• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿನ ಗಂಟಲಲ್ಲಿ ಸಿಲುಕಿದ ಮೀನು!: ಸರ್ಜಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಚಿಕಿತ್ಸೆ
ಮನೆಯಲ್ಲಿ ಆಟವಾಡುವಾಗ ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಹೊನ್ನಾಳಿ ತಾಲೂಕಿನ ನ್ಯಾಮತಿ ಹತ್ತಿರದ ಗಂಜೇನಹಳ್ಳಿಯ ಯೋಗೀಶ್‌ ಮತ್ತು ರೋಜಾ ದಂಪತಿಯ 11 ತಿಂಗಳ ಮಗು ಪ್ರತೀಕ್‌ ಮನೆಯೊಳಗೆ ಆಟವಾಡುತ್ತಿತ್ತು. ಈ ವೇಳೆ ಮೀನನ್ನು ನುಂಗಿದೆ. ಇದನ್ನು ಗಮನಿಸಿದ ಪೋಷಕರು ತಕ್ಷಣವೇ ಮೀನನ್ನು ಹೊರತೆಗೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಯಶಸ್ವಿ ಆಗಿರಲಿಲ್ಲ. ಅಷ್ಟೊತ್ತಿಗಾಗಲೇ ಮಗುವಿನ ಸ್ಥಿತಿಯು ಗಂಭೀರವಾಗಿತ್ತು. ಬಳಿಕ ಪೋಷಕರು ಮಗುವನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ಕರೆ ತಂದಿದ್ದರು. ಕೂಡಲೇ ತಪಾಸಣೆ ನಡೆಸಿದ ತಜ್ಞವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ, ಗಂಟಲಲ್ಲಿ ಸಿಕ್ಕಿಕೊಂಡಿದ್ದ 11.3 ಸೆಂ.ಮೀ. ಉದ್ದದ ಮೀನನ್ನು ಹೊರತೆಗೆದು ಮಗುವಿನ ಜೀವ ಉಳಿಸಿದ್ದಾರೆ.
ಪಿಸಿಪಿಎನ್‍ಡಿಟಿ ಕಾಯ್ದೆ ಜಾರಿ ಪರಿಣಾಮಕಾರಿ ಆಗಿರಲಿ
ಸಮಾಜದಲ್ಲಿ ಲಿಂಗಾನುಪಾತದ ಅಸಮತೋಲನ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳನ್ನು ತಡೆಗಟ್ಟಲು ಪಿಸಿಪಿಎನ್‍ಡಿಟಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಕಾರಿ ಅನುಷ್ಠಾನ ಆಗಬೇಕು. ಭ್ರೂಣಲಿಂಗ ಪತ್ತೆ ಕಾನೂನಿಗೆ ವಿರುದ್ಧ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಸಾಮಾನ್ಯವಾಗಿ ಎಲ್ಲರಿಗೂ ತಮ್ಮ ತಾಯಿ, ಸಹೋದರಿ, ಪತ್ನಿ ಹೀಗೆ ಮನೆಯ ಹೆಣ್ಣುಮಕ್ಕಳೇ ಅತ್ಯಂತ ಪ್ರೀತಿ ಪಾತ್ರರಾಗಿರುತ್ತಾರೆ. ಆದರೆ, ಹುಟ್ಟುವ ಮಗು ಹೆಣ್ಣು ಆಗಬಾರದೆಂಬುದು ಸರಿಯಲ್ಲ. ಈ ಮನಸ್ಥಿತಿ ಬದಲಾಗಬೇಕು. ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾದರೆ ಇಡೀ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದು ಆರೋಗ್ಯ-ಕುಟುಂಬ ಕಲ್ಯಾಣ ಸೇವೆಗಳ ಪಿಸಿಪಿಎನ್‍ಡಿಟಿ ಉಪನಿರ್ದೇಶಕ ಡಾ.ವಿವೇಕ್ ದೊರೈ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ರಾಜಪ್ಪ ಮಾಸ್ತರ್ ಸುಸಂಸ್ಕೃತ ವ್ಯಕ್ತಿಗಳ ರೂಪಿಸುವ ಕಾರ್ಖಾನೆ
ಶಿಕ್ಷಕ ವೃತ್ತಿ ಮೂಲಕ ಸುಸಂಸ್ಕೃತ ವ್ಯಕ್ತಿಯನ್ನು ರೂಪಿಸುವ ಕಾರ್ಖಾನೆ ಆಗಿರುವ ಸಮಾಜ ಚಿಂತಕ ರಾಜಪ್ಪ ಮಾಸ್ತರ್ ಅವರನ್ನು 9ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಅವರ ಹಿರಿತನ ಮತ್ತು ಸಾಮಾಜಿಕ ಚಳವಳಿಗೆ ಸಂದ ಗೌರವವಾಗಿದೆ. ಸೊರಬ ಪಟ್ಟಣದಲ್ಲಿ ಫೆ.9ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನ ಪ್ರತಿಯೊಬ್ಬರಿಗೂ ಹಬ್ಬವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಂಸ್ಕೃತಿಕ ಜಗಲಿ ಸದಸ್ಯರು ಇಡೀ ದಿನ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ರಾಜಪ್ಪ ಮಾಸ್ತರ್ ಅವರ ಸರ್ವಾಧ್ಯಕ್ಷತೆಯ ಕನ್ನಡದ ಜಾತ್ರೆ ಯಶಸ್ವಿಯಾಗಲು ತಾವೆಲ್ಲರೂ ಸಹಕಾರ ನೀಡಬೇಕು ಎಂದು ಕನ್ನಡ ಸಾಂಸ್ಕೃತಿಕ ಜಗಲಿ ಸಂಚಾಲಕ ಎನ್.ಷಣ್ಮುಖಾಚಾರ್ ಸೊರಬದಲ್ಲಿ ಹೇಳಿದ್ದಾರೆ.
ಕೆಎಫ್‌ಡಿ ಚಿಕಿತ್ಸೆ ಪಡೆಯುತ್ತಿರುವವರ ಅಗತ್ಯವಿದ್ದರೆ ಮಣಿಪಾಲ ಆಸ್ಪತ್ರೆಗೆ ತೆರಳಿ
ಸಾಗರ ಪಟ್ಟಣದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವವರು ಅಗತ್ಯವಿದ್ದಲ್ಲಿ ಮಣಿಪಾಲದ ಆಸ್ಪತ್ರೆಗೆ ತೆರಳಬಹುದು. ಇದಕ್ಕಾಗಿ ಅಲ್ಲಿನ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳಿಗೆ ಒತ್ತು ನೀಡಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸುವ ಕಾರ್ಯ ಚುರುಕುಗೊಂಡಿದೆ. ಸಾರ್ವಜನಿಕರು ಮಂಗನ ಕಾಯಿಲೆ ಬಗ್ಗೆ ಎಚ್ಚರಿಕೆ ವಹಿಸಬೇಕು. ನಿರ್ದಿಷ್ಟವಾದ ಚಿಕಿತ್ಸೆಇಲ್ಲದಿರುವುದರಿಂದ ಒಂದು ಹಂತದ ಲಸಿಕೆಗಳನ್ನು ನೀಡಲಾಗಿದೆ. ಡಿಎಂಪಿ ಎಣ್ಣೆಯನ್ನು ಗ್ರಾಮ ಪಂಚಾಯತಿ, ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಕಾಡಿನ ಸಂಪರ್ಕದಲ್ಲಿ ಇರುವವರು ಕಟ್ಟುನಿಟ್ಟಾಗಿ ಇದನ್ನು ಬಳಸಬೇಕು ಎಂದು ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಬೀದಿಗೆ ಬಿದ್ದ ಕಾಂಗ್ರೆಸ್ ಬೇಗುದಿ

ಸಮರ್ಥ ನಾಯಕತ್ವವಿಲ್ಲದ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ವೇಳೆಯಲ್ಲಿಯೇ ಒಳಜಗಳದ ಬೇಗುದಿ ಜೋರಾಗುತ್ತಿದೆ. ಆರೋಪ- ಪ್ರತ್ಯಾರೋಪಗಳು, ವ್ಯಂಗ್ಯದ ನುಡಿಮುತ್ತುಗಳು ಢಾಳಾಗಿ ಹೊರಬರಲಾರಂಭಿಸಿದೆ. ಮನೆಯೊಳಗಿನ ಜಗಳವೀಗ ಬೀದಿಗೆ ಬರಲಾರಂಭಿಸಿದೆ.

ಮೊಬೈಲ್‌ನಲ್ಲಿ ಸಂಭಾಷಿಸುತ್ತ ಬಸ್‌ ಚಾಲನೆ: ₹5 ಸಾವಿರು ದಂಡ
ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಚಲಾಯಿಸಿದ ಶಿವಮೊಗ್ಗ ನಗರದ ಸಿಟಿ ಬಸ್‌ ಚಾಲಕನಿಗೆ ₹5 ಸಾವಿರ ದಂಡ ವಿಧಿಸಿರುವ ಘಟನೆ ಸೋಮವಾರ ನಡೆದಿದೆ. ಮೊಬೈಲ್‌ನಲ್ಲಿ ಮಾತನಾಡುತ್ತ ಬಸ್‌ ಚಲಾಯಿಸುತ್ತಿದ್ದ ಚಾಲಕನ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸಂಚಾರ ಠಾಣೆ ಪೊಲೀಸರಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಚಾಲಕನಿಗೆ ದಂಡ ವಿಧಿಸಿದ್ದಾರೆ.
ಕಬರಸ್ತಾನದಲ್ಲಿ ಕೊಂಬೆ ಕಡಿದ ಘಟನೆಗೆ ಹಲ್ಲೆ: ನಾಲ್ವರ ಬಂಧನ
ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹೊಸ ಜಂಬರಘಟ್ಟೆಯ ಕಬರಸ್ಥಾನದ ಜಾಗದಲ್ಲಿ ಭಾನುವಾರ ಅಕೇಶಿಯಾ ಮರದ ಕೊಂಬೆ ಕಡಿದ ವಿಚಾರಕ್ಕೆ ಎರಡು ಕೋಮುಗಳ ಮಧ್ಯೆ ನಡೆದ ಗಲಾಟೆ ಗಂಭೀರ ರೂಪ ಪಡೆದು ಈಗ ಹೊಳೆಹೊನ್ನೂರು ಠಾಣೆ ಮೇಟ್ಟಿಲೇರಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಎಂಬಾತ ಜೀವನೋಪಾಯಕ್ಕಾಗಿ ಕುರಿಗಳನ್ನು ಸಾಕಿಕೊಂಡಿದ್ದ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದಿದ್ದ ಕಾರಣ ಹೊಸಗೂಟಕ್ಕಾಗಿ ಕಬರಸ್ಥಾನದ ಬಳಿ ಇದ ಅಕೇಶಿಯಾ ಮರದಿಂದ ಕೊಂಬೆಯೊಂದನ್ನು ಕಡಿದುಕೊಂಡು, ಕುರಿ ಕಟ್ಟಲು ಬೇಕಾದ ಗೂಟವಾಗಿ ಸಿದ್ಧಪಡಿಸಿಕೊಂಡಿದ್ದ. ಇದನ್ನು ಕಂಡ ಕೆಲ ಮುಸ್ಲಿಂ ಯುವಕರು ರವಿ ಅವರನ್ನು ತಡೆದು, ಪ್ರಶ್ನಿಸಿ ಹಲ್ಲೆಗೆ ಮುಂದಾಗಿದ್ದಾರೆ. ರಾಜಿ ಸಂಧಾನ ನಡೆಸಿದರೂ ಫಲ ನೀಡಿಲ್ಲ.
ಕೆಎಫ್‌ಡಿ ಉಲ್ಬಣ: ಮತ್ತೆ ಮರುಕಳಿಸುತ್ತಾ ಅರಳಗೋಡು ಘಟನೆ?
ಕೊರೋನಾ ಕಾಲದಲ್ಲಿ ತಣ್ಣಗಾಗಿದ್ದ ಕೆಎಫ್‌ಡಿ ಕಾಯಿಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷ ಆರಂಭದಲ್ಲೇ ಕಾಡಲಾರಂಭಿಸಿದೆ. ಅದರಲ್ಲೂ ಭಾನುವಾರ (ಫೆ.4) ಒಂದೇ ದಿನ 11 ಮಂದಿಯಲ್ಲಿ ಕೆಎಫ್‌ಡಿ ಸೋಂಕು ಕಾಣಿಸಿದ್ದು, 2019ರಲ್ಲಿ ಅರಳಗೋಡಿನಲ್ಲಿ ಮರಣ ಮೃದಂಗ ಬಾರಿಸಿದ್ದ ಕೆಎಫ್‌ಡಿ ಮತ್ತೆ ಜಿಲ್ಲೆಯಲ್ಲಿ ಮರುಕಳಿಸಲಿದೆಯೇ ಎಂಬ ಆತಂಕವನ್ನು ಹೆಚ್ಚಿಸಿದೆ. ಕಳೆದ 15 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮಳೆ ಕಡಿಮೆ ಇರುವ ವರ್ಷಗಳಲ್ಲೇ ಕೆಎಫ್‌ಡಿ ಅಬ್ಬರ ಹೆಚ್ಚಿದೆ. 2019ರಲ್ಲಿ ಸಾಗರದಲ್ಲಿ ತಾಲೂಕಿನ ಅರಳಗೋಡುನಲ್ಲಿ ಕೆಎಫ್‌ಡಿ ಸ್ಫೋಟಗೊಂಡಿತ್ತು. 2018ರ ನವೆಂಬರ್‌ನುಂದ 2019ರ ಜೂನ್‌ವರೆಗೆ ಅರಳಗೋಡಿನಲ್ಲಿ ಭಾರೀ ಪ್ರಕರಣದ ಪ್ರಕರಣಗಳು ಕಂಡಿಬಂದಿದ್ದವು. ಅದೇ ವರ್ಷ ಬರೊಬ್ಬರಿ 15 ಮಂದಿ ಈ ಕಾಯಿಲೆಗೆ ಬಲಿಯಾಗಿದ್ದರು.
ಮಕ್ಕಳ ಹಕ್ಕು ರಕ್ಷಿಸಲು ಸಮನ್ವಯ ಸೇವೆ ಅಗತ್ಯ
ದಿನೇದಿನೇ ಮಕ್ಕಳ ವಿರುದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಒಟ್ಟು 102 ಬಾಲ್ಯವಿವಾಹ ಪ್ರಕರಣ, 156 ಪೋಕ್ಸೋ, 247 ಹದಿಹರೆಯದವರ ಗರ್ಭಧಾರಣೆ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಜೆಜೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ, ಆರ್‌ಟಿಇ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆ, ಕಾನೂನುಗಳಿವೆ. ಆದರೂ, ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಹಾಗಾದರೆ, ಕಾಯ್ದೆ ಕಾನೂನು ಸಮರ್ಪಕ ಅನುಷ್ಠಾನ ಆಗುತ್ತಿಲ್ಲವಾ? ಪಾಲನೆಯಾಗುತ್ತಿಲ್ಲವಾ ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ. ಕೊಳ್ಳ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಜನಪ್ರೀತಿ ಗಳಿಸಿದ್ದ ಹಫೀಜ್‌ ವೃತ್ತಿನೀತಿ ಮಾದರಿ: ರಾಜು
ಜಾತಿ ಮೀರಿ ಜನರ ಪ್ರೀತಿ ಗಳಿಸಿದ ಸಮಾಜ ಸೇವಕ, ಕಲಾವಿದ ಹಫೀಜ್. ಈತ ಕೇವಲ ಕಲಾವಿದನಾಗಿರದೇ ವೃತ್ತಿಯ ನಡುವೆಯೇ ದುಡಿದ ಬಹುಪಾಲು ಹಣ ಸಮಾಜ ಸೇವೆಗೆ ವಿನಿಯೋಗಿಸಿದ ಮಾದರಿ ವ್ಯಕ್ತಿ ಆಗಿದ್ದಾರೆ. ಸಮಾಜದ ಪ್ರಾಮಾಣಿಕ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಶ್ರಮಿಸುತ್ತಿದೆ. ಕಲಾವಿದ ಹಫೀಜ್ ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೇ ಎಲ್ಲ ವರ್ಗದವರ ಜೊತೆ ಬೆರೆತು, ಸಮಾಜ ಸೇವಕರಾಗಿ, ವೃತ್ತಿಯಲ್ಲಿ ಕ್ರಿಯಾಶೀಲತೆ ಮೆರೆಯುತ್ತಿದ್ದ ವ್ಯಕ್ತಿ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಭದ್ರಾವತಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 490
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved