇರೆ ಹೋರಾಟದ ಮೂಲಕ ರೈತರ ಧ್ವನಿಯಾಗಿ ಸಂಘ ಕೆಲಸ ಮಾಡುತ್ತಿರುವುದು ಎಲ್ಲರ ಮೆಚ್ಚುಗೆ ಪಡೆದಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಸುಶೀಲ್‌ಗೆ ಚೂರಿ ಇರಿತ ಪ್ರಕರಣ: ಮೂವರು ಆರೋಪಿಗಳ ಸೆರೆ
ಶಿಕಾರಿಪುರ ಪಟ್ಟಣದ ದೊಡ್ಡಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದ ಚೂರಿ ಇರಿತ ಪ್ರಕರಣದಲ್ಲಿನ ನಾಲ್ಕು ಆರೋಪಿಗಳಲ್ಲಿ ಒಟ್ಟು ಮೂವರನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಬಾಲಾಪರಾಧಿಯೂ ಸೇರ್ಪಡೆಗೊಂಡಿದ್ದಾನೆ. 3ನೇ ಆರೋಪಿ, ಬಾಲಾಪರಾಧಿ ಷಹನಾಜ್ ಎಂಬಾತನನ್ನೂ ಪ್ರಕರಣದಡಿ ಬಂಧಿಸಿ ಶಿವಮೊಗ್ಗದ ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಮಂಗಳವಾರ ರಾತ್ರಿ ಪಟ್ಟಣದಲ್ಲಿ ಮುಸ್ಲಿಂ ಯುವಕ ವ್ಹೀಲಿಂಗ್‌ನಲ್ಲಿ ತೊಡಗಿದ್ದ. ಈತನಿಗೆ ಹಿಂದೂ ಯುವಕ ಸುಶೀಲ್‌ ಎಂಬಾತ ಬುದ್ಧಿಮಾತು ಹೇಳಿದ್ದರಿಂದ ಕೆರಳಿ ಚೂರಿಯಿಂದ ಇರಿಯಲಾಗಿತ್ತು. ಇದರಿಂದಾಗಿ ಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ಘಟನೆ ಖಂಡಿಸಿ ಬುಧವಾರ ಬೆಳಗ್ಗೆ ಸಂಸದ ರಾಘವೇಂದ್ರ ನೇತೃತ್ವದಲ್ಲಿ ಪಟ್ಟಣ ಠಾಣೆ ಮುಂಭಾಗ ತೀವ್ರ ಪ್ರತಿಭಟನೆ ನಡೆಸಿ, ಕೂಡಲೇ ಆರೋಪಿಗಳ ಬಂಧನದ ಜತೆಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು.
ಬಿಜೆಪಿ ಸಂಸದ, ರಾಜ್ಯಾಧ್ಯಕ್ಷರ ಮನೆಗಳಿಗೆ ಕಾಂಗ್ರೆಸ್‌ ಮುತ್ತಿಗೆ
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಲತಾಯಿ ಧೋರಣೆ ತೋರಲಾಗುತ್ತಿದೆ ಎಂದು ಆರೋಪಿಸಿ ಬುಧವಾರ ಯುವ ಕಾಂಗ್ರೆಸ್ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ನಿವಾಸಕ್ಕೆ ಹಾಗೂ ಎನ್‌ಎಸ್‌ಯುಐ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಕೆಲ ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದರು. ದೆಹಲಿಯ ಜಂತರ್‌ ಮಂತರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ "ನಮ್ಮ ತೆರಿಗೆ ನಮ್ಮ ಹಕ್ಕು " ದಿಲ್ಲಿ ಚಲೋ ಬೆಂಬಲಿಸಿ, ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡಿ.ಕೆ.ಸುರೇಶ್‌, ವಿನಯ್‌ ಕುಲಕರ್ಣಿ ಅಮಾನತುಗೊಳಿಸಬೇಕು: ಈಶ್ವರಪ್ಪ ಆಗ್ರಹ
ಭಾರತವನ್ನೇ ಇಬ್ಭಾಗ ಮಾಡುವ ಹೇಳಿಕೆ ನೀಡಿದ ಡಿ.ಕೆ.ಸುರೇಶ್ ಹಾಗೂ ವಿನಯ ಕುಲಕರ್ಣಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕು. ಒಂದು ಕಡೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯಾತ್ರೆ ಮಾಡಿ ಇದು ಅಖಂಡ ಭಾರತ ಎನ್ನುತ್ತಾರೆ. ಇನ್ನೊಂದಡೆ ರಾಜ್ಯ ನಾಯಕರು ದಕ್ಷಿಣ ಭಾರತವನ್ನು ಪ್ರತ್ಯೇಕ ದೇಶವನ್ನಾಗಿ ನಾವು ಕೇಳುತ್ತೇವೆ ಎಂದು ಹೇಳುತ್ತಾರೆ. ಇದು ಎಂತಹ ಸಂಸ್ಕೃತಿ? ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರಶ್ನಿಸಿದ್ದಾರೆ.
ನಾಳೆ ಸೊರಬದಲ್ಲಿ 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರಲ್ಲಿ ಫೆ.9ರಂದು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಕಡಸೂರು ಬಸವಣ್ಣಪ್ಪ ವೇದಿಕೆಯಲ್ಲಿ ಜರುಗುವ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಮಾಜ ಚಿಂತಕ ರಾಜಪ್ಪ ಮಾಸ್ಟರ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಶ್ರೀ ರಂಗನಾಥ ದೇವಸ್ಥಾನದಿಂದ ಡಾ. ರಾಜ್ ರಂಗಮಂದಿರವರೆಗೆ ವಿವಿಧ ಕಲಾತಂಡಗಳೊಂದಿಗೆ ಶ್ರೀ ಭುವನೇಶ್ವರಿದೇವಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮೆರವಣಿಗೆಗೆ ಚಾಲನೆ ನೀಡುವರು ಎಂದು ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಪಾಣಿ ಸೊರಬದಲ್ಲಿ ಹೇಳಿದ್ದಾರೆ.
ಸಮಾಜದಲ್ಲಿ ಶಾಂತಿ ಸ್ಥಾಪನೆಗೆ ಧರ್ಮ ಪಾಲನೆ ಮುಖ್ಯ: ಶ್ರೀಗಳು
ಸಮಾಜದಲ್ಲಿ ವಿಪರೀತವಾಗಿರುವ ಅಶಾಂತಿ ಶಮನಗೊಳ್ಳಲು ಪ್ರತಿಯೊಬ್ಬರೂ ಧರ್ಮ ಮಾರ್ಗದಲ್ಲಿ ಮುನ್ನಡೆಯುವುದು ಅವಶ್ಯಕ. ಜನವಸತಿ ಇಲ್ಲದ ಪ್ರದೇಶದಲ್ಲಿ ಮಠವೊಂದನ್ನು ಕಟ್ಟಿ ಅಭಿವೃದ್ಧಿಗೊಳಿಸಿರುವ ಪೀಠಾಧಿಪತಿ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳ ಕ್ರಿಯಾಶೀಲತೆ ಎಲ್ಲರ ಮೆಚ್ಚುಗೆ ಗಳಿಸಿದೆ. ಇದಕ್ಕೆ ಕೈಗೂಡಿಸಿರುವ ಭಕ್ತರ ಸಹಕಾರವೂ ದೊಡ್ಡದು. ಶ್ರೀ ಜಗದ್ಗುರು ರೇಣುಕಾಚಾರ್ಯರ 36 ಅಡಿ ಎತ್ತರದ ಮಂಗಲ ಮೂರ್ತಿ ಸುಂದರವಾಗಿ ನಿರ್ಮಾಣವಾಗಿದೆ ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶಿಕಾರಿಪುರದಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 490
  • next >
Top Stories
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved